ಚಿತ್ರಹಾರ್ : ವಿಶಿಷ್ಟ ಅರ್ಥಪೂರ್ಣ ಸಂಗೀತ ಸಂಜೆ
ಬೆಂಗಳೂರು, ಜೂನ್ 09: "ಚಿತ್ರಹಾರ್",ಇದು 1960, 70, 80 ಮತ್ತು 90ರ ಹಿಂದಿ ಚಲನ ಚಿತ್ರಗೀತೆಗಳ ಸುಂದರ ಸಂಗೀತ ಸಂಜೆ. ಈ ಸಂಗೀತ ಸಂಜೆಯನ್ನು ರಾಮಚಂದ್ರ ಗ್ರಾಮೀಣ ವಿದ್ಯಾ ವಿಕಾಸ ಕೇಂದ್ರ ಟ್ರಸ್ಟ್ ರವರ ಸಹಾಯಾರ್ಥವಾಗಿ ಏರ್ಪಡಿಸಲಾಗಿದೆ.
ಈ ಸಂಗೀತ ಸಂಜೆಯಲ್ಲಿ ಹಿಂದಿ ಚಲನಚಿತ್ರದ ಸುಪ್ರಸಿದ್ಧ ಗಾಯಕರ ಪ್ರಖ್ಯಾತ ಹಾಗೂ ಅವಿಸ್ಮರಣೀಯ ಗೀತೆಗಳನ್ನು ಪ್ರಸ್ತುತ ಪಡಿಸಲಾಗುತ್ತದೆ.
'ಮುಜ್ರಾ' ದಿಂದ ಹಿಡಿದು ವೇಗದ ಗತಿಯ ಗೀತೆಗಳು ಸೇರಿದಂತೆ ಹಲವು ವಿಧದ ಚಿರಸ್ಮರಣೀಯ ಸುಪ್ರಸಿದ್ಧ ಗೀತೆಗಳನ್ನು ಪ್ರಸ್ತುತ ಪಡಿಸಲಾಗುತ್ತದೆ.
ಕಾರ್ಯಕ್ರಮ : ಚಿತ್ರ ಹಾರ್
ದಿನಾಂಕ : 11/06/2016
ಸ್ಥಳ: ಚೌಡಯ್ಯ ಸ್ಮಾರಕ ಭವನ, ಬೆಂಗಳೂರು
ಸಮಯ: ಸಂಜೆ 6 ಗಂಟೆ ನಂತರ
ಹೆಚ್ಚಿನ ಮಾಹಿತಿಗೆ ಭೇಟಿ ಕೋಡಿ: talkofthetown.in / Call : 80959 04455
ಈ ಕಾರ್ಯಕ್ರಮದ ರೂವಾರಿ ಹಾಗೂ ಮುಖ್ಯ ಗಾಯಕಿಯಾದ ಸಮನ್ವಿತ ಶರ್ಮ ರವರು ಬೆಂಗಳೂರಿನ ಸಾಂಸ್ಕ್ರತಿಕ ವಲಯದಲ್ಲಿ ಒಬ್ಬ ಪ್ರತಿಷ್ಠಿತ, ಸುಪ್ರಸಿದ್ಧ ಹಾಗೂ ಹೆಸರಾಂತ ಗಾಯಕಿ. ಇವರು ಕನ್ನಡ ಚಲನಚಿತ್ರರಂಗದ ಹಿನ್ನೆಲೆ ಗಾಯಕಿಯಾಗಿದ್ದು ಇತ್ತೀಚಿನ ಚಿತ್ರ "ಜೆಸ್ಸಿ" ಯಲ್ಲಿನ 'ಮಳೆ ಬಂತು' ಈ ಸುಪ್ರಸಿದ್ಧ ಹಾಡಿಗೆ ಹಿನ್ನೆಲೆ ಗಾಯನ ನೀಡಿದ್ದಾರೆ.

ಹಲವಾರು ಕಲೆಗಳಲ್ಲಿ ಪರಿಣತಿ ಹೊಂದಿರುವ ಇವರು ಗಾಯಕಿಯಾಗಿ, ನಿರೂಪಕಿಯಾಗಿ, ಶಾಸ್ತ್ರೀಯ ನೃತ್ಯಗಾರ್ತಿಯಾಗಿ, ಸಂಗೀತ ಸಂಯೋಜಕಿಯಾಗಿ ಹಾಗೂ ಒಬ್ಬ ಕಲಾ ಉದ್ಯಮಿಯಾಗಿ ಲೋಕಪ್ರಿಯರಾಗಿರುವರು.
ಈ ಉತ್ಸಾಹಪೂರ್ಣ ಸಂಗೀತ ಸಂಜೆಯಲ್ಲಿ ಪಾಲ್ಗೊಳ್ಳುವ ಇತರ ಗಾಯಕ ಗಾಯಕಿಯರು - ಹ್ಯಾರಿಸ್ ಕಾರೊತ್, ಸುಬ್ರತ್ ಸಾಹೂ, ಅನಿಕೇತ್ ಪ್ರಭು, ಗೋವಿಂದ್ ಕರ್ನೂಲ್ ಹಾಗೂ ರೋಹಿಣಿ ಪ್ರಭುನಂದನ್.
ಬಾಲಿವುಡ್ ನಗರಿಯಾದ ಮುಂಬೈನ ಹೆಸರಾಂತ ಕೀಬೋರ್ಡ್ ವಾದಕರಾದ ಪ್ರದೀಪ್ ಪಟ್ಕರ್ ರವರ ತಂಡದವರ ಪೂರ್ಣ ಪ್ರಮಾಣದ ವಾದ್ಯವ್ರಂದ ಹೊಂದಿರುತ್ತದೆ.
ಸಮರ್ಥವಾದ ಸಂಗೀತ ಹಾಗೂ ಕಲಾವಿದರ ಮಿಶ್ರಣವನ್ನು ಹೊಂದಿರುವ ಈ ಕಾರ್ಯಕ್ರಮವು ಬೆಂಗಳೂರಿನ ಬಾಲಿವುಡ್ ಸಂಗೀತಪ್ರೇಮಿಗಳಿಗೆ ಒಂದು ಸಂಗೀತ ರಸದೌತಣ ನೀಡುವುದರಲ್ಲಿ ಸಂದೇಹವಿಲ್ಲ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ramya: 'ಧುರಂಧರ್-2' ನೋಡಿ ಹಣ, ಸಮಯ ವ್ಯರ್ಥ ಮಾಡಬೇಡಿ: ನಟಿ ರಮ್ಯಾ ಪೋಸ್ಟ್ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ












Click it and Unblock the Notifications