ಮಕ್ಕಳ ಕೈಯಲ್ಲಿ ಮೊಬೈಲ್: ಆರೋಗ್ಯ ಇಲಾಖೆ ಸಮೀಕ್ಷೆಯಲ್ಲಿ ಆಘಾತಕಾರಿ ವಿಚಾರ ಬಹಿರಂಗ
ಬೆಂಗಳೂರು, ಅಕ್ಟೋಬರ್ 23: ಇತ್ತೀಚಿಗೆ ಮಕ್ಕಳೇನಾದರೂ ಹಠ ಮಾಡುತ್ತಿದ್ದರೆ ಹೆತ್ತವರು ಟಕ್ ಎಂದು ಮೊಬೈಲ್ ಕೊಟ್ಟು ಬಿಟ್ಟು ಸುಮ್ಮನಾಗುತ್ತಾರೆ. ಈ ರೀತಿ ಮಾಡುವ ಪೋಷಕರು ಈ ಸುದ್ದಿ ಓದಲೇ ಬೇಕು. ಹೆತ್ತವರ ಈ ಸಣ್ಣ ತಪ್ಪಿನಿಂದ ಇದೀಗ ಮಕ್ಕಳ ಕಣ್ಣಿನ ದೃಷ್ಟಿಯನ್ನೇ ಕಸಿದುಕೊಳ್ಳುತ್ತಿರುವ ಆಘಾತಕಾರಿ ವಿಚಾರವನ್ನು ಅಧ್ಯಯನವೊಂದು ಬೆಳಕಿಗೆ ತಂದಿದೆ.
ಅಳುತ್ತಿರುವ ಅಥವಾ ಹಠ ಮಾಡುತ್ತಿರುವ ಮಕ್ಕಳನ್ನು ಸಮಾಧಾನ ಮಾಡಿಸಲು ಹೆತ್ತವರು ಪ್ರಯೋಗ ಮಾಡುವ ಮೊದಲ ಅಸ್ತ್ರವೇ ಈ ಮೊಬೈಲ್. ಹೀಗೆ ಪ್ರತಿಯೊಂದು ವಿಚಾರಕ್ಕೂ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಸುಮ್ಮನಾಗುವ ಪೋಷಕರು, ಈ ಸುದ್ದಿಯನ್ನು ಸಂಪೂರ್ಣ ಓದಿ.

ರಾಜ್ಯದಲ್ಲಿ ದೃಷ್ಟಿ ದೋಷದಿಂದ ಬಳಲುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಇಂತಹದೊಂದು ಅಂಶ ಬಯಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 1 ಲಕ್ಷದ 70 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ರೀತಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಶಿಕ್ಷಕರು ಬೋರ್ಡ್ನಲ್ಲಿ ಬರೆದಿರುವ ಅಕ್ಷರವೇ ಸರಿಯಾಗಿ ಕಾಣದೆ, ಕೆಲ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದರೆ. ಇನ್ನು ಕೆಲವು ಸ್ಟೂಡೆಂಟ್ಸ್, ಸಮೀಪದಲ್ಲಿರುವ ವಸ್ತುಗಳತ್ತ ನೋಡಲಾಗದೇ ಒದ್ದಾಡುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಈ ರೀತಿಯ ಸಮಸ್ಯೆಗೆ ಸಿಲುಕಿದ್ದು, ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ.
ರಾಜ್ಯದಲ್ಲಿ ಯಾವ್ಯಾವ ಪ್ರಮುಖ ಜಿಲ್ಲೆಗಳಲ್ಲಿ ಎಷ್ಟೆಷ್ಟು ಮಕ್ಕಳು ದೃಷ್ಟಿ ದೋಷದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.
ಜಿಲ್ಲೆ ಮಕ್ಕಳ ಸಂಖ್ಯೆ
ಬೆಳಗಾವಿ - 39,997
ವಿಜಯಪುರ - 13,170
ಬಿಬಿಎಂಪಿ ವ್ಯಾಪ್ತಿ - 10, 193
ದಾವಣಗೆರೆ - 6,348
ಬೀದರ್ - 5,667
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications