ಇಡಿ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು, ಬಿಗ್ ರಿಲೀಫ್
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಬಳಿಕ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಹೊಸ ವರ್ಷ 2026 ಮುನ್ನ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಮಂಗಳವಾರ (ಡಿಸೆಂಬರ್ 30) ಆದೇಶ ಹೊರಡಿಸಿದೆ.
ಅಕ್ರಮವಾಗಿ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಬಚ್ಚಿಟ್ಟಿದ್ದ ಅಪಾರ ಪ್ರಮಾಣದ ನಗದು, ವಿದೇಶಿ ಹಣ, ಚಿನ್ನಾಭರಣವ ವಶಕ್ಕೆ ಪಡೆಯಲಾಗಿತ್ತು. ನಂತರ ವಿರೇಂದ್ರ ಪಪ್ಪಿಯ ಬಂಧನವಾಗಿತ್ತು. ಅಲ್ಲಿಂದ ಈವರೆಗೆ ಜೈಲಿನಲ್ಲಿದ್ದ ಪಪ್ಪಿಗೆ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ಮಂಜು ಮಾಡಿದೆ. ಇದರಿಂದ ಅವರ ನಾಲ್ಕು ತಿಂಗಳ ಜೈಲು ವಾಸ ಅಂತ್ಯಗೊಂಡಿದೆ.

ಅಪಾರ ಹಣ ವರ್ಗಾವಣೆ ಪತ್ತೆ: ದಾಳಿಯಲ್ಲಿ 55 ಕೋಟಿ ರೂ. ಜಪ್ತಿ
ಶಾಸಕ ವಿರೇಂದ್ರ ಪಪ್ಪಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಚಿತ್ರದುರ್ಗ, ಬೆಂಗಳೂರು, ಹುಬ್ಬಳ್ಳಿ ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ 55 ಕೋಟಿ ರೂಪಾಯಿ ನಗದು ವಶಕ್ಕೆ ಪಡೆದಿತ್ತು. ನಗದು ಸೇರಿ ಅಪಾರ ಸಂಪತ್ತು ಪತ್ತೆ ಆಗಿತ್ತು. ಪ್ರಕರಣ ಸಂಬಂಧಿ ಪೊಲೀಸರು ಪಪ್ಪಿಯನ್ನು ಬಂಧಿಸಿದ್ದರು.
ಇಡಿ ಅಧಿಕಾರಿಗಳು ಒಂಬತ್ತು ಬ್ಯಾಂಕ್ಗಳ ಖಾತೆಗಳು, 260ಕ್ಕು ಅಧಿಕ ಮ್ಯೂಲ್ ಖಾತೆಗಳಲ್ಲಿನ (ಒಟ್ಟು 55 ಕೋಟಿ ರೂ) ನಗದನ್ನು ಜಪ್ತಿ ಮಾಡಿದರು. ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದರು. ಐದು ಐಶಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದರು.
ಬೆಲ್ಲಾಜಿಯೋ ಕ್ಯಾಸಿನೊ, ಮರೀನಾ ಕ್ಯಾಸಿನೊ, ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಕ್ಯಾಸಿನೋ ಜುವೆಲ್ ಹೀಗೆ ಹಲವು ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ ಹೊಂದಿದ್ದರೆಂದು ತನಿಖೆಯಿಂದ ಗೊತ್ತಾಗಿದೆ. ಅಲ್ಲದೇ ವಿವಿಧ ಬ್ಯಾಂಕ್ಗಳಲ್ಲಿ ಖಾತೆಗಳಿಗೆ ಹಣ ವರ್ಗಾವಣೆ ಆಗುತ್ತಿತ್ತು. ಐಶಾರಾಮಿ ಆತಿಥ್ಯ ವಹಿಸುತ್ತಿದ್ದರು. ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ಗಳ ಬಳಕೆ, ಆರ್ಥಿಕ ವ್ಯವಹಾರಗಳು, ಅಕ್ರಮ ಹಣ ವರ್ಗಾವಣೆಯ ಎಲ್ಲ ಮಾಹಿತಿ ಸಂಗ್ರಹಿಸಿ ಇಡಿ ಅಧಿಕಾರಿಗಳು ದಾಳಿ ಮಾಡಿ ಶಾಕ್ ನೀಡಿದ್ದರು. ಅಲ್ಲಿಂದ ವೀರೇಂದ್ರ ಪಪ್ಪಿಗೆ ಜೈಲು ಗತಿಯಾಗಿತ್ತು. ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪಪ್ಪಿ ಅರ್ಜಿ ನಿರಂತರ ವಿಚಾರಣೆ ನಡೆದು ಇವತ್ತು ಕೋರ್ಟ್ ಜಾಮೀನು ಮಂಜೂರು ಮಾಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications