ಮಕ್ಕಳ ಕೈಯಲ್ಲಿ ಮೊಬೈಲ್: ಆರೋಗ್ಯ ಇಲಾಖೆ ಸಮೀಕ್ಷೆಯಲ್ಲಿ ಆಘಾತಕಾರಿ ವಿಚಾರ ಬಹಿರಂಗ
ಬೆಂಗಳೂರು, ಅಕ್ಟೋಬರ್ 23: ಇತ್ತೀಚಿಗೆ ಮಕ್ಕಳೇನಾದರೂ ಹಠ ಮಾಡುತ್ತಿದ್ದರೆ ಹೆತ್ತವರು ಟಕ್ ಎಂದು ಮೊಬೈಲ್ ಕೊಟ್ಟು ಬಿಟ್ಟು ಸುಮ್ಮನಾಗುತ್ತಾರೆ. ಈ ರೀತಿ ಮಾಡುವ ಪೋಷಕರು ಈ ಸುದ್ದಿ ಓದಲೇ ಬೇಕು. ಹೆತ್ತವರ ಈ ಸಣ್ಣ ತಪ್ಪಿನಿಂದ ಇದೀಗ ಮಕ್ಕಳ ಕಣ್ಣಿನ ದೃಷ್ಟಿಯನ್ನೇ ಕಸಿದುಕೊಳ್ಳುತ್ತಿರುವ ಆಘಾತಕಾರಿ ವಿಚಾರವನ್ನು ಅಧ್ಯಯನವೊಂದು ಬೆಳಕಿಗೆ ತಂದಿದೆ.
ಅಳುತ್ತಿರುವ ಅಥವಾ ಹಠ ಮಾಡುತ್ತಿರುವ ಮಕ್ಕಳನ್ನು ಸಮಾಧಾನ ಮಾಡಿಸಲು ಹೆತ್ತವರು ಪ್ರಯೋಗ ಮಾಡುವ ಮೊದಲ ಅಸ್ತ್ರವೇ ಈ ಮೊಬೈಲ್. ಹೀಗೆ ಪ್ರತಿಯೊಂದು ವಿಚಾರಕ್ಕೂ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಸುಮ್ಮನಾಗುವ ಪೋಷಕರು, ಈ ಸುದ್ದಿಯನ್ನು ಸಂಪೂರ್ಣ ಓದಿ.

ರಾಜ್ಯದಲ್ಲಿ ದೃಷ್ಟಿ ದೋಷದಿಂದ ಬಳಲುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಇಂತಹದೊಂದು ಅಂಶ ಬಯಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 1 ಲಕ್ಷದ 70 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ರೀತಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಶಿಕ್ಷಕರು ಬೋರ್ಡ್ನಲ್ಲಿ ಬರೆದಿರುವ ಅಕ್ಷರವೇ ಸರಿಯಾಗಿ ಕಾಣದೆ, ಕೆಲ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದರೆ. ಇನ್ನು ಕೆಲವು ಸ್ಟೂಡೆಂಟ್ಸ್, ಸಮೀಪದಲ್ಲಿರುವ ವಸ್ತುಗಳತ್ತ ನೋಡಲಾಗದೇ ಒದ್ದಾಡುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಈ ರೀತಿಯ ಸಮಸ್ಯೆಗೆ ಸಿಲುಕಿದ್ದು, ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ.
ರಾಜ್ಯದಲ್ಲಿ ಯಾವ್ಯಾವ ಪ್ರಮುಖ ಜಿಲ್ಲೆಗಳಲ್ಲಿ ಎಷ್ಟೆಷ್ಟು ಮಕ್ಕಳು ದೃಷ್ಟಿ ದೋಷದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.
ಜಿಲ್ಲೆ ಮಕ್ಕಳ ಸಂಖ್ಯೆ
ಬೆಳಗಾವಿ - 39,997
ವಿಜಯಪುರ - 13,170
ಬಿಬಿಎಂಪಿ ವ್ಯಾಪ್ತಿ - 10, 193
ದಾವಣಗೆರೆ - 6,348
ಬೀದರ್ - 5,667
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಮಕ್ಕಳ ಮೊಬೈಲ್ ಬಳಕೆ: ನಿಷೇಧಕ್ಕಿಂತ ಡಿಜಿಟಲ್ ಪೇರಂಟಿಂಗ್ ಅಗತ್ಯ ಎಂದು ತಜ್ಞರ ಸಲಹೆ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ











Click it and Unblock the Notifications