ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ ಸಂಭವಿಸಲು ಕಾರಣವೇನು?
ಬೆಂಗಳೂರು, ಮೇ 19: ಶಾಸಕ ಮುನಿರತ್ನ ಅವರ ಮನೆಯ ಬಳಿ ನಡೆದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಸ್ಫೋಟಕ್ಕೆ ಕಾರಣವೇನೆಂಬುದು ಬಹಿರಂಗಗೊಂಡಿದೆ. ಸಿನಿಮಾ ಚಿತ್ರೀಕರಣಕ್ಕೆ ತಂದಿದ್ದ ರಾಸಾಯನಿಕವೇ ಕಾರಣ ಎಂದು ತಿಳಿದುಬಂದಿದೆ.
ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, 1 ಸಾವು
ಪ್ಲಾಸ್ಟಿಕ್ ಮೌಲ್ಡಿಂಗ್ಗೆ ಬಳಸಲಾಗುತ್ತಿದ್ದ ಕೆಮಿಕಲ್ನಿಂದ ಸ್ಪೋಟಗೊಂಡಿದೆ. ನವಿಲು ಮಾದರಿಯ ಪುತ್ಥಳಿ ನಿರ್ಮಾಣಕ್ಕೆ ಈ ಕೆಮಿಕಲ್ ಬಳಕೆ ಮಾಡಲಾಗುತ್ತಿತ್ತು, ಆ ಕೆಮಿಕಲ್ ತೆಗೆದುಕೊಂಡು ಹೋಗಲು ವೆಂಕಟೇಶ್ ಬಂದಿದ್ದಾಗ ಸ್ಪೋಟ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿ ಮೂಲಕ ತಿಳಿದುಬಂದಿರುವ ಅಂಶವಾಗಿದೆ. ಪೊಲೀಸರ ತನಿಖೆಯಲ್ಲಿ ಇನ್ನೂ ಹಲವಾರು ಅಂಶಗಳು ಬಹಿರಂಗಗೊಂಡಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮನೆಯ ಬಳಿ ಸ್ಫೋಟ : ಶಾಸಕ ಮುನಿರತ್ನ ಹೇಳಿದ್ದೇನು?
ಬೆಂಗಳೂರಿನ ವೈಯಾಲಿಕಾವಲ್ನಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಭಾನುವಾರ ಬೆಳಗ್ಗೆ 9.20ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ವ್ಯಕ್ತಿಯ ದೇಹ ಛಿದ್ರವಾಗಿದೆ. ಸ್ಫೋಟ ನಡೆದ ಸ್ಥಳದ ಮನೆಯ ಸುತ್ತಮುತ್ತಲಿನ ಕಿಟಿಕಿಗಾಜುಗಳು ಪುಡಿಯಾಗಿವೆ.
ಇತ್ತೀಚೆಗಷ್ಟೇ ಚಿರಂಜೀವಿ ಸರ್ಜಾ ಮತ್ತು ಆ ದಿನಗಳು ಚೇತನ್ ಅಭಿನಯಿಸುತ್ತಿರುವ ರಣಂ ಸಿನಿಮಾ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಪೋಟವಾಗಿ ಇಬ್ಬರು ಮೃತಪಟ್ಟಿದ್ದರು. ಈ ದುರ್ಘಟನೆಯಲ್ಲಿ ಸುಮೈರಾ (28) ಎಂಬ ಮಹಿಳೆ ಮತ್ತು ಆಯಿತಾ (8) ಎಂಬ ಮಗು ಸಾವನ್ನಪಿದ್ದರು.