ಮೆಟ್ರೋ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ
ಬೆಂಗಳೂರು, ಜುಲೈ 10: ನಮ್ಮ ಮೆಟ್ರೋ ಎರಡನೇ ಹಂತದ ಲೇನ್ 2 ರ ನಿರ್ಮಾಣ ಕಾಮಗಾರಿಯು ಜಯದೇವಾ ಮೇಲ್ಸೇತುವೆ ಜಂಕ್ಷನ್ ಬಳಿ ಪ್ರಗತಿಯಲ್ಲಿರುವ ಕಾರಣ, ಜಯದೇವ ಜಂಕ್ಷನ್ ಬಳಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಬನ್ನೇರುಘಟ್ಟ ರಸ್ತೆ ಮೂಲಕ ಸಿಲ್ಕ್ ಬೋರ್ಡ್ ಕಡೆಗೆ ಹೋಗುವವರು ಜೆಡಿ ಮರಾ ಜಂಕ್ಷನ್ ಮತ್ತು 9ನೇ ಕ್ರಾಸ್ ರಸ್ತೆ ಕಡೆಗೆ ಎಡ ತಿರುವು ತೆಗೆದುಕೊಂಡು, ನಂತರ ಈಸ್ಟ್ ಎಂಡ್ ಮುಖ್ಯ ರಸ್ತೆಗೆ ಬಲ ತಿರುವು ತೆಗೆದುಕೊಂಡು, ಮತ್ತೆ ಮಾರೇನಹಳ್ಳಿ ಮುಖ್ಯ ರಸ್ತೆ ಕಡೆಗೆ ಬಲ ತಿರುವು ತೆಗೆದುಕೊಂಡು ಸಿಲ್ಕ್ ಬೋರ್ಡ್ ತಲುಪ ಬಹುದಾಗಿದೆ.
ಬನ್ನೇರುಘಟ್ಟ ರಸ್ತೆ ಮೂಲಕ ಸಿಲ್ಕ್ ಬೋರ್ಡ್ಗೆ ತೆರಳಲು ಬೆಂಗಳೂರು ಸಂಚಾರಿ ಪೊಲೀಸರು ಮತ್ತೊಂದು ಮಾರ್ಗವನ್ನು ಸೂಚಿಸಿದ್ದು, 29ನೇ ಮುಖ್ಯ ರಸ್ತೆಯಿಂದ 6ನೇ ಕ್ರಾಸ್ ಜಂಕ್ಷನ್ಗೆ ಬಲ ತಿರುವುದು ತೆಗೆದುಕೊಂಡು ನಂತರ 6ನೇ ಮುಖ್ಯರಸ್ತೆಗೆ ಎಡ ತಿರುವು ಪಡೆದುಕೊಂಡು ಮತ್ತೆ ಮಾರೇನಹಳ್ಳಿ ಮುಖ್ಯ ರಸ್ತೆಗೆ ಬಲ ತಿರುವು ತೆಗೆದುಕೊಂಡು ಸಿಲ್ಕ್ ಬೋರ್ಡ್ ತಲುಪಬಹುದಾಗಿದೆ.

ಸಿಲ್ಕ್ ಬೋರ್ಡ್ ಕಡೆಯಿಂದ ಬನ್ನೇರುಘಟ್ಟ ಕಡೆಗೆ ಸಂಚರಿಸುವವರು, 29ನೇ ಮುಖ್ಯ ರಸ್ತೆಗೆ ಎಡ ತಿರುವು ತೆಗೆದುಕೊಂಡು, 7 ನೇ ಅಡ್ಡ ರಸ್ತೆಗೆ ಅಡ್ಡ ತಿರುವು ತೆಗೆದುಕೊಂಡು ಬನ್ನೇರುಘಟ್ಟ ರಸ್ತೆ ತಲುಪಬಹುದಾಗಿದೆ.
ಜಯದೇವಾ ಅಂಡರ್ಪಾಸ್ನ ಎರಡೂ ಬದಿಯ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಔಟರ್ ರಿಂಗ್ ರಸ್ತೆಯಿಂದ ಬನಶಂಕರಿ ಹಾಗೂ ಸಿಲ್ಕ್ ಬೋರ್ಡ್ ಕಡೆಗೆ ಹೋಗುವ ಮಾರ್ಗದಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಸಂಚಾರಿ ಪೊಲೀಸ್ ವಿಭಾಗ ಹೇಳಿದೆ.
-
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications