ಬೆಂಗಳೂರು; ಬಾಕಿ ಹಣಕ್ಕಾಗಿ ಸಂಬಂಧಿಕರನ್ನು ಕೂಡಿಹಾಕಿದ ಆಸ್ಪತ್ರೆ!
ಬೆಂಗಳೂರು, ಮೇ 30; ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗಳ ಧನ ದಾಹಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಕೋವಿಡ್ನಿಂದ ವ್ಯಕ್ತಿ ಮೃತಪಟ್ಟರೂ ಶವವನ್ನು ಕೊಡದೇ ಜೊತೆಗಿದ್ದ ಸಂಬಂಧಿಕರನ್ನು ಕೂಡಿಹಾಕಿದ ಘಟನೆ ನಡೆದಿದೆ.
42 ವರ್ಷದ ಲಕ್ಷ್ಮೀ ನಾರಾಯಣ ಚನ್ನಸಂದ್ರದ ಖಾಸಗಿ ಆಸ್ಪತ್ರೆಗೆ ಮೇ 17ರಂದು ದಾಖಲಾಗಿದ್ದರು. ಕೋವಿಡ್ ಸೋಂಕು ತಗುಲಿದ್ದ ಅವರು ಮೇ 27ರಂದು ಮೃತಪಟ್ಟಿದ್ದರು. ಒಟ್ಟು 8.17 ಲಕ್ಷ ರೂ. ಬಿಲ್ ಆಗಿತ್ತು. ಕುಟುಂಬದವರು 4.5 ಲಕ್ಷ ರೂ. ಪಾವತಿ ಮಾಡಿದ್ದರು.
ದಕ್ಷಿಣ ಕನ್ನಡ; ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆ, ಒಂದೇ ದಿನ 3 ಸಾವು
ಬಾಕಿ ಹಣವನ್ನು ಕೊಡುವ ತನಕ ಶವವನ್ನು ಕೊಡುವುದಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ಪಟ್ಟು ಹಿಡಿದರು. ವ್ಯಕ್ತಿಯನ್ನು ನೋಡಿಕೊಳ್ಳಲು ಆಗಮಿಸಿದ್ದ ಸಂಬಂಧಿಕರನ್ನು ಕೂಡಿ ಹಾಕಿದರು. 3.67 ಲಕ್ಷ ನೀಡಿ ಶವ ತೆಗೆದುಕೊಂಡು ಹೋಗಿ ಎಂದು ಪಟ್ಟು ಹಿಡಿದರು.
ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಗಾರ್ಡ್ ಮೇಲೆ ಹಲ್ಲೆ, ಇಬ್ಬರ ಬಂಧನ
ಬೇರೆ ದಾರಿ ಕಾಣದೇ ಉಳಿದ ಹಣವನ್ನು ಹೊಂದಿಸಲು ಕುಟುಂಬ ಸದಸ್ಯರು ತೆರಳಿದರು. ಈ ವಿಚಾರ ಸ್ವಯಂ ಸೇವಕರಿಗೆ ತಿಳಿಯಿತು. ಅವರು ಪೊಲೀಸರಿಗೆ ವಿಚಾರ ಮುಟ್ಟಿಸಿದರು. ಆಸ್ಪತ್ರೆಗೆ ಬಂದ ಪೊಲೀಸರು ಶವವನ್ನು ಕೊಡಿಸಿದರು ಮತ್ತು ಕೂಡಿ ಹಾಕಿದ್ದ ಸಂಬಂಧಿಕರನ್ನು ಬಿಡುಗಡೆ ಮಾಡಿದರು.
ಉತ್ತರಾಖಂಡ್: 65 ಕೊರೊನಾ ರೋಗಿಗಳ ಸಾವು ಮರೆಮಾಚಿದ ಆಸ್ಪತ್ರೆ!
ಐಪಿಸಿ ಸೆಕ್ಷನ್ 342, 504, 506 ಸೇರಿದಂತೆ ವಿವಿಧ ಕಾಯ್ದೆಯಡಿ ಆಸ್ಪತ್ರೆ ವಿರುದ್ಧ ಪ್ರಕರಣವನ್ನು ದಾಖಲು ಮಾಡಲಾಗಿದೆ. ಹಲವು ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆ ಹಣದ ದಾಹ ಬೆಳಕಿಗೆ ಬಂದಿದೆ.
ಬೆಂಗಳೂರು ನಗರದಲದ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು ಸಾಮಾನ್ಯ ಬೆಡ್ಗಳಿಗೆ ಬೇಡಿಕೆ ಕಡಿಮೆ ಆಗಿದೆ. ಆದರೆ ಐಸಿಯು ಬೆಡ್ಗಳಿಗೆ ಬೇಡಿಕೆ ಇದೆ.
Recommended Video
ಶನಿವಾರದ ವರದಿಯಂತೆ ಬೆಂಗಳೂರಿನಲ್ಲಿ 4,889 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,64,182.