ಲವರ್ ಸ್ನೇಹಿತೆಯ ಬಾಯ್ ಫ್ರೆಂಡ್ ಬಳಿ ರಾಬರಿ ಮಾಡಿದ ಕಿರಾತಕರು !
ಬೆಂಗಳೂರು, ಮಾರ್ಚ್ 23: ಹಣದ ಮುಂದೆ ಸಂಬಂಧಗಳಿಗೆ ಬೆಲೆಯೇ ಇಲ್ಲ ಬಿಡಿ! ಅಂತದ್ದೊಂದು ಘಟನೆ ಬೆಂಗಳೂರಿನ ಭೈರವೇಶ್ವರ ನಗರದಲ್ಲಿ ನಡೆದಿದೆ. ಅಂದಹಾಗೆ ಲವರ್ ಸ್ನೇಹಿತೆ ನೀಡಿದ ಟಿಪ್ಸ್ನಿಂದ ಪಶ್ಚಿಮ ಬಂಗಾಳದ ಯುವಕನನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
Recommended Video
ಜಾಕೀರ್ ಹುಸೇನ್, ಶಾಬಾಜ್ ಖಾನ್, ಫಾಜಿಲ್ ಬಂಧಿತ ಅರೋಪಿಗಳು. ಬಂಧಿತರಿಂದ ಮೂರು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಪನ್ ಮಿಥ್ಯಾ, ಚಂದ್ರಾ ಬಡಾವಣೆ ಭೈರವೇಶ್ವರನಗರದಲ್ಲಿದ್ದ ಪ್ರೇಯಸಿ ನಯನಾ ಭೇಟಿ ಮಾಡಲಿಕ್ಕೆ ಫೆ. 13 ರಂದು ಬಂದಿದ್ದಾನೆ. ಚಿಕ್ಕಪೇಟೆ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುವ ಈತ ಬರುವಾಗ ಮೂರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ನೆಕ್ಲೇಸ್ ತಂದಿದ್ದ. ಚುನಾವಣೆಗೆ ಹೋಗುವ ಮುನ್ನ ಭೇಟಿ ಮಾಡಲು ಬಂದಿದ್ದ. ಇದನ್ನು ಗಮನಿಸಿದ್ದ ನಯನಾ ಗೆಳತಿ ಮಾಯಿಯ ಪ್ರಿಯತಮ ಜಾಕೀರ್. ತನ್ನ ಇಬ್ಬರು ಸಹಚರರ ಜತೆಗೆ ಬಂದಿದ್ದ ಜಾಕೀರ್, ಮುಖಕ್ಕೆ ಮಾಸ್ಕ್ ಧರಿಸಿ ಸಪನ್ನನ್ನು ಅಡ್ಡ ಗಟ್ಟಿ ಹೆದರಿಸಿ ಚಿನ್ನಾಭರಣ ಕಸಿದುಕೊಂಡು ಪರಾರಿಯಾಗಿದ್ದಾರೆ.

ತನ್ನ ಲವರ್ ಜಾಕಿರ್ ದರೋಡೆ ಮಾಡಿರುವ ಸಂಗತಿ ಗೊತ್ತಿರಲಿಲ್ಲ. ತನ್ನ ಸ್ನೇಹಿತೆ ನಯನಾ ಜತೆ ಹೋಗಿ ಪೊಲೀಸ್ ಠಾಣೆಗೆ ದೂರು ನೀಡುವಾಗಲೂ ಜತೆಗೆ ಇದ್ದಾಳೆ. ಸಿಸಿಟಿವಿ ಆಧರಿಸಿ ಆರೋಪಿ ಜಾಕೀರ್ ಮತ್ತು ಆತನ ಸಹಚರರನ್ನು ಬಂಧಿಸಿದಾಗ ಸಂಗತಿ ಹೊರಗೆ ಬಿದ್ದಿದೆ. ಸಪನ್ ಮಿಥ್ಯಾ ಪ್ರಿಯತಮೆ ನಯನಾ ಗೆಳತಿ ಮಾಯಿ ಬಾಯ್ ಫ್ರೆಂಡ್ ಜಾಕಿರ್ ಈ ಕೃತ್ಯ ಎಸಗಿರುವ ಸಂಗತಿ ಬೆಳಕಿಗೆ ಬಂದಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications