Get Updates
Get notified of breaking news, exclusive insights, and must-see stories!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಹಾವಳಿ: RCB ಪಂದ್ಯದ ವೇಳೆ 50ಕ್ಕೂ ಹೆಚ್ಚು ಫೋನ್ ಕಳವು ಆರೋಪ

ಬೆಂಗಳೂರು: ಸಿಲಿಕಾನ್ ಸಿಟಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ಭಾರೀ ಪ್ರಮಾಣದ ಮೊಬೈಲ್ ಫೋನ್‌ಗಳು ಕಳ್ಳತನವಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇದು ಕೇವಲ ಸಣ್ಣ ಕಳ್ಳತನವಲ್ಲ, ಇದೊಂದು "ಸಂಘಟಿತ ಅಪರಾಧ" ಎಂದು ಸಂತ್ರಸ್ತ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ರೀತು ತಿವಾರಿ ಎಂಬುವವರು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪಂದ್ಯದ ಮೊದಲ ಇನಿಂಗ್ಸ್ ವಿರಾಮದ ಸಮಯದಲ್ಲಿ ಅವರ ಪತಿ ನೀರು ತರಲು ಹೋದಾಗ, ಸೀಟಿನ ಮೇಲಿದ್ದ ಫೋನ್ ನಾಪತ್ತೆಯಾಗಿದೆ. ಕೇವಲ ಇವರೊಬ್ಬರದೇ ಅಲ್ಲ, ಕ್ರೀಡಾಂಗಣದ P3 ಸ್ಟ್ಯಾಂಡ್‌ನಿಂದ ಸುಮಾರು 50ರಿಂದ 60 ಮೊಬೈಲ್ ಫೋನ್‌ಗಳು ಕಳ್ಳತನವಾಗಿವೆ ಎಂದು ಅವರು ಆರೋಪಿಸಿದ್ದಾರೆ.

Chinnaswamy Stadium

ಪೊಲೀಸರ ವಿರುದ್ಧ ಅಸಮಾಧಾನ

"ನಾವು ಸಹಾಯಕ್ಕಾಗಿ ಕ್ರೀಡಾಂಗಣದಲ್ಲಿದ್ದ ಪೊಲೀಸರ ಬಳಿ ಹೋದಾಗ ಅವರು ಯಾವುದೇ ಆಸಕ್ತಿ ತೋರಿಸಲಿಲ್ಲ. ನಂತರ ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ನೂರಾರು ಜನರು ಇದೇ ರೀತಿಯ ದೂರು ನೀಡಲು ಸಾಲುಗಟ್ಟಿ ನಿಂತಿರುವುದನ್ನು ನೋಡಿ ಬೆಚ್ಚಿಬಿದ್ದೆವು" ಎಂದು ರೀತು ವಿಡಿಯೋದಲ್ಲಿ ತಿಳಿಸಿದ್ದಾರೆ. ಕ್ರೀಡಾಂಗಣದಂತಹ ಬಿಗಿ ಭದ್ರತೆ ಇರುವ ಜಾಗದಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಫೋನ್‌ಗಳು ಕಳ್ಳತನವಾಗಿರುವುದು ಭದ್ರತಾ ಲೋಪವನ್ನು ಎತ್ತಿ ತೋರಿಸುತ್ತದೆ. "ಇದು ವ್ಯವಸ್ಥಿತವಾಗಿ ನಡೆಯುತ್ತಿರುವ ಸಂಘಟಿತ ಅಪರಾಧದಂತೆ ಕಾಣುತ್ತಿದೆ. ಇಷ್ಟು ಜನರ ನಂಬಿಕೆ ಮತ್ತು ಭದ್ರತೆಗೆ ಧಕ್ಕೆ ಬಂದಿರುವುದು ಸರಿಯಲ್ಲ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ಬೆಂಗಳೂರು ಪೊಲೀಸರು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಳೆದುಹೋದ ವಸ್ತುಗಳನ್ನು ಪತ್ತೆಹಚ್ಚಬೇಕು ಮತ್ತು ಅಪರಾಧಿಗಳನ್ನು ಬಂಧಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೆ ಕ್ರೀಡಾಂಗಣಕ್ಕೆ ಬರುವ ಕ್ರಿಕೆಟ್ ಅಭಿಮಾನಿಗಳು ತಮ್ಮ ವಸ್ತುಗಳ ಬಗ್ಗೆ ಜಾಗರೂಕರಾಗಿರುವಂತೆ ಅವರು ಎಚ್ಚರಿಸಿದ್ದಾರೆ.

ರೀತು ತಿವಾರಿ ಅವರ ಪ್ರಕಾರ, ಪೊಲೀಸರು ಈಗಾಗಲೇ 10ರಿಂದ 12 ಹುಡುಗರನ್ನು ವಶಕ್ಕೆ ಪಡೆದಿದ್ದಾರೆ. ಇವರೆಲ್ಲರೂ ಅಪ್ರಾಪ್ತ ವಯಸ್ಕರಾಗಿದ್ದು ಕ್ರೀಡಾಂಗಣದ ಒಳಗೆ ಯಾರಿಗೂ ಸಂಶಯ ಬಾರದಂತೆ ಆರ್‌ಸಿಬಿ ಜರ್ಸಿ ಧರಿಸಿದ್ದರು. ಅಷ್ಟೇ ಅಲ್ಲದೆ, ಇವರ ಬಳಿ ಕ್ರೀಡಾಂಗಣ ಪ್ರವೇಶಿಸಲು ಅಧಿಕೃತ ಕಾಂಪ್ಲಿಮೆಂಟರಿ ಟಿಕೆಟ್‌ಗಳೂ ಇದ್ದವು ಎಂದು ದೂರಿದ್ದಾರೆ.

ಎರಡನೇ ಇನಿಂಗ್ಸ್ ಸಮಯದಲ್ಲಿ ಕಳ್ಳತನ

ತನಿಖೆಯ ವೇಳೆ ತಿಳಿದುಬಂದಂತೆ, ಹೆಚ್ಚಿನ ಕಳ್ಳತನಗಳು ಪಂದ್ಯದ ಎರಡನೇ ಇನಿಂಗ್ಸ್ ಸಮಯದಲ್ಲಿ ನಡೆದಿವೆ. ಈ ವೇಳೆ ಜನರು ನೀರು ಅಥವಾ ಉಪಹಾರ ತರಲು ತಮ್ಮ ಸೀಟು ಬಿಟ್ಟು ಹೋದಾಗ, ಈ ತಂಡವು ಕ್ಷಣಾರ್ಧದಲ್ಲಿ ಮೊಬೈಲ್‌ಗಳನ್ನು ಎಗರಿಸುತ್ತಿತ್ತು. ಕಳ್ಳತನದ ನಂತರ ಈ ಕಿರಾತಕರು ತಕ್ಷಣವೇ ಕ್ರೀಡಾಂಗಣದಿಂದ ಹೊರಬರುತ್ತಿದ್ದರು ಎನ್ನಲಾಗಿದೆ. ನಾನು ಗೂಗಲ್‌ನಲ್ಲಿ ಹುಡುಕಿದಾಗ, ಚೆನ್ನೈನ ಚಿದಂಬರಂ ಮತ್ತು ಮುಂಬೈನ ವಾಂಖೆಡೆ ಕ್ರೀಡಾಂಗಣಗಳಲ್ಲೂ ಇದೇ ರೀತಿಯ ಘಟನೆಗಳು ನಡೆದಿರುವುದು ಬೆಳಕಿಗೆ ಬಂದಿದೆ. ಮೊಬೈಲ್ ಕಳ್ಳರ ಜಾಲವು ದೇಶಾದ್ಯಂತ ನಡೆಯುವ ಎಲ್ಲ ಐಪಿಎಲ್ ಪಂದ್ಯಗಳ ಮೇಲೆ ಕಣ್ಣಿಟ್ಟಿದೆ ಎಂದು ರೀತು ಕಳವಳ ವ್ಯಕ್ತಪಡಿಸಿದ್ದಾರೆ.

ಸದ್ಯ ಪೊಲೀಸರು ಕ್ರೀಡಾಂಗಣದ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದು, ಈ ಜಾಲದ ಹಿಂದೆ ಇರುವ ಪ್ರಮುಖ ವ್ಯಕ್ತಿಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಅಪ್ರಾಪ್ತರಿಗೆ ಕಾಂಪ್ಲಿಮೆಂಟರಿ ಟಿಕೆಟ್‌ಗಳು ಹೇಗೆ ಸಿಕ್ಕವು ಮತ್ತು ಇವರ ಹಿಂದೆ ದೊಡ್ಡ ಮಾಫಿಯಾ ಕೆಲಸ ಮಾಡುತ್ತಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

Vaibhav Suryavanshi: ಸಂಜು ಟೀಂ ವಿರುದ್ಧವೇ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ
Vaibhav Suryavanshi: ಸಂಜು ಟೀಂ ವಿರುದ್ಧವೇ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ

ಸಂತ್ರಸ್ತ ಮಹಿಳೆ ರೀತು ತಿವಾರಿ ಅವರು ಹಂಚಿಕೊಂಡ ಇನ್‌ಸ್ಟಾಗ್ರಾಂ ವಿಡಿಯೋ ಮತ್ತು ಮಾಹಿತಿ ಈಗಾಗಲೇ 3,14,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಕಂಡಿದೆ. ಸುಮಾರು 10,000ಕ್ಕೂ ಹೆಚ್ಚು ಜನರು ಲೈಕ್ ಮಾಡುವ ಮೂಲಕ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ, ಐಪಿಎಲ್ ಪಂದ್ಯಗಳ ವೇಳೆ ಕ್ರೀಡಾಂಗಣದಲ್ಲಿರುವ ಭದ್ರತೆಯ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+