ದಯವಿಟ್ಟು ಭೂ ಶೋಷಣೆಯನ್ನು ಕಡಿಮೆ ಮಾಡಿ : ಕಂಬಾರ
ಬೆಂಗಳೂರು, ಏ. 22 : ಮಿತಿಮೀರಿ ಭೂಮಾತೆಯ ಶೋಷಣೆ ಮಾಡುತ್ತಿರುವ ಮಾನವ ಭೂಮಿಯ ರಕ್ಷಣೆಯ ಜವಾಬ್ದಾರಿಯನ್ನೂ ತೆಗೆದುಕೊಳ್ಳಬೇಕಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಡಿನ ಹಿರಿಯ ಸಾಹಿತಿ ಹಾಗೂ ಚಿಂತಕ ಡಾ: ಚಂದ್ರಶೇಖರ ಕಂಬಾರರು ಅಭಿಪ್ರಾಯ ಪಟ್ಟಿದ್ದಾರೆ.
ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಹಾಗೂ ಪರಿಸರ-ನಿಸರ್ಗ ಸಂರಕ್ಷಣಾ ಸಂಸ್ಥೆ, ಬೆಂಗಳೂರು ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಭೂ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿರಿಸಂಪಿಗೆ, ಸಂಗ್ಯಾ ಬಾಳ್ಯಾ, ಜೋಕುಮಾರ ಸ್ವಾಮಿ ಮುಂತಾದ ಕೃತಿಗಳನ್ನು ರಚಿಸಿರುವ ಅವರು ಮಾತಿನುದ್ದಕ್ಕೂ ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು.
ಇಂದು ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಪ್ರಕೃತಿ ಸಂರಕ್ಷಣೆ ಬಗ್ಗೆ ಹೆಚ್ಚಿನ ಉದಾಸೀನತೆ ಕಂಡುಬರುತ್ತಿದೆ. ಗ್ರಾಮಗಳಲ್ಲಿ ಹೆಚ್ಚಿನ ಜಾಗ ಲಭ್ಯವಿರುವುದು ಬಿಟ್ಟರೆ ನೈಸರ್ಗಿಕ ಪರಿಸ್ಥಿತಿ ನಗರಗಳಿಗಿಂತ ದಾರುಣವಾಗಿದೆ ಎಂದು ಕಂಬಾರರು ಆತಂಕ ವ್ಯಕ್ತಪಡಿಸಿದರು. [ವಸುಂಧರೆಗೊಂದು ದಿನ]

ಕಡಿದ ಮರಗಳ ಜಾಗದಲ್ಲಿ ಮಾನವ ಮತ್ತೊಂದು ಗಿಡವನ್ನು ನೆಡುವ ಆಲೋಚನೆಯನ್ನೇ ಮಾಡದಿರುವುದು ಅಪಾಯಕಾರಿಯಾಗಲಿದೆ ಎಂದು ಅವರು ಎಚ್ಚರಿಸಿದರು. ಪ್ರಕೃತಿ ಸಂರಕ್ಷಣೆ ಹಾಗೂ ಸಮತೋಲನ ಕಾಪಾಡುವ ದೀಕ್ಷೆಯನ್ನು ಸಮಾರಂಭದಲ್ಲಿ ಉಪಸ್ಥಿತರಿದ್ದವರಿಗೆ ಕಂಬಾರರು ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪರಿಸರ ಹಾಗೂ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ ಅವರು ಮಾತನಾಡಿ, ಇಂದಿನ ಪೋಷಕರು ಪರಿಸರ ಪ್ರೇಮಿಗಳಾದಾಗ ಮಾತ್ರ ಮುಂದಿನ ಪೀಳಿಗೆ ಪರಿಸರ ರಕ್ಷಿಸಲು ಸಾಧ್ಯ ಎಂದರು.
ಸಮಾರಂಭದ ಅಧ್ಯಕ್ಷ ಭಾಷಣ ಮಾಡಿದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಪಿ ಎನ್ ಶ್ರೀನಿವಾಸಚಾರಿ, ತನ್ನ ಹುಟ್ಟುಗುಣಗಳಾದ ಸ್ವಾರ್ಥ, ದುರಾಸೆ ಹಾಗೂ ಶೋಷಣಾ ಮನೋಭಾವದಿಂದಾಗಿ ಜಗತ್ತು ವಿನಾಶದ ಅಂಚಿಗೆ ನಿಧಾನವಾಗಿ ಕರೆದೊಯ್ಯುತ್ತಿರುವ ಮಾನವನು ಜೀವಸಂಕುಲಕ್ಕೆ ಆಧುನಿಕ ರಾಕ್ಷಸನಂತೆ ಪರಿಣಮಿಸಿದ್ದಾನೆ ಎಂದರು. ಈಗಲಾದರೂ, ತನ್ನ ತಪ್ಪಿನ ಅರಿವಾಗಿ, ಕಣ್ತೆರದು ಇರುವ ಸಂಪತ್ತನ್ನು ಕಾಪಾಡಿಕೊಂಡರೆ ಈ ಭೂ ದಿನದ ಆಚರಣೆಯು ಸಾರ್ಥಕವಾಗುತ್ತದೆ ಎಂದು ಅವರು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications