ಕೋಳಿ ಉದ್ಯಮಕ್ಕೆ ಬರೆ ಎಳೆದ ಕೊರೊನಾ: 10 ಕೋಟಿ ರೂ. ನಷ್ಟ
ಬೆಂಗಳೂರು, ಫೆಬ್ರವರಿ 19: ಕೋಳಿ ಮಾಂಸ ತಿನ್ನುವುದರಿಂದಲೂ ಕೊರೊನಾ ಬರುತ್ತದೆ ಎಂದು ಹಬ್ಬಿರುವ ಸುದ್ದಿಯಿಂದಾಗಿ ಕೋಳಿ ಉದ್ಯಮಕ್ಕೆ ಪೆಟ್ಟು ಬಿದ್ದಿದೆ.
ರಾಜ್ಯದಲ್ಲಿ ಕೋಳಿ ಮಾಂಸ ವ್ಯಾಪಾರ ಶೇ.30ರಷ್ಟು ಕುಸಿದಿದ್ದು , ಪ್ರತಿದಿನ ಅಂದಾಜು 10 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕುಕ್ಕುಟೋದ್ಯಮ ರೈತರ ಹಾಗೂ ತಳಿ ಸಾಕಾಣಿಕೆದಾರರ ಸಂಘ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ಸುಳ್ಳು ಸುದ್ದಿಯಿಂದ ಕೋಳಿ ಉದ್ಯಮ ನೆಲಕಚ್ಚಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ
ಸಾಮಾಜಿಕ ಜಾಲತಾಣಗಳಲ್ಲಿ ಹರಿಡಿರುವ ಕೋಳಿಮಾಂಸದಲ್ಲಿ ಕೊರೊನಾ ವೈರಸ್ ಇದೆ ಎಂಬ ಸುಳ್ಳುಸುದ್ದಿಯಿಂದ ಕೋಳಿ ಸಾಕಾಣಿಕೆ ಹಾಗೂ ಮಾರಾಟ ವಲಯ ಅಪಾರ ನಷ್ಟ ಅನುಭವಿಸಿದೆ. ರೋಗ ಹರಡುವ ಭಯದಿಂದ ಗ್ರಾಹಕರು ಕೋಳಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

ಬಾಯ್ಲರ್ ಕೋಳಿ ಮಾರಾಟ ಇಳಿಕೆ
ಕೋಳಿ ಮಾಂಸ ಸೇವನೆಯಿಂದ ಕೊರೊನಾ ವೈರಸ್ ಹರಡುತ್ತೆ ಎನ್ನುವ ಸುಳ್ಳು ಸುದ್ದಿಯಿಂದಾಗಿ ಬಾಯ್ಲರ್ ಕೋಳಿ ಮಾರಾಟ ದರ ಪ್ರತಿ ಕೆಜಿ 80 ರೂ.ನಿಂದ 50 ರೂ.ಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಕೋಳಿ ಮಾರಾಟ ವ್ಯವಹಾರ ಶೇ.30ರಿಂದ 40ರಷ್ಟು ನಷ್ಟ ಅನುಭವಿಸಿದೆ.

ರಾಜ್ಯದಲ್ಲಿ ದಿನಕ್ಕೆ 8 ಕೋಟಿ ರೂ. ನಷ್ಟ
ಕುಕ್ಕುಟೋದ್ಯಮ ಕ್ಷೇತ್ರದಲ್ಲಿ ದೇಶದಾದ್ಯಂತ ಬಾಯ್ಲರ್ ಕೋಳಿ ಮಾಂಸ ಮಾರಾಟದಲ್ಲಿ ಪ್ರತಿದಿನಕ್ಕೆ 66 ಕೋಟಿ ರೂ. ನಷ್ಟವಾಗಿದ್ದರೆ , ಕರ್ನಾಟಕದಲ್ಲಿ ದಿನಕ್ಕೆ ಎಂಟು ಕೋಟಿ ರೂ. ನಷ್ಟ ಉಂಟಾಗಿದೆ.ಹಾಗೆ ಮೊಟ್ಟೆ ಕೋಳಿ ಉತ್ಪಾದನೆ ಹಾಗೂ ಮಾರಾಟದಲ್ಲಿ ದೇಶಾದ್ಯಂತ ಪ್ರತಿದಿನ 28 ಕೋಟಿ ರೂ. ನಷ್ಟವಾಗುತ್ತಿದೆ.

ಕೋಳಿಮಾಂಸಕ್ಕೂ ಕೊರೊನಾಕ್ಕೂ ಸಂಬಂಧವಿಲ್ಲ
ಕೋಳಿ ಮಾಂಸಕ್ಕೂ ಕೊರೊನಾಕ್ಕೂ ಯಾವುದೇ ಸಂಬಂಧವಿಲ್ಲ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ತೊಂದರೆ ನೀಡಲು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ರಾಜ್ಯ ಸರ್ಕಾರ ಕೂಡ ಈ ಕುರಿತು ಸ್ಪಷ್ಟನೆ ನೀಡಿದೆ. ಇದು ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಲಿದೆ ಎಂದು ಸಂಘದ ಅಧ್ಯಕ್ಷರು ವಿಷಾದ ವ್ಯಕ್ತಪಡಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications