ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ: ದೋಷಾರೋಪ ಸಲ್ಲಿಕೆ
ಬೆಂಗಳೂರು, ಜೂನ್ 9: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಚೂರಿ ಇರಿತ ಪ್ರಕರಣದಲ್ಲಿ ಆರೋಪಿ ತೇಜ್ ರಾಜ್ ಶರ್ಮಾ ವಿರುದ್ಧ ಪೊಲೀಸರು 60 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ನ್ಯಾಯದ ಪರ ಹೋರಾಟಕ್ಕಾಗಿ ಈ ಕೃತ್ಯ ಎಸಗಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಅಧರ್ಮವನ್ನು ಶಿಕ್ಷಿಸುವುದು ತಪ್ಪಲ್ಲ ಎಂದು ಭಗವದ್ಗೀತೆಯಲ್ಲಿ ಹೇಳಲಾಗಿದೆ. ನಾನು ಕೊಲೆ ಮಾಡಿಯೇ ಜಯಗಳಿಸಬೇಕಿತ್ತು ಎಂದು ಆರೋಪಿ ಹೇಳಿದ್ದಾನೆ.

ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸಾಕಷ್ಟು ಬಾರಿ ಹೋದಾಗಲೂ ನ್ಯಾ. ವಿಶ್ವನಾಥ್ ಶೆಟ್ಟಿ ಸಹಕಾರ ನೀಡುತ್ತಿರಲಿಲ್ಲ. ನಾನು ಪ್ರಶ್ನೆ ಮಾಡಿದರೆ ನಗುತ್ತಾ ಉತ್ತರಿಸುತ್ತಿದ್ದರು. ಅವರು ನಗುತ್ತಿದ್ದರಿಂದ ನನಗೆ ಕೋಪ ಬರುತ್ತಿತ್ತು ಎಂದಿದ್ದಾನೆ.
ಸಂಡೇಬಜಾರ್ನಲ್ಲಿ ರಾಮಣ್ಣ ಅವರ ಅಂಗಡಿಯಲ್ಲಿ 60 ರೂ. ಕೊಟ್ಟು ಚಾಕು ಖರೀದಿಸಿದ್ದೆ. ಆದರೆ ರಾಮಣ್ಣ ನನಗೆ ಮೋಸ ಮಾಡಿದ ಎಂದು ಹೇಳಿಕೆ ನೀಡಿದ್ದಾನೆ.
ತನ್ನ ಪರವಾಗಿ ವಾದ ಮಂಡಿಸಲು ಯಾವ ವಕೀಲರೂ ಬೇಡ. ತಾನೇ ವಾದ ಮಾಡುವುದಾಗಿ ತೇಜ್ ರಾಜ್ ಹೇಳಿರುವುದಾಗಿ ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಮಾರ್ಚ್ 7ರಂದು ಲೋಕಾಯುಕ್ತ ಕಚೇರಿಯಲ್ಲಿಯೇ ತೇಜ್ ರಾಜ್ ಶರ್ಮಾ ಎಂಬಾತ ಹಲ್ಲೆ ಮಾಡಿದ್ದ.
ವಿಶ್ವನಾಥ್ ಶೆಟ್ಟಿ ಅವರ ಹೊಟ್ಟೆ ಎದೆಗೆ ಆತ ಚೂರಿಯಿಂದ ಇರಿದಿದ್ದ. ತೀವ್ರ ಗಾಯಗೊಂಡಿದ್ದ ವಿಶ್ವನಾಥ್ ಶೆಟ್ಟಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡಿದ್ದರು.
ಆರೋಪಿ ತೇಜ್ ರಾಜ್ ಸರ್ಕಾರದ ವಿವಿಧ ಅಧಿಕಾರಿಗಳ ವಿರುದ್ಧ 18 ದೂರುಗಳನ್ನು ನೀಡಿದ್ದ. ಅವುಗಳ ವಿಚಾರಣೆ ಯಾವ ಹಂತದಲ್ಲಿದೆ ಎಂದು ತಿಳಿಯಲು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿದ್ದ.
ತನ್ನ ದೂರುಗಳ ಕುರಿತು ಲೋಕಾಯುಕ್ತರು ಗಮನ ಹರಿಸುತ್ತಿಲ್ಲ ಎಂದು ಆಕ್ರೋಶಗೊಂಡು ದಾಳಿ ನಡೆಸಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications