ಸಮಾಜದಲ್ಲಿ ಸನಾತನ ಸಂಸ್ಕೃತಿಯ ಹಸಿವು ಸ್ಪಷ್ಟ: ರಾಘವೇಶ್ವರ ಶ್ರೀ
ಬೆಂಗಳೂರು, ಸೆ 14: "ಭಾರತೀಯತೆಯ, ಭಾರತೀಯ ಸನಾತನ ಧರ್ಮ ಸಂಸ್ಕೃತಿಯ ಹಸಿವು ಇಂದು ಸಮಾಜದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಸಮಾಜಕ್ಕೆ ಈ ಹಂತದಲ್ಲಿ ಸೂಕ್ತ ಮಾರ್ಗದರ್ಶನ ದೊರಕಿದಲ್ಲಿ ಮಾತ್ರ ಭಾರತ ವಿಶ್ವಗುರುವಾಗಬಲ್ಲದು" ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ನುಡಿದರು.
ನಗರದ ಗಿರಿನಗರ ರಾಮಾಶ್ರಯದಲ್ಲಿ ಶನಿವಾರ (ಸೆ. 14) ನಡೆದ ರಾಮಾಯಣ ಚಾತುರ್ಮಾಸ್ಯ ಸೀಮೋಲ್ಲಂಘನದ ಧರ್ಮಸಭೆಯಲ್ಲಿ ಆಶೀರ್ವಚನ ನೀಡುತ್ತಾ, " ಶ್ರೀರಾಮದೇವರು ಪ್ರತಿಯ ಈ ಬಾರಿಯ ಚಾತುರ್ಮಾಸ್ಯವನ್ನು ರಾಮಾಯಣ ಚಾತುರ್ಮಾಸ್ಯವಾಗಿ ಆಚರಿಸಲಾಗಿದ್ದು, ನಿರಂತರವಾಗಿ ಧಾರಾ ರಾಮಾಯಣ ಪ್ರವಚನ ನಡೆದಿದೆ" ಎಂದು ಹೇಳಿದರು.
ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ
" ರಾಮಾಯಣ ಸರ್ವವೇದಗಳ ಸಾರ; ಇದು ಗುರು-ಶಿಷ್ಯರ ನಡುವಿನ ಬಾಂಧವ್ಯ ಬೆಸೆಯಲು ಸಹಕಾರಿ. ಅರುವತ್ತು ದಿನಗಳ ಕಾಲ ನಿರಂತರವಾಗಿ ನಡೆದ ಧಾರಾ ರಾಮಾಯಣ, ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆದಿದೆ" ಎಂದು ಶ್ರೀಗಳು ಬಣ್ಣಿಸಿದರು.
" ಭಾರತದ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದ ವಿಶ್ವವಿದ್ಯಾಪೀಠದ ಸ್ಥಾಪನೆಗೆ ಸಂಕಲ್ಪಿಸಿ ನಡೆಸಿದ ಈ ಧಾರಾ ರಾಮಾಯಣ ಸಾರ್ಥಕವಾಗುವುದು ಶ್ರೀಸಂಕಲ್ಪ ಕೈಗೂಡಿದಾಗ ಎಂದು" ರಾಘವೇಶ್ವರ ಶ್ರೀಗಳು ಅಭಿಪ್ರಾಯಪಟ್ಟರು.
" ಶ್ರೀಮಠಕ್ಕೆ ಸಂಕಷ್ಟಗಳು ಎದುರಾದಾಗಲೂ ಶಿಷ್ಯಭಕ್ತರು ಗಟ್ಟಿಯಾಗಿ ಮಠದ ಪರವಾಗಿ ನಿಂತುಕೊಂಡಿದ್ದು, ಇದು ದೊಡ್ಡ ಶಕ್ತಿ. ಇದರ ಫಲವಾಗಿಯೇ ಈ ಬಾರಿಯ ಚಾತುರ್ಮಾಸ್ಯ ನಿರ್ವಿಘ್ನವಾಗಿ ನಡೆದಿದೆ" ಎಂದು ಶ್ರೀಗಳು ಹೇಳಿದರು.
ಚಾತುರ್ಮಾಸ್ಯ ಇರುವುದೇ ಚೈತನ್ಯ ಸಂಗ್ರಹಕ್ಕೆ; " ಕೇವಲ ಸನ್ಯಾಸಿಗಳಿಗೆ ಮಾತ್ರವಲ್ಲದೇ ಗೃಹಸ್ಥರಿಗೂ ಇದು ಅನ್ವಯಿಸುತ್ತದೆ. ಶಕ್ತಿಸಂಚಯನಕ್ಕೆ ಚಾತುರ್ಮಾಸ್ಯ ಪ್ರಶಸ್ತ ಕಾಲ. ಈ ಬಾರಿಯಂತೂ ವೇದಗಳ ಸಾರವಾದ ರಾಮಾಯಣದ ಮೂಲಕ ಈ ಕಾರ್ಯ ಮತ್ತಷ್ಟು ಚೆನ್ನಾಗಿ ನಡೆದಿದೆ ಎಂದು ಶ್ರೀಗಳು ಹೇಳಿದರು.
ಗೋಸ್ವರ್ಗದಲ್ಲಿ ಸಂತ್ರಸ್ತರಿಗಾಗಿ ಪರಿಹಾರ ಕೇಂದ್ರ
" ಚಾರ್ತುಮಾಸ್ಯ ನಿರ್ವಿಘ್ನವಾಗಿ, ಸುವ್ಯವಸ್ಥಿತವಾಗಿ, ವೈಭವೋಪೇತವಾಗಿ ನಡೆದಿದೆ. ಶ್ರೀಮಠದ ಇತಿಹಾಸಲ್ಲೇ ಮೊದಲ ಬಾರಿಗೆ ಎರಡು ತಿಂಗಳ ಪರ್ಯಂತ ಶ್ರೀರಾಮದೇವರಿಗೆ ಸುವರ್ಣ ಮಂಟಪದಲ್ಲಿ ಪೂಜಾಸೇವೆ ನೆರವೇರಿತು. ಸಾವಿರಾರು ಶಿಷ್ಯಭಕ್ತರಿಗೆ ಸೇವೆ ಮಾಡುವ ಅವಕಾಶ ಲಭಿಸಿದೆ" ಎಂದು ರಾಘವೇಶ್ವರ ಶ್ರೀಗಳು ಬಣ್ಣಿಸಿದರು.