ಕೋಳಿ ಉದ್ಯಮಕ್ಕೆ ಬರೆ ಎಳೆದ ಕೊರೊನಾ: 10 ಕೋಟಿ ರೂ. ನಷ್ಟ
ಬೆಂಗಳೂರು, ಫೆಬ್ರವರಿ 19: ಕೋಳಿ ಮಾಂಸ ತಿನ್ನುವುದರಿಂದಲೂ ಕೊರೊನಾ ಬರುತ್ತದೆ ಎಂದು ಹಬ್ಬಿರುವ ಸುದ್ದಿಯಿಂದಾಗಿ ಕೋಳಿ ಉದ್ಯಮಕ್ಕೆ ಪೆಟ್ಟು ಬಿದ್ದಿದೆ.
ರಾಜ್ಯದಲ್ಲಿ ಕೋಳಿ ಮಾಂಸ ವ್ಯಾಪಾರ ಶೇ.30ರಷ್ಟು ಕುಸಿದಿದ್ದು , ಪ್ರತಿದಿನ ಅಂದಾಜು 10 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕುಕ್ಕುಟೋದ್ಯಮ ರೈತರ ಹಾಗೂ ತಳಿ ಸಾಕಾಣಿಕೆದಾರರ ಸಂಘ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ಸುಳ್ಳು ಸುದ್ದಿಯಿಂದ ಕೋಳಿ ಉದ್ಯಮ ನೆಲಕಚ್ಚಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ
ಸಾಮಾಜಿಕ ಜಾಲತಾಣಗಳಲ್ಲಿ ಹರಿಡಿರುವ ಕೋಳಿಮಾಂಸದಲ್ಲಿ ಕೊರೊನಾ ವೈರಸ್ ಇದೆ ಎಂಬ ಸುಳ್ಳುಸುದ್ದಿಯಿಂದ ಕೋಳಿ ಸಾಕಾಣಿಕೆ ಹಾಗೂ ಮಾರಾಟ ವಲಯ ಅಪಾರ ನಷ್ಟ ಅನುಭವಿಸಿದೆ. ರೋಗ ಹರಡುವ ಭಯದಿಂದ ಗ್ರಾಹಕರು ಕೋಳಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

ಬಾಯ್ಲರ್ ಕೋಳಿ ಮಾರಾಟ ಇಳಿಕೆ
ಕೋಳಿ ಮಾಂಸ ಸೇವನೆಯಿಂದ ಕೊರೊನಾ ವೈರಸ್ ಹರಡುತ್ತೆ ಎನ್ನುವ ಸುಳ್ಳು ಸುದ್ದಿಯಿಂದಾಗಿ ಬಾಯ್ಲರ್ ಕೋಳಿ ಮಾರಾಟ ದರ ಪ್ರತಿ ಕೆಜಿ 80 ರೂ.ನಿಂದ 50 ರೂ.ಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಕೋಳಿ ಮಾರಾಟ ವ್ಯವಹಾರ ಶೇ.30ರಿಂದ 40ರಷ್ಟು ನಷ್ಟ ಅನುಭವಿಸಿದೆ.

ರಾಜ್ಯದಲ್ಲಿ ದಿನಕ್ಕೆ 8 ಕೋಟಿ ರೂ. ನಷ್ಟ
ಕುಕ್ಕುಟೋದ್ಯಮ ಕ್ಷೇತ್ರದಲ್ಲಿ ದೇಶದಾದ್ಯಂತ ಬಾಯ್ಲರ್ ಕೋಳಿ ಮಾಂಸ ಮಾರಾಟದಲ್ಲಿ ಪ್ರತಿದಿನಕ್ಕೆ 66 ಕೋಟಿ ರೂ. ನಷ್ಟವಾಗಿದ್ದರೆ , ಕರ್ನಾಟಕದಲ್ಲಿ ದಿನಕ್ಕೆ ಎಂಟು ಕೋಟಿ ರೂ. ನಷ್ಟ ಉಂಟಾಗಿದೆ.ಹಾಗೆ ಮೊಟ್ಟೆ ಕೋಳಿ ಉತ್ಪಾದನೆ ಹಾಗೂ ಮಾರಾಟದಲ್ಲಿ ದೇಶಾದ್ಯಂತ ಪ್ರತಿದಿನ 28 ಕೋಟಿ ರೂ. ನಷ್ಟವಾಗುತ್ತಿದೆ.

ಕೋಳಿಮಾಂಸಕ್ಕೂ ಕೊರೊನಾಕ್ಕೂ ಸಂಬಂಧವಿಲ್ಲ
ಕೋಳಿ ಮಾಂಸಕ್ಕೂ ಕೊರೊನಾಕ್ಕೂ ಯಾವುದೇ ಸಂಬಂಧವಿಲ್ಲ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ತೊಂದರೆ ನೀಡಲು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ರಾಜ್ಯ ಸರ್ಕಾರ ಕೂಡ ಈ ಕುರಿತು ಸ್ಪಷ್ಟನೆ ನೀಡಿದೆ. ಇದು ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಲಿದೆ ಎಂದು ಸಂಘದ ಅಧ್ಯಕ್ಷರು ವಿಷಾದ ವ್ಯಕ್ತಪಡಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications