ಚರಣ್ ಸಹಕಾರ ಬ್ಯಾಂಕ್ನಿಂದ ಗ್ರಾಹಕರಿಗೆ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ
ಬೆಂಗಳೂರು ಅಕ್ಟೋಬರ್ 19: ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ. ನ ವತಿಯಿಂದ ಸಹಕಾರ ಬ್ಯಾಂಕಗಳ ವಲಯದಲ್ಲೇ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ನೀಡಲಾಗುತ್ತಿದೆ.
ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ತಮ್ಮ ಗ್ರಾಹಕರಿಗೆ ಅತ್ಯುತ್ತಮ ಸೌಲಭ್ಯ ನೀಡುವಲ್ಲಿ ಮುಂಚೂಣಿಯಲ್ಲಿರುವ ಈ ಸೌಲಭ್ಯಕ್ಕೆ ಅಕ್ಟೋಬರ್ 21 ರಂದು ಬೆಳಿಗ್ಗೆ ಚಾಲನೆ ನೀಡಲಾಗುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರಿ ಅರ್ಬನ್ ಬ್ಯಾಂಕ್ ಫೆಡರೇಷನ್ ನ ಸಿಇಓ ಪುಂಡಲಿಕ್ ಎನ್ ಕೆರೋರೆ ಅವರು ಚಾಲನೆ ನೀಡಲಿದ್ದಾರೆ.
ಸಹಕಾರಿ ಬ್ಯಾಂಕ್ ಸಾಲ ಮನ್ನಾ: ಷರತ್ತುಗಳು ಅಷ್ಟು ಸಲೀಸಲ್ಲ!
Recommended Video
ಈ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿಕೊಳ್ಳುವ ಮೂಲಕ ಗ್ರಾಹಕರು ತಮ್ಮ ಮೊಬೈಲ್ ನಿಂದಲೇ ಬ್ಯಾಲೇನ್ಸ್ ನ ಬಗ್ಗೆ ಮಾಹಿತಿ, ಮಿನಿ ಸ್ಟೇಟ್ಮೆಂಟ್, ಹಣ ವರ್ಗಾವಣೆ, ಹತ್ತಿರದ ಎಟಿಎಂಗಳನ್ನು ಹುಡುಕುವಂತಹ ಹಲವಾರು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಶ್ರೀ ಚರಣ್ ಬ್ಯಾಂಕಿನ ಮುಖ್ಯ ಕಚೇರಿ ಬಸವನಗುಡಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು. ಬ್ಯಾಂಕಿನ ಪ್ರಮುಖ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.