ಕಲ್ಲಪ್ಪ ಪ್ರಾಮಾಣಿಕ, ಅವರ ತೇಜೋವಧೆ ಮಾಡಬೇಡಿ : ಪ್ರತಾಪ್ ಸಿಂಹ
ಬೆಂಗಳೂರು, ಜುಲೈ 05: ಚಿಕ್ಕಮಗಳೂರಿನ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಕಲ್ಲಪ್ಪ ಹಂಡಿಭಾಗ ಪರವಾಗಿ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಮಂಗಳವಾರ ಬರೆದಿದ್ದಾರೆ. ಕಲ್ಲಪ್ಪ ಅವರು ಒಬ್ಬ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾಗಿದ್ದು, ಕುರುಬ ಜನಾಂಗಕ್ಕೆ ಸೇರಿದವರಾಗಿದ್ದರು. [ಕಲ್ಲಪ್ಪ ಪ್ರಕರಣದಲ್ಲಿ ಕಿಡ್ನಾಪ್ ಆಗಿದ್ದ ತೇಜಸ್ ಹೇಳಿದ್ದೇನು?]

ಆದರೆ, ಎಂದಿಗೂ ಜಾತಿಬಲವನ್ನು ಬಳಸಿಕೊಂಡು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಮಾಧ್ಯಮಗಳು ಸತ್ಯವನ್ನು ಹೊರ ತೆಗೆಯಬೇಕು. ಸತ್ಯ ತಿಳಿಯದೆ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಫೇಸ್ಬುಕ್ನಲ್ಲಿ ಸ್ಟೇಟಸ್ ಅಪ್ಡೇಟ್ ಮಾಡಿದ್ದಾರೆ. [ಕಲ್ಲಪ್ಪ ಸಾವಿಗೆ ಕಿರುಕುಳ ಕಾರಣವಲ್ಲ: ಎಸ್ಪಿ ಸಂತೋಷ್]
ಸತ್ಯ ತಿಳಿಯದೇ ಕಲ್ಲಪ್ಪನವರ ಚಾರಿತ್ರ್ಯವನ್ನು ಹರಣ ಮಾಡಬೇಡಿ ಎಂದು ಕೂಡಾ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಾರ್ವಜನಿಕರೊಬ್ಬರು, ನೀವು ಕಲ್ಲಪ್ಪ ಬಗ್ಗೆ ಹೇಗೆ ಮಾತನಾಡುತ್ತೀರಿ, ನಿಮಗೆ ಗೊತ್ತೆ ಎಂದು ಪ್ರಶ್ನಿಸಿದ್ದಾರೆ.[ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ]
ಇದಕ್ಕೆ ಉತ್ತರಿಸಿರುವ ಪ್ರತಾಪ್ ಸಿಂಹ, ನನ್ನ ಸ್ನೇಹಿತರೊಬ್ಬರಿಗೆ ಕಲ್ಲಪ್ಪ ಬಗ್ಗೆ ಚೆನ್ನಾಗಿ ಗೊತ್ತಿದೆ. ಅಷ್ಟೇ ಅಲ್ಲದೇ ಕಿಡ್ನಾಪ್ ಆದ ತೇಜಸ್ ತೌಡ ಕೂಡಾ ನನ್ನ ಸ್ನೇಹಿತೆ ಶ್ರುತಿ ಎಂಬುವರ ಸಹೋದರ ಎಂದು ಪ್ರತಿಕ್ರಿಯಿಸಿದ್ದಾರೆ. ಐನೂರಕ್ಕೂ ಹೆಚ್ಚು ಬಾರಿ ಹಂಚಿಕೆಯಾಗಿರುವ ಈ ಫೇಸ್ ಬುಕ್ ಪೋಸ್ಟ್ ಹಾಗೂ ಅದರಲ್ಲಿ ಬಂದಿರುವ ಕಾಮೆಂಟ್ ಗಳನ್ನು ಅಲ್ಲೇ ನೋಡಿ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications