ಎಸ್ಎಸ್ಎಲ್ಸಿ ಪರೀಕ್ಷೆ ಸಂಬಂಧ ಸಿಎಂ ಮಹತ್ವದ ಸಭೆ
ಬೆಂಗಳೂರು, ಮೇ 16: ಎಸ್ಎಸ್ಎಲ್ಸಿ ಪರೀಕ್ಷೆ ಸಂಬಂಧ ಸಿಎಂ ಯಡಿಯೂರಪ್ಪ ಇಂದು ಗೃಹ ಕಛೇರಿ ಕೃಷ್ಣದಲ್ಲಿ ಸಭೆ ನಡೆಸಲಿದ್ದಾರೆ. ಶಿಕ್ಷಣ ಸಚಿವರು ಹಾಗೂ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಜತೆ ಚರ್ಚೆ ನಡೆಸಲಿದ್ದಾರೆ.
Recommended Video
ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಗಿಯಬೇಕಿತ್ತು. ಆದರೆ, ಕೋವಿಡ್ 19 ಹಿನ್ನೆಲೆ ಪರೀಕ್ಷೆ ಗಳನ್ನ ಮುಂದುಡಲಾಗಿತ್ತು. ಹೀಗಾಗಿ ಒಂದು ದಿನಾಂಕವನ್ನ ಶಿಕ್ಷಣ ಇಲಾಖೆ ನಿಗದಿ ಮಾಡಿಕೊಂಡಿದ್ದು, ಈ ಬಗ್ಗೆ ನಾಳೆ ಸಿಎಂ ಹಾಗೂ ಪರಿಷತ್ ಸದಸ್ಯರ ಸಭೆಯಲ್ಲಿ ಅಂತಿಮ ರೂಪ ಸಿಗಲಿದೆ.
ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ ಸಾಧ್ಯತೆ; ಸುರೇಶ್ ಕುಮಾರ್
ಈ ಸಭೆಯ ನಂತರ ಸೋಮವಾರ ದಿನಾಂಕ ಹೊರ ಬೀಳಲಿದ್ದು, ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಆಗುತ್ತದೆ.
ಮುಂದಿನ ಅಕಾಡೆಮಿಕ್ ವರ್ಷ ಆರಂಭಕ್ಕೆ ಯಾವ ರೀತಿ ಸಿದ್ದತೆ ಎನ್ನುವುದರ ಬಗ್ಗೆಯೂ ಚರ್ಚೆ ನಡೆಯಲಿದೆ.
ನಿನ್ನೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಗೊಳಿಸುವ ಸಾಧ್ಯತೆ ಇದೆ ಮಾಹಿತಿ ನೀಡಿದ್ದರು.