ಬಿಬಿಎಂಪಿ: 280 ಟನ್ ತ್ಯಾಜ್ಯ ಸಂಸ್ಕರಣಾ ಘಟಕ ಕಾರ್ಯಾಚರಣೆ ಶೀಘ್ರ ಆರಂಭ
ಬೆಂಗಳೂರು, ಆಗಸ್ಟ್ 25: ಬೆಂಗಳೂರಿನ ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ವಿನೂತನವಾಗಿ ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್ ಸ್ಥಾಪಿಸಲಾಗಿದೆ. ಅದನ್ನು ಶೀಘ್ರ ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಯ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ನಗರದ ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ತ್ಯಾಜ್ಯದಿಂದ ಉತ್ಪತ್ತಿಯಾಗುವ ಲೀಚೆಟ್ ಅನ್ನು ವೈಜ್ಞಾನಿಕವಾಗಿ ಸಂಸ್ಕರಿಸುವ ನಿಟ್ಟಿನಲ್ಲಿ ವಿನೂತನ ಮಾದರಿಯಲ್ಲಿ ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್ ಅನ್ನು ಪರಿಶುದ್ಧ್ ವೆಂಚರ್ಸ್ ಸಂಸ್ಥೆಯಿಂದ ಸ್ಥಾಪಿಸಲಾಗಿದೆ. ಸದ್ಯ ಪ್ರಾಯೋಗಿಕವಾಗಿ ಲೀಚೆಟ್ ನೀರನ್ನು ಸಂಸ್ಕರಣೆ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕ್ಲಿಯರೆನ್ಸ್ ನೀಡಿದ ಬಳಿಕ ಟ್ರೀಟ್ಮೆಂಟ್ ಪ್ಲಾಂಟ್ ಅನ್ನು ಉದ್ಘಾಟಿಸಿ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲಾಗುವುದೆಂದು ಅವರು ವಿವರಿಸಿದರು.

ಲೀಚೆಟ್ ಟ್ರೀಟ್ಮೆಂಟ್ ಪ್ಲಾಂಟ್ ನಲ್ಲಿ ಪ್ರತಿನಿತ್ಯ 50 ಸಾವಿರ ಲೀಟರ್ ಲೀಚೆಟ್ ಅನ್ನು ಸಂಸ್ಕರಿಸುವ ಸಾಮರ್ಥ್ಯ ಇದೆ. ಅದರಿಂದ ಸುಮಾರು 30 ಸಾವಿರ ಲೀಟರ್ ಶುದ್ಧ ನೀರು ಉತ್ಪತ್ತಿಯಾಗಲಿದೆ. ಲೀಚೆಟ್ ಪ್ಲಾಂಟ್ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾದ ನಂತರ ಲೀಚೆಟ್ ಅನ್ನು ಸಂಸ್ಕರಿಸಿ ಅದರಿಂದ ಸಿಗುವ ಶುದ್ಧ ನೀರನ್ನು ರೈತರು ಅಥವಾ ಕಟ್ಟಡ ನಿರ್ಮಾಣ ಮಾಡುವವರಿಗೆ ಉಚಿತವಾಗಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ನಿತ್ಯ 280 ಟನ್ ತ್ಯಾಜ್ಯ ಸಂಸ್ಕರಣೆ
ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಪ್ರತಿನಿತ್ಯ 300 ಟನ್ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯ ಇದೆ. ಸದ್ಯ ಪ್ರತಿನಿತ್ಯ ಸರಾಸರಿ 280 ಟನ್ ತ್ಯಾಜ್ಯ ಸಂಸ್ಕರಣೆ ಮಾಡಲಾಗುತ್ತಿದೆ. ಸಂಸ್ಕರಣಾ ಘಟಕದಲ್ಲಿ ದುರಸ್ತಿಯಿರುವ ಯಂತ್ರಗಳನ್ನು ಕೂಡಲೆ ಸರಿಪಡಿಸಬೇಕು. ಜೊತೆಗೆ ಎಲ್ಲಾ ಕಡೆ ಎಲ್ಇಡಿ ದೀಪಗಳನ್ನು ಅಳವಡಿಸಿ ದಿನದ 24 ಗಂಟೆಯೂ ತ್ಯಾಜ್ಯ ಸಂಸ್ಕರಣಾ ಘಟಕ ಕಾರ್ಯನಿರ್ವಹಿಸುವಂತೆ ಮಾಡಿ ಪಾಲಿಕೆಯ ಮಾದರಿ ತ್ಯಾಜ್ಯ ಸಂಸ್ಕರಣಾ ಘಟಕವನ್ನಾಗಿ ಮಾಡಬೇಕು ಎಂದರು.

ಸಂಸ್ಕರಣಾ ಘಟಕದಲ್ಲಿರುವ ಖಾಲಿ ಜಾಗವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಈಗಾಗಲೇ ಹಾಳಾಗಿರುವ ಯಂತ್ರೋಪಕರಣಗಳು ಹಾಗೂ ಸಂಬಂಧಿಸಿದ ವಾಹನಗಳನ್ನು ಹರಾಜಿಗೆ ಹಾಕಲು ಸೂಚಿಸಿದರು.
ಘಟಕ ಬಗ್ಗೆ ಪ್ರಚಾರ ನೀಡಲು ಸಲಹೆ
ಚಿಕ್ಕನಾಗಮಂಗಲ ತ್ಯಾಜ್ಯ ಸಂಸ್ಕರಣಾ ಘಟಕವು ಸಂಪೂರ್ಣವಾಗಿ ಕಾರ್ಯರಂಭ ಮಾಡಿದ ಬಳಿಕ ಸಂಸ್ಕರಣಾ ಘಟಕದ ಬಗ್ಗೆ ಅಲ್ಲಲ್ಲಿ ನಾಮಫಲಕಗಳನ್ನು ಅಳವಡಿಸಬೇಕು. ಸದರಿ ನಾಮಫಲಕಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕದ ಸವಿವರವಾದ ಮಾಹಿತಿಯನ್ನು ಅಳವಡಿಸಲು ಸೂಚನೆ ನೀಡಿದರು.
ಅದಷ್ಟೇ ಅಲ್ಲದೇ ತ್ಯಾಜ್ಯ ಸಂಸ್ಕರಣಾ ಘಟಕದ ಬಗ್ಗೆ ನಾಗರಿಕರು ಹಾಗೂ ಶಾಲಾ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ವಾರದ ಪ್ರತಿ ಗುರುವಾರ, ಶುಕ್ರವಾರ ಹಾಗೂ ಶನಿವಾರದ ದಿನಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಮಾಹಿತಿ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಪರಿಶೀಲನೆಯ ವೇಳೆ ವಲಯ ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ವಲಯ ಮುಖ್ಯ ಆಭಿಯಂತರರಾದ ರಾಜೇಶ್, ಸಂಸ್ಕರಣಾ ಘಟಕದ ವ್ಯವಸ್ಥಾಪಕಿ ಅರ್ಪಿತಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications