ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಕೊಚ್ಚಿ ತನಕ ವಿಸ್ತರಣೆ
ಬೆಂಗಳೂರು, ಸೆಪ್ಟೆಂಬರ್ 19 : ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯನ್ನು ಕೊಚ್ಚಿ ತನಕ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೇರಳ ಸರ್ಕಾರ ಈ ಬಗ್ಗೆ ಕೇಂದ್ರಕ್ಕೆ ಹಲವು ಬಾರಿ ಮನವಿ ಮಾಡಿತ್ತು.
ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಮತ್ತು ಅನುಷ್ಠಾನ ಟ್ರಸ್ಟ್ (ಎನ್ಐಸಿಡಿಐಟಿ) ಕೇಂದ್ರ ಸರ್ಕಾರದ ತೀರ್ಮಾನದ ಬಗ್ಗೆ ಕೇರಳ ರಾಜ್ಯಕ್ಕೆ ಮಾಹಿತಿ ನೀಡಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಕುರಿತು ಅಧಿಕೃತ ಹೇಳಿಕೆ ನೀಡಿದ್ದಾರೆ.
ಬೆಂಗಳೂರು-ಚೆನ್ನೈ ನಡುವೆ 120 ಕಿಮೀ ವೇಗದಲ್ಲಿ ಚಲಿಸಿ
"ಹಲವು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವಾಗ ಕೇರಳ ರಾಜ್ಯವನ್ನು ಕಡೆಗಣಿಸಲಾಗಿದೆ. ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಗೆ ಕೇರಳವನ್ನು ಸೇರಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಹಲವು ಬಾರಿ ಮನವಿ ಮಾಡಿತ್ತು" ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
ಬೆಂಗಳೂರು-ಚೆನ್ನೈ ನಡುವೆ 120 ಕಿಮೀ ವೇಗದಲ್ಲಿ ಚಲಿಸಿ
ಕಾರಿಡಾರ್ ಕೊಚ್ಚಿ ತನಕ ವಿಸ್ತರಣೆಯಾದರೆ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಸುಮಾರು 10 ಸಾವಿರ ಕೋಟಿ ಬಂಡವಾಳ ಖಾಸಗಿ ಉದ್ಯಮಗಳ ಮೂಲಕ ಕೇರಳ ರಾಜ್ಯದಲ್ಲಿ ಹೂಡಿಕೆಯಾಗುವ ನಿರೀಕ್ಷೆ ಇದೆ.
ಆರು ಪಥವಾಗಲಿದೆ ಬೆಂಗಳೂರು-ಮೈಸೂರು ಹೆದ್ದಾರಿ
ದೇಶದಲ್ಲಿ ನಿರ್ಮಾಣವಾಗುತ್ತಿರುವ 5 ಪ್ರಮುಖ ಇಂಡಸ್ಟ್ರಿಯಲ್ ಕಾರಿಡಾರ್ಗಳಲ್ಲಿ ಚೆನ್ನೈ-ಬೆಂಗಳೂರು ಕಾರಿಡಾರ್ ಒಂದಾಗಿದೆ. ಚೆನ್ನೈ, ಶ್ರೀಪೆರಂಬೂರು, ರಾಣಿಪೇಟ್, ಚಿತ್ತೂರು, ಬಂಗಾರಪೇಟೆ, ಹೊಸಕೋಟೆ, ಮೂಲಕ ಬೆಂಗಳೂರಿಗೆ ಬಂದು ಸೇರಲಿದೆ.