ಬೆಂಗಳೂರಿನಲ್ಲಿ ಮತ್ತೆರಡು ದೊಡ್ಡ ಕೊವಿಡ್ ಕೇಂದ್ರಗಳು ನಿರ್ಮಾಣ!
ಬೆಂಗಳೂರು, ಜುಲೈ 11: ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನಾ ಕೇಂದ್ರದಲ್ಲಿ (BIEC) 10,100 ಹಾಸಿಗೆಯ ಸಾಮರ್ಥ್ಯದ ವಿಶ್ವದ ಬಹುದೊಡ್ಡ ಕೊವಿಡ್ ಆರೈಕೆ ಕೇಂದ್ರ ನಿರ್ಮಿಸಲಾಗಿದೆ. ಈ ವಾರದಲ್ಲಿ ಇದು ಕಾರ್ಯಾರಂಭವಾಗಲಿದೆ ಎಂದು ಬಿಬಿಎಂಪಿ ಹಾಗು ರಾಜ್ಯ ಸರ್ಕಾರ ತಿಳಿಸಿದೆ.
Recommended Video
ಇದೀಗ, ಬೆಂಗಳೂರಿನಲ್ಲಿ ಮತ್ತೆರಡು ಕಡೆ ಅತಿ ದೊಡ್ಡ ಕೊವಿಡ್ ಚಿಕಿತ್ಸಾ ಕೇಂದ್ರಗಳನ್ನು ಸಿದ್ದಪಡಿಸುವ ಆಲೋಚನೆ ಇದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಹಾಗೂ ಬೆಂಗಳೂರು ಅರಮನೆ ಮೈದಾನದಲ್ಲಿ ಪ್ರತ್ಯೇಕ ಕೊವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಗುರುವಾರ ಸಿಎಂ ಕಚೇರಿಯ ಮೂಲಕಗಳು ತಿಳಿಸಿವೆ. ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಸಹ ವರದಿ ಮಾಡಿದೆ.

ಕಳೆದ ಹತ್ತು ಹದಿನೈದು ದಿನಗಳಿಂದ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಖಾಸಗಿ ಹಾಗು ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ ಇದೆ ಎಂಬ ವರದಿಗಳು ಕಂಡು ಬಂದಿದೆ. ಇದು ಸಹಜವಾಗಿ ಸಿಲಿಕಾನ್ ಸಿಟಿ ನಾಗರಿಕರನ್ನು ಆತಂಕ್ಕೆ ಒಳಪಡುವಂತೆ ಮಾಡಿತ್ತು.
ಆದ್ರೀಗ, ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪ್ರತ್ಯೇಕ ಕೊವಿಡ್ ಕೇಂದ್ರಗಳ ಸ್ಥಾಪನೆಗೆ ಮುಂದಾಗಿದೆ. ಇದು ನಿಜಕ್ಕೂ ಸಮಾಧಾನಕರ ಸಂಗತಿಯಾಗಿದೆ.
ಜುಲೈ 10ರ ವರದಿಯಂತೆ ಬೆಂಗಳೂರಿನಲ್ಲಿ ಹೊಸದಾಗಿ 1147 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15329ಕ್ಕೆ ಏರಿಕೆಯಾಗಿತ್ತು. 3435 ಮಂದಿ ಗುಣಮುಖರಾಗಿದ್ದರೆ, 11687 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications