ಬಾಲಿವುಡ್ ನಟ ಶಾರುಖ್ ಖಾನ್ಗೆ ಕುಟುಕಿದ ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು, ಜನವರಿ 23: ಬಾಲಿವುಡ್ ನಟ ಶಾರುಖ್ ಖಾನ್ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ್ದರ ಬಗ್ಗೆ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅಣಕವಾಡಿದ್ದಾರೆ.
ಗುರುವಾರ ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಸೂಲಿಬೆಲೆ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ, ಶಾರುಖ್ ಖಾನ್ ಕ್ಯಾರವಾನ್ ಇಳಿದು ಬರುತ್ತಾ ಸೇದಿದ ಸಿಗರೇಟ್ನ್ನು ರಸ್ತೆಯಲ್ಲೇ ಎಸೆಯುತ್ತಾರೆ. ಆಗ ಅವರ ಅಂಗ ರಕ್ಷಕ ಆ ಸಿಗರೇಟ್ನ್ನು ಕಾಲಿನಿಂದ ತುಳಿದು ಆರಿಸುತ್ತಾರೆ.

''ಬಾಲಿವುಡ್ ಬಾದಶಾ ಇಲ್ಲಿ ಏನು ಮಾಡುತ್ತಿದ್ದಾರೆ ನೋಡಿ? ಭವಿಷ್ಯದ ಭಾರತಕ್ಕೆ ಈ ರೀತಿ ಪಾಠ ಮಾಡುತ್ತಿರಬಹುದಾ?'' ಎಂದು ಸೂಲಿಬೆಲೆ ಅಣಕ ಆಡಿದ್ದಾರೆ. ಈ ವಿಡಿಯೋ ಎಲ್ಲಿ ನಡೆದಿದ್ದು ಎಂಬುದರ ಬಗ್ಗೆ ತಿಳಿದು ಬಂದಿಲ್ಲ. ಸಾರ್ವಜನಿಕ ಸ್ವಚ್ಛತೆ ಬಗ್ಗೆ ಮಾದರಿಯಾಗಬೇಕಿದ್ದ, ಬಾಲಿವುಡ್ ನಟ ಈ ರೀತಿ ನಡೆದುಕೊಂಡಿದ್ದಕ್ಕೆ ನೆಟ್ಟಿಗರು ಅಸಮಾಧಾನ ತೋರ್ಪಡಿಸಿದ್ದಾರೆ.
What @iamsrk doing here? Teaching a lesson to the future India!! pic.twitter.com/3ofx0acutp
— Chakravarty Sulibele (@astitvam) January 23, 2020
ಈ ವಿಷಯದ ಬಗ್ಗೆ ನೆಟ್ಟಿಗರು ಸೂಲಿಬೆಲೆ ಕಾಲೆಳದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದರ ಬಗ್ಗೆ ಏನೂ ಮಾತಾಡುತ್ತಿಲ್ವಲ್ಲ? ಈ ವಿಡಿಯೋ ಎಲ್ಲಿಂದ ಎತ್ತಾಕಿಕೊಂಡು ಬಂದಿದ್ದೀರಾ? ಎಂದು ಷರೀಫ್ ಕೋಡಿಪಾಳ್ಯ ಎನ್ನುವರು ಸೂಲಿಬೆಲೆ ಕೆಣಕಿದ್ದಾರೆ. ಇನ್ನೂ ಕೆಲವರು ಶಿವಸೇನೆಯ ಬಾಳಾ ಠಾಕ್ರೆ ಸಿಗರೇಟ್ ಸೇದುವ ಫೋಟೊ ಹಾಕಿ ಕಾಲೆಳದಿದ್ದಾರೆ. ವಿಜಯ್ ಎನ್ನುವರು, ''ಏನಪ್ಪಾ ಚಕ್ರವರ್ತಿ ನೆನ್ನೆ ಮಂಗಳೂರಿನಲ್ಲಿ ಬಾಂಬ್ ಇಟ್ಟವನ ಬಗ್ಗೆ ಟ್ವೀಟ್ ಮಾಡ್ಲೆ ಇಲ್ಲ ಯಾಕೆ ಅವನು ಹಿಂದೂ ಅಂತಾನಾ...? ಇಲ್ಲಿ ಒಬ್ಬ ಸಿಗರೇಟ್ ಇಟ್ಟಿದಕ್ಕೆ ನಿನ್ನ ಪೌರುಷ ತೋರಿಸ್ತಾ ಇದ್ದೀಯ?'' ಎಂದು ಸೂಲಿಬೆಲೆ ಯಾವಾಗಲೂ ಇಬ್ಬಗೆಯ ನೀತಿಯನ್ನು ಟ್ವಿಟ್ಟರ್ನಲ್ಲಿ ಅನುಸರಿಸುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications