KFD ನಿಷೇಧಕ್ಕೆ ಸಿದ್ದರಾಮಯ್ಯ ಹಿಂದೇಟು: ಶೆಟ್ಟರ್ ಆರೋಪ
ಬೆಂಗಳೂರು, ಜನವರಿ 09: ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಕೊಲೆಗಳು, ಅತ್ಯಾಚಾರ, ದರೋಡೆಗಳು ನಡೆಯುತ್ತಿದೆ ಇದಕ್ಕೆಲ್ಲ ಕೆಎಫ್ ಡಿ, ಪಿಎಫ್ ಐ ಸಮಾಜ ವಿರೋಧಿ ಸಂಘಟನೆಗಳು ರಾಜ್ಯದಲ್ಲಿ ಬೀಡುಬಿಟ್ಟಿರುವುದೇ ಕಾರಣ ಎಂದು ವಿರೋಧ ಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಅಪರಾಧಗಳು ನಡೆಯುತ್ತಿದೆ. ಬೆಂಗಳೂರು ಅತ್ಯಾಚಾರದ ನಗರವಾಗಿದೆ. ಒಟ್ಟಾರೆ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಕೆಎಫ್ ಡಿ, ಪಿಎಫ್ ಐ, ಸಂಘಟನೆಗಳು ರಾಜ್ಯದಲ್ಲಿ ಬೀಡು ಬಿಟ್ಟಿರುವುದೇ ಇದಕ್ಕೆಲ್ಲ ಕಾರಣವಾಗಿದೆ. ಮುಖ್ಯಮಂತ್ರಿಗಳು ಈ ಸಂಘಟನೆಗಳನ್ನು ನಿಷೇಧ ಮಾಡುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕೇವಲ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಒಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೇಟು ಹಾಕುತ್ತಿದ್ದಾರೆ, ಸಂಸ್ಥೆಯೊಂದರ ಸಮೀಕ್ಷೆ ಪ್ರಕಾರ ಬೆಂಗಳೂರು ಕೊಲೆ ಪ್ರಕರಣಗಳಲ್ಲಿ ಎರಡನೇ ಸ್ಥಾನ ಹಾಗೂ ರೇಪ್, ಕಿಡ್ನಾಪ್ ಪ್ರಕರಣಗಳಲ್ಲಿ ಮೂರನೇ ಸ್ಥಾನ ಪಡೆದಿದೆ. ಕಲ್ಬುರ್ಗಿ ಹತ್ಯೆ ಪ್ರಕರಣ ವಿಚಾರದಲ್ಲಿ ಇದುವರೆಗೂ ಹಂತಕರನ್ನು ಪತ್ತೆ ಹಚ್ಚಲು ವಿಫಲರಾಗಿದ್ದಾರೆ.
ಕೇವಲ ಸಂಘ ಪರಿವಾರದವರನ್ನು ದೂಷಿಸುವುದು ಸರಿಯಲ್ಲ, ಈ ವಿಚಾರದಲ್ಲಿ ಬುದ್ದಿಜೀವಿಗಳು ತಾರತಮ್ಯದಿಂದ ನಡೆದು ಕೊಳ್ಳುತ್ತಿದ್ದಾರೆ .ಇವರೆಲ್ಲ ಸೋ ಕಾಲ್ಡ್ ಬುದ್ದಿ ಜೀವಿಗಳು ಎಂದು ಟೀಕೆ ಮಾಡಿದರು. ವೈದ್ಯರ, ಆಡಳಿತ ವ್ಯವಸ್ಥೆಯ ಬೇಜವದ್ಬಾರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ವೈದ್ಯಕೀಯ ಸಚಿವರು ಇದುವರೆಗೂ ಆಸ್ಪತ್ರೆಗೆ ಬೇಟಿ ನೀಡಿಲ್ಲ ಎಂದು ಆರೋಪಿಸಿದರು.
ಇದೊಂದು ಬೇಜವದ್ಬಾರಿ ಸರ್ಕಾರ ವಾಗಿದೆ, ಭಷ್ಟಚಾರ ಮಿತಿ ಮೀರಿದೆ. ಅರ್ಕಾವತಿ ವಿಚಾರದಲ್ಲಿ 650 ಎಕರೆ ಜಮೀನು ಡಿನೊಟಿಪೈ ಮಾಡುವ ಮೂಲಕ 10 ಸಾವಿರ ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸುತ್ತಿಲ್ಲ, ಈ ಆಯೋದ ವರದಿಯನ್ನು ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿರುವುದು ಸರಿಯಲ್ಲ ಇಡೀ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ ಆರೋಪಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications