ಬೆಂಗಳೂರು: ರಾಹುಲ್ ಗಾಂಧಿ ಗೇಲಿ ಮಾಡಿದ ಚೇತನ್ ಭಗತ್
ಬೆಂಗಳೂರು, ಡಿಸೆಂಬರ್. 08: ಅಸಹಿಷ್ಣುತೆ ಬಗ್ಗೆ ಮಾತನಾಡಲು ಇದು ವೇದಿಕೆಯೂ ಅಲ್ಲ, ಕಾಲವೂ ಅಲ್ಲ ಎಂದು ಬರಹಗಾರ ಚೇತನ್ ಭಗತ್ ಹೇಳಿದ್ದಾರೆ. ಬೆಂಗಳೂರಿನಲ್ಲಿ 'ಸೆಂಡ್ ಮೈ ಗಿಫ್ಟ್.ಕಾಮ್' ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಗತ್ ಮಾತನಾಡುತ್ತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗೇಲಿ ಮಾಡಲು ಮರೆಯಲಿಲ್ಲ.
ನಾನು ಉತ್ತಮ ಬರಹಗಾರನಲ್ಲ, ಆದರೆ ಅತಿ ಹೆಚ್ಚು ಮಾರಾಟವಾಗುವ ಬರಹಗಾರ ಎನ್ನುತ್ತಲೇ ಮಾತು ಆರಂಭಿಸಿದ ಭಗತ್, ರಾಹುಲ್ ಬಂದು ಹೋದ ಮೇಲೆ ಒಂದು ಸಂಗತಿ ಸ್ಪಷ್ಟವಾಗಿದೆ ಯಾವ ಕಾರಣಕ್ಕೂ ಭಾಷಣ ಮಾಡುತ್ತಿದ್ದಾಗ ಪ್ರೇಕ್ಷಕರಿಂದ ಪ್ರತಿಕ್ರಿಯೆ ಬಯಸಬಾರದು ಎಂಬುದನ್ನು ರಾಹುಲ್ ತಿಳಿಸಿಕೊಟ್ಟಿದ್ದಾರೆ ಎಂದು ಮೌಂಟ್ ಕಾರ್ಮೆಲ್ ಕಾಲೇಜು ಸಂವಾದದ ಪ್ರಕರಣವನ್ನು ನೆನಪು ಮಾಡಿಕೊಂಡು ಹೇಳಿದರು.['ಚೇತನ್ ಭಗತ್ ಸಾಹಿತ್ಯ ಲೋಕದ ರಾಹುಲ್ ಗಾಂಧಿ!']

ಪರಿಶ್ರಮವೇ ಯಶಸ್ಸಿಗೆ ಮಾನದಂಡ, ಅದು ಯಾವುದೇ ಕ್ಷೇತ್ರದಲ್ಲಾಗಿರಬಹುದು. ಒಮ್ಮೆ ನೀವು ಉನ್ನತ ಮಟ್ಟಕ್ಕೆ ತಲುಪಿದಿರಿ ಎಂದಾದರೆ ಹೊಸ ಹೊಸ ಯೋಜನೆಗಳು ನಿಮ್ಮ ಮುಂದೆಯೇ ಬರುತ್ತದೆ ಎಂದು ಭಗತ್ ಹೇಳಿದರು.[ಚೇತನ್ ಭಗತ್ 'ಅರ್ಧ ಪ್ರೇಯಸಿ'ಯ ಕತೆಯಿದು]
ಆವಾರ್ಡ್ ವಾಪಸಿ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರಿತೋ? ಇಲ್ಲವೋ? ಎಂಬುದನ್ನು ವಿಶ್ಲೇಷಣೆ ಮಾಡಲು ಇದು ವೇದಿಕೆಯಲ್ಲ ಎಂದು ಹೇಳಿದರು. ಅಲ್ಲದೇ ಅಸಹಿಷ್ಣುತೆ ಬಗ್ಗೆ ಮಾತನಾಡುವ ಅಗತ್ಯವೂ ನನಗೆ ಕಂಡುಬರುತ್ತಿಲ್ಲ ಎಂದು ಹೇಳಿದರು.

-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications