Breaking; ಬೆಂಗಳೂರು ನಗರಕ್ಕೆ ಹೊಸ ಪೊಲೀಸ್ ಆಯುಕ್ತರ ನೇಮಕ
ಬೆಂಗಳೂರು, ಮೇ16: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸಿ. ಹೆಚ್. ಪ್ರತಾಪ್ ರೆಡ್ಡಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸಿ. ಹೆಚ್. ಪ್ರತಾಪ್ ರೆಡ್ಡಿ ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿದ್ದಾರೆ. ಇನ್ನು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ಡಿಜಿಪಿ ನೇಮಕಾತಿ ವಿಭಾಗಕ್ಕೆ ವರ್ಗಾವಣೆ ಆಗಿದ್ದಾರೆ.
ಕಮಲ್ ಪಂಥ್ ನಗರ ಪೊಲೀಸ್ ಆಯುಕ್ತರಾಗಿ ಸುದೀರ್ಘವಧಿಯಲ್ಲಿದ್ದರು. ಡಿಜಿಪಿಯಾಗಿ ಬಡ್ತಿ ಸಿಕ್ಕ ಬಳಿಕವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆಯನ್ನು ಮುದುವರೆಸಿದ್ದರು. ಎಡಿಜಿಪಿ rankನ ಅಧಿಕಾರಿಗಳು ನಗರ ಪೊಲೀಸ್ ಆಯುಕ್ತರ ಹುದ್ದೆಯನ್ನು ನಿರ್ವಹಿಸುವುದರಿಂದ ನಗರ ಪೊಲೀಸ್ ಆಯುಕ್ತರಾಗಲು ಬಹಳಷ್ಟು ಐಪಿಎಸ್ ಅಧಿಕಾರಿಗಳು ಪ್ರಯತ್ನವನ್ನು ಪಟ್ಟಿದ್ದರು.
ಇನ್ನು ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹೆಸರನ್ನು ಮಾಡಿರುವ ಸಿ. ಹೆಚ್. ಪ್ರತಾಪ್ ರೆಡ್ಡಿಯವರು ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
Recommended Video