ಪೊಲೀಸರ ಬಲೆಗೆ ಬಿದ್ದ ಸರಗಳ್ಳ ಪಲ್ಸರ್ ಬಾಬು
ನಗರದಲ್ಲಿ ನಡೆದ ಹಲವಾರು ಸರಗಳ್ಳ ಪ್ರಕರಗಳಲ್ಲಿ ಈ ಪಲ್ಸರ್ ಬಾಬು ಬಂಧಿಸಲು ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು. ಕೊನೆಗೂ ಈತ ಸೋಮವಾರ ಬಂಧಿಯಾಗಿದ್ದಾನೆ.
ಬೆಂಗಳೂರು, ಮೇ 22: ಕಪ್ಪು ಬಣ್ಣದ ಸ್ಕೂಟರ್ ನಲ್ಲಿ ಬಂದು ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ, ಪಲ್ಸರ್ ಬಾಬು ಎಂದೇ ಕುಖ್ಯಾತಿ ಪಡೆದಿದ್ದ ಬಾಬುವನ್ನು ಸೆರೆ ಹಿಡಿಯುವಲ್ಲಿ ಉಪ್ಪಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದಲ್ಲಿ ನಡೆದ ಹಲವಾರು ಸರಗಳ್ಳ ಪ್ರಕರಗಳಲ್ಲಿ ಈತನನ್ನು ಬಂಧಿಸಲು ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು. ಕೊನೆಗೂ ಈತ ಸೋಮವಾರ ಬಂಧಿಯಾಗಿದ್ದಾನೆ.

ಈತ, ಗೊಟ್ಟಿಗೆರೆಯ ಹನುಮಾನ್ ನಗರದವ ಎಂದು ಪೊಲೀಸರು ತಿಳಿಸಿದ್ದು, ಕಳೆದ ಹಲವಾರು ತಿಂಗಳುಗಳಿಂದ, ನಗರದ ನಾನಾ ಭಾಗಗಳಲ್ಲಿ ಕಳ್ಳತನ ನಡೆಸುತ್ತಿದ್ದ.
ಮೂಲತಃ ಚನ್ನಪಟ್ಟಣದವರನಾದ ಆರೋಪಿಯು ಈ ಹಿಂದೆ ರಾಜೇಶ, ಗುಂಡ ಎಂಬ ಹೆಸರುಗಳಿಂದಲೂ ತನ್ನನ್ನು ಪರಿಚಯಿಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ. ಬಸವೇಶ್ವರ ನಗರ, ಕಾಟನ್ ಪೇಟೆ, ಪುಟ್ಟೇನ ಹಳ್ಳಿ, ಕಲಾಸಿಪಾಳ್ಯ, ಕೋಣನ ಕುಂಟೆ, ಗಿರಿ ನಗರ, ಚಂದ್ರಾ ಲೇಔಟ್ ಹಾಗೂ ಇನ್ನಿತರ ಕಡೆಗಳಲ್ಲಿ ತನ್ನ ಚಾಲಾಕಿ ತನ ತೋರುತ್ತಿದ್ದ.
ಸಾಮಾನ್ಯವಾಗಿ ರಸ್ತೆಯಲ್ಲಿ ಹೋಗುತ್ತಿರುವ ಒಂಟಿ ಮಹಿಳೆಯರೇ ಈತನ ಕುಕೃತ್ಯಗಳಿಗೆ ಟಾರ್ಗೆಟ್ ಆಗುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಗಿದ್ದು, ಬಂಧಿತನಿಂದ 17 ಲಕ್ಷ 70 ಸಾವಿರ ಮೌಲ್ಯದ 610 ಗ್ರಾಂ ತೂಕದ 15 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆಯಲ್ಲದೆ, ಸುಮಾರು 16 ಸರಗಳವು ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications