ಸುಳ್ಳು ಹೇಳೋಕೆ, ಕಣ್ಣೀರು ಸುರಿಸೋಕೆ ಬರಲ್ಲ : ಬಚ್ಚೇಗೌಡ
ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಕಾಂಗ್ರೆಸ್ ಅಭ್ಯರ್ಥಿ ಡಾ. ವೀರಪ್ಪ ಮೊಯ್ಲಿ ಮತ್ತು ಜಾತ್ಯತೀತ ಜನತಾದಳದ ನಾಯಕ ಎಚ್.ಡಿ. ಕುಮಾರಸ್ವಾಮಿ, ಮತ್ತು ಇವರಿಬ್ಬರ ವಿರುದ್ಧ ನೇರ ನುಡಿ, ದಿಟ್ಟ ನಡೆಗೆ ಹೆಸರುವಾಸಿಯಾಗಿರುವ ಬಿ.ಎನ್. ಬಚ್ಚೇಗೌಡರ ಸ್ಪರ್ಧೆಯಿಂದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ಮೂರು ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿ ಪರಿಣಮಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳೆಲ್ಲರೂ ಬಿರುಬಿಸಿಲಲ್ಲಿ ಮತಯಾಚನೆಗೆ ಇಳಿದಿದ್ದಾರೆ.

2009ರಲ್ಲಿ ಜಯಶಾಲಿಯಾಗಿದ್ದ ವೀರಪ್ಪ ಮೊಯ್ಲಿ ಮತ್ತು ವಿಧಾನಸಭೆಯ ಸದಸ್ಯರಾಗಿದ್ದರೂ ಮತ್ತೆ ಲೋಕಸಭೆ ಚುನಾವಣೆಗಿಳಿದಿರುವ ಕುಮಾರಸ್ವಾಮಿ ಇಬ್ಬರಿಗೂ ನೀರು ಕುಡಿಸೇ ತೀರುತ್ತೇನೆ ಎಂದು ಪಣತೊಟ್ಟಿರುವ ನೇರ ನುಡಿಯ 72 ವರ್ಷದ ಹಿರಿಯ ಧುರೀಣ ಬಿಎನ್ ಬಚ್ಚೇಗೌಡರ ಜೊತೆ ಒನ್ಇಂಡಿಯಾ ಕನ್ನಡದ ಪ್ರತಿನಿಧಿ ನಡೆಸಿದ ಸಂದರ್ಶನ ಇಲ್ಲಿದೆ. [ಪ್ರತಿಷ್ಠಿತ ಕ್ಷೇತ್ರ : ಚಿಕ್ಕಬಳ್ಳಾಪುರ]
ಜನರನ್ನು ಹೆಚ್ಚಾಗಿ ಬಾಧಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ವ್ಯತ್ಯಯ ನಿವಾರಿಸಲು ತಾವು ಕೈಗೊಳ್ಳಬೇಕಿರುವ ಯೋಜನೆಗಳ ಬಗ್ಗೆ ಬಚ್ಚೇಗೌಡರು ಸ್ಪಷ್ಟವಾಗಿ ವಿವರಿಸಿದ್ದಾರೆ. ಜೊತೆಗೆ, ಚಿಕ್ಕಬಳ್ಳಾಪುರ ಕ್ಷೇತ್ರ ಬೆಂಗಳೂರಿಗೆ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ಸಾಫ್ಟ್ ವೇರ್ ಪಾರ್ಕ್ ನಿರ್ಮಿಸುವ ಕನಸನ್ನೂ ಹೊಂದಿದ್ದಾರೆ. ಅವರ ಜೊತೆ ನಡೆಸಿದ ಮಾತುಕತೆಯ ಸಾರಾಂಶ ಇಲ್ಲಿದೆ.
ಪ್ರಶ್ನೆ : ಸರ್, ಮೊದಲ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿದ್ದೀರಿ. ನಿಮ್ಮ ಇಬ್ಬರು ಪ್ರಮುಖ ಎದುರಾಳಿಗಳು ಈಗಾಗಲೇ ಲೋಕಸಭಾ ಪ್ರತಿನಿಧಿಗಳಾಗಿದ್ದವರು. ಅನುಭವದ ಕೊರತೆ ಕಾಡುತ್ತಿದೆಯಾ?
ಬಚ್ಚೇಗೌಡ : ಖಂಡಿತಾ ಇಲ್ಲ. ನನಗೇನೂ ವ್ಯತ್ಯಾಸ ಅನ್ನಿಸುತ್ತಿಲ್ಲಾ. ಎಲ್ಲಾ ಚುನಾವಣೆಗಳೂ ಒಂದೇ. ಜನತೆಗೆ ನನ್ನಲ್ಲಿ ವಿಶ್ವಾಸ ಇದ್ದರೆ ನನ್ನನ್ನು ಚುನಾಯಿಸುತ್ತಾರೆ.
ಪ್ರಶ್ನೆ : ಜನತೆ ನಿಮ್ಮ ಪ್ರತಿಸ್ಪರ್ಧಿಗಳಿಗಿಂತ ನಿಮ್ಮಲ್ಲಿ ಹೆಚ್ಚು ವಿಶ್ವಾಸ ಇಟ್ಟಿದ್ದಾರೆ ಅಂತ ನಿಮಗನ್ನಿಸುತ್ತಾ?
ಬಚ್ಚೇಗೌಡ : ಅದನ್ನು ಚುನಾವಣೆ ನಿರ್ಧರಿಸುತ್ತದೆ. ನಾನು ಇದೇ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವನು. ಈ ಕ್ಷೇತ್ರಕ್ಕೆ ಸೇರಿದ ಹೊಸಕೋಟೆ ವಿಧಾನಸಭಾ ಕ್ಷೇತ್ರವನ್ನು ಹಲವಾರು ಭಾರಿ ಪ್ರತಿನಿಧಿಸಿದ್ದೇನೆ. ಹೊಸಕೋಟೆಯಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಬೆಂಗಳೂರು ಗ್ರಾಮಾಂತರ ಪ್ರದೇಶಕ್ಕೆ ನಾನು ಮಾಡಿರುವ ಕೆಲಸಗಳು ಈ ಕ್ಷೇತದ ಜನಗಳಿಗೆ ಗೊತ್ತಿದೆ. ಜನತೆಗೆ ನನ್ನ ಬಗ್ಗೆ ಬೇರೆಲ್ಲಾ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚು ವಿಶ್ವಾಸ ಇದೆ ಅನ್ನೋ ಭರವಸೆ ನನಗಿದೆ.
ಪ್ರಶ್ನೆ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಹಿಂದಿನಿಂದಲೂ ಕಾಂಗ್ರೆಸ್ನ ಭದ್ರಕೋಟೆಯಾಗಿದೆ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಬಿಜೆಪಿಗೆ ಇರೋ ಅನುಕೂಲಗಳೇನು?
ಬಚ್ಚೇಗೌಡ : ಈಗ ಸನ್ನಿವೇಶ ಬಹಳ ಬದಲಾಗಿದೆ. ದೇಶದಲ್ಲೆಲ್ಲಾ ಬಿಜೆಪಿ ಪರ ಅಲೆ ಇದೆ. ಸದ್ಯ ಈ ಕ್ಷೇತದ ಪ್ರತಿನಿಧಿ(ವೀರಪ್ಪ ಮೊಯ್ಲಿ)ಯ ಬಗ್ಗೆ ಇಲ್ಲಿನ ಜನರಿಗೆಲ್ಲಾ ಬಹಳ ನಿರಾಸೆ ಇದೆ. ಜೊತೆಗೆ ಕೇಂದ್ರದಲ್ಲಿ ಕಾಂಗ್ರೆಸ್ ಬಹಳ ನೀರಸ ಆಡಳಿತ ನೀಡಿದೆ. ಯುಪಿಎನ ಭ್ರಷ್ಟಾಚಾರ, ಮತ್ತಿತರ ಹಗರಣಗಳಿಂದ ಜನ ಬೇಸತ್ತಿದ್ದಾರೆ. ಈ ಕ್ಷೇತ್ರದ ಪ್ರತಿನಿಧಿಯಿಂದ ಕ್ಷೇತ್ರಕ್ಕೆ ಏನೇನೂ ಪ್ರಯೋಜನ ಆಗಿಲ್ಲ. ನಾನು ಹಿಂದೆ ಮಾಡಿರೋ ಅಭಿವೃದ್ಧಿ ಕಾರ್ಯಗಳು ನನ್ನನ್ನು ಕೈಬಿಡಲ್ಲ ಅನ್ನೋ ನಂಬಿಕೆ ಇದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications