Get Updates
Get notified of breaking news, exclusive insights, and must-see stories!

CET Exam Row: ಪರೀಕ್ಷೆ ಶುದ್ಧತೆ, ಮಾರ್ಗಸೂಚಿ, ಧಾರ್ಮಿಕ ಸ್ವಾತಂತ್ರ್ಯ ಬಗ್ಗೆ ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು, ಏಪ್ರಿಲ್ 22: ದ್ವಿತೀಯ ಪಿಸಿಯು ಪೂರ್ಣಗೊಳಿಸಿದ ಅಭ್ಯರ್ಥಿಗಳ ಸಾಮಾನ್ಯ ಪ್ರವೇಶ ಪರೀಕ್ಷೆ (CET 2025) ವೇಳೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಆದಿಯಾಗಿ, ಕಾಂಗ್ರೆಸ್ ಸಚಿವರು, ಶಾಸಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಗರಂ ಆಗಿರುವ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ.

CET ಪರೀಕ್ಷೆ ಬರೆಯಲು ಕೇಂದ್ರಕ್ಕೆ ತೆರಳಿದಾಗ ತಪಾಸಣೆಗಾರರು ವಿಧ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಈ ಪ್ರಕರಣವು ತೀವ್ರ ನಮಗೆ ಆಘಾತ ತಂದಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಇದನ್ನು ನಾವು ಖಂಡಿಸುತ್ತೇವೆ. ಇನ್ನೂ ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ‌ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವರು ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ. ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಎಂದು ಸಚಿವರ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

CET Janivara Remove Ramalinga Reddy Seeks Review of Exam Dress Code to Protect Religious Freedom

ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು (ಕಳೆದ ಬಾರಿಯ KAS ಪರೀಕ್ಷೆಯಲ್ಲಿ ನಡೆದ ಘಟನೆ) ಹಿಜಾಬ್ ತೆಗೆಸುವುದು ಸರಿಯಲ್ಲ. ಅದು ಒಬ್ಬ ವ್ಯಕ್ತಿಯ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಕೆಲಸವಾಗುತ್ತದೆ. ಇಂತಹ ನಡೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪರೀಕ್ಷಾ ಪ್ರಾಧಿಕಾರಗಳೇ ಮಾಡಿರುವ ಕಾನೂನು ಹಾಗೂ ವಸ್ತ್ರ ಸಂಹಿತೆ (Dress Code) ನಿಯಮಗಳು ಭಾರತದಾದ್ಯಂತ ಅನ್ವಯವಾಗುತ್ತವೆ. ಈ ನಿಯಮಕ್ಕೂ ಸಿದ್ದರಾಮಯ್ಯ ಸರ್ಕಾರಕ್ಕೂ ಅಥವಾ ನಿಯಮ ಪಾಲನೆ ಮಾಡಿದ ಪರೀಕ್ಷಾ ಕೇಂದ್ರದ ತಪಾಸಕರಿಗೂ ಯಾವ ರೀತಿಯ ಸಂಬಂಧ ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Take a Poll

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಸ್ತ್ರ ಸಂಹಿತೆ NEET, CET ಪರೀಕ್ಷೆಗಳಲ್ಲಿ ನಿಷ್ಪಕ್ಷಪಾತತೆ ಮತ್ತು ಶುದ್ಧತೆಯನ್ನು ಕಾಪಾಡುವ ಉದ್ದೇಶ ಒಳಿತೆ. ಆದರೆ ಕೇಂದ್ರ ಸರ್ಕಾರದ ಪರೀಕ್ಷಾ ಮಾರ್ಗಸೂಚಿಗಳಲ್ಲಿ ಕೆಲವೊಂದನ್ನು ಮಾರ್ಪಾಡು ಮಾಡಿ ಧಾರ್ಮಿಕ ಸ್ವಾತಂತ್ರ್ಯ ಕಾಪಾಡಲು, ರಕ್ಷಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಅವರು ಪತ್ರ ಮೂಲಕ ಆಗ್ರಹಿಸಿದ್ದಾರೆ.

ಈ ಪರೀಕ್ಷೆಗೆ ನಿಷಿದ್ಧ

ಕೇಂದ್ರ ಸರ್ಕಾರದ NEET ಪರೀಕ್ಷೆಯು National Testing Agency (NTA) ಮೂಲಕ ನಡೆಯುವ ಪರೀಕ್ಷೆ. CET ಪರೀಕ್ಷೆಯು ರಾಜ್ಯ ಮಟ್ಟದಿದ್ದರೂ, ತಂತ್ರಜ್ಞಾನ ಮೂಲಕದ ನಕಲು ತಡೆಗೆ ಕೇಂದ್ರದ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲಾ ಶಿಕ್ಷಣ ಇಲಾಖೆಯೂ ಅನುಸರಿಸುತ್ತದೆ.

ಪರೀಕ್ಷೆಗೆ ಉದ್ದ ಶರ್ಟ್, ಜಾಕೆಟ್, ಕೋಟ್, ಕೈದಾರ, ಜನಿವಾರ, ಬೂಟ್, ಕೈಗೆ ಯಾವುದೇ ದಾರ, ವಾಚು, ದಪ್ಪ/ಅತಿಯಾದ ಮೇಕಪ್, ಗಟ್ಟಿ ಅಲಂಕಾರ,ದುಪ್ಪಟ,ಚೈನ್ ಕಿವಿ ಗೆಜ್ಜೆ, ಸರ, ಉಂಗುರ, ಎಲ್ಲಾ ಆಭರಣಗಳ ಧಾರಣೆ, ಮುಚ್ಚಿದ ಪಾದರಕ್ಷೆ ನಿಷಿದ್ಧವಾಗಿದೆ.

ಪರೀಕ್ಷೆ ಶುದ್ಧತೆ ಜೊತೆಗೆ ಧಾರ್ಮಿಕ ಸ್ವಾತಂತ್ರ್ಯವೂ ಕಾಪಾಡಿ

ಸುಪ್ರೀಂ ಕೋರ್ಟ್ ಅನ್ವಯ, ಧಾರ್ಮಿಕ ಆಚರಣೆಗೆ ಹಕ್ಕಿದೆ ಆದರೆ ಪರೀಕ್ಷಾ ಕೇಂದ್ರದ ಭದ್ರತೆ ತಪಾಸಣೆಯ ನಂತರ ಮಾತ್ರ ಧರಿಸಲು ಅನುಮತಿ ಇದೆ. 'ಪರೀಕ್ಷೆಯಲ್ಲಿ ಶುದ್ಧತೆಯನ್ನು ಕಾಪಾಡುವುದು ಪ್ರಧಾನ, ಆದರೆ ಧಾರ್ಮಿಕ ಸ್ವಾತಂತ್ರ್ಯವನ್ನು ನಿರ್ಲಕ್ಷಿಸಬಾರದು' ಎಂಬ ಸಮತೋಲನದ ತೀರ್ಪನ್ನು ಮಾನ್ಯ ನ್ಯಾಯಾಲಯಗಳು ಈಗಗಲೇ ನೀಡಿವೆ ಎಂದು ಸಚಿವರ ಗಮನಕ್ಕೆ ತಂದರು.

ಕೇಂದ್ರಕ್ಕೆ ಪತ್ರ ಬರೆದು ಕ್ರಮ ವಹಿಸಿ..

ಸದರಿ ಈ ಎಲ್ಲ ಅಂಶಗಳನ್ನು ಗಮನಿಸಿ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರಕ್ಕೆ‌‌ ಪತ್ರ ಬರೆಯಬೇಕು. ಪರೀಕ್ಷಾ ಮಾರ್ಗ ಸೂಚಿಯ ವಸ್ತ್ರಸಂಹಿತೆ ನೀತಿಯಲ್ಲಿ ಅವಶ್ಯಕ ಬದಲಾವಣೆ‌ ಮಾಡುವಂತೆ ಕೋರಬೇಕು. ಈ ಕುರಿತು ಕೂಡಲೇ ಮುಂದಿನ ಕ್ರಮ ಕೈಗೊಳ್ಳುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+