ಕುಡಿಯುವ ನೀರಿನ ಪೂರೈಕೆ ನನ್ನ ಆದ್ಯತೆ : ಬಚ್ಚೇಗೌಡ
(ಬಚ್ಚೇಗೌಡರ ಸಂದರ್ಶನದ ಮುಂದುವರಿದ ಭಾಗ)
ಪ್ರಶ್ನೆ : ನೀವು ಕ್ಷೇತ್ರದ ಅಭಿವೃದ್ಧಿಗೆ ಹಾಕಿಕೊಂಡಿರೋ ಮಾರ್ಗಸೂಚಿ ಎಂತಹುದು?
ಬಚ್ಚೇಗೌಡ : ಈ ಕ್ಷೇತ್ರದ ಜನತೆಗೆ ಮುಖ್ಯವಾಗಿ ಬೇಕಾಗಿರೋದು ನೀರು. ಇಲ್ಲಿ ನೀರಿನ ಸಮಸ್ಯೆ ಬಹಳ ತೀವ್ರವಾಗಿದೆ. ಇದಕ್ಕೊಂದು ಶಾಶ್ವತ ಪರಿಹಾರ ಬೇಕು. ಮೊಯ್ಲಿಯವರು ನಾಮಕಾವಸ್ಥೆಗೆ ಉದ್ಘಾಟನೆ ಮಾಡಿದ್ದಾರೆ. ಈ ಯೋಜನೆಯನ್ನು ವೈಜ್ಞಾನಿಕವಾಗಿ ಜಾರಿಗೆ ತರೋದಿಕ್ಕೆ ನಾನು ಪ್ರಯತ್ನಿಸುತ್ತೇನೆ.
ಬೆಂಗಳೂರು ನಗರಕ್ಕೆ ಕುಡಿಯುವ ನೀರನ್ನು ಕಾವೇರಿ ನದಿಯಿಂದ ಪೂರೈಸುತ್ತಿದ್ದು, ಈ ವ್ಯವಸ್ಥೆಯನ್ನು ಯಲಹಂಕ ಮತ್ತು ಸುತ್ತಮುತ್ತಲ ಪ್ರದೇಶಕ್ಕೆ ವಿಸ್ತರಿಸುವ ಕಾರ್ಯಯೋಜನೆಯನ್ನು ರೂಪಿಸಿ ಅದನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇನೆ. ಅದೇ ರೀತಿ ಈ ಕ್ಷೇತ್ರದಲ್ಲಿ ಬರುವ ಒಂಭತ್ತು ನಗರಗಳಾದ ನೆಲಮಂಗಲ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ, ದೇವನಹಳ್ಳಿ, ವಿಜಯಪುರ ಹಾಗೂ ಹೊಸಕೋಟೆ ನಗರಗಳಲ್ಲಿ ಜೆನರ್ಮ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರದಿಂದ ಹೆಚ್ಚಿನ ಹಣವನ್ನು ಈ ಕ್ಷೇತ್ರಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇನೆ.

ಕುಡಿಯುವ ನೀರಿನ ಬವಣೆ ಅತೀ ಹೆಚ್ಚಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲು ಕೇವಲ ಈ ಮೂರು ಜಿಲ್ಲೆಗಳ ಸಲುವಾಗಿ ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿಯನ್ನು ವಿಭಜಿಸಿ ಆಗ್ನೇಯ ಕರ್ನಾಟಕ ಜಲಮಂಡಲಿಯನ್ನು (South-East Karnataka Water Board) ರಚಿಸಬೇಕು ಅನ್ನೋದು ನನ್ನ ಅಭಿಪ್ರಾಯ. ತಜ್ಞರೊಂದಿಗೆ ಚರ್ಚಿಸಿ, ಇದರ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇನೆ.
ಚಿಕ್ಕಬಳ್ಳಾಪುರದ ಬೆಟ್ಟ ಗುಡ್ಡ ಪ್ರದೇಶದಲ್ಲಿ ಜನಿಸಿ ಗೌರಿ ಬಿದನೂರು ತಾಲೂಕಿನ ಮುಖಾಂತರ ಉತ್ತರಾಭಿಮುಖವಾಗಿ ಹರಿಯುವ ಪೆನ್ನಾರ್ ನದಿಗೆ ಅಡ್ಡಲಾಗಿ ಅಲ್ಲಲ್ಲಿ ಬ್ಯಾರೇಜ್ಗಳನ್ನು ಕಟ್ಟಿ ಅಲ್ಲಿನ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಹಾಗೂ ಅಂತರ್ಜಲ ವೃದ್ಧಿಗೆ ಅನುಕೂಲ ಮಾಡಿಕೊಡಲಾಗುವುದು.
ಮಹಾನಗರದೊಂದಿಗೆ ಚಿಕ್ಕಬಳ್ಳಾಪುರದೊಡನೆ ಹೆಚ್ಚಿನ ಸಂಪರ್ಕ ಕಲ್ಪಿಸಿ, ಇಲ್ಲಿನ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಬೇಕಾದರೆ ಬೆಂಗಳೂರಿನ ಮಹಾನಗರವನ್ನು ಸುತ್ತುವರಿದಿರುವ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳನ್ನು ಸಂಪರ್ಕಿಸುವ ವರ್ತುಲ ರೈಲು (Circular Rail) ಯೋಜನೆಯನ್ನು ಅನುಷ್ಠಾನಗೊಳಿಸುವುದು ಅತಿ ಮುಖ್ಯವಾಗಿದೆ. ಇದರ ಅನುಷ್ಠಾನಕ್ಕೆ ಪ್ರಯತ್ನಿಸುತ್ತೇನೆ.
ಹೆದ್ದಾರಿಗಳ ನಿರ್ಮಾಣ ಹಾಗೂ ಸುಧಾರಣೆ, ಇಲ್ಲಿನ ಜನರ ಆರ್ಥಿಕ ಮಟ್ಟ ಸುಧಾರಿಸಲು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ಸಮೀಪ ಒಂದು ಒಣ ಬಂದರಿನ ನಿರ್ಮಾಣ, ಜೆನರ್ಮ್ ಅಡಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲಾ 9 ನಗರಗಳ ಸಮಗ್ರ ಅಭಿವೃದ್ಧಿ ಇತ್ಯಾದಿ ನನ್ನ ಕನಸುಗಳಾಗಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications