ಐದು ಸಾವಿರಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ ಚಿತ್ತಾಪುರದ ನಿಂಗಮ್ಮ
ಬೆಂಗಳೂರು, ಅಕ್ಟೋಬರ್ 14: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಖಾತೆಗಾಗಿ ಅರ್ಜಿ ಸಲ್ಲಿಸಿದ್ದವರಿಂದ ಲಂಚ ಪಡೆಯುವಾಗ ಕಂದಾಯ ಅಧಿಕಾರಿ ನಿಂಗಮ್ಮ ಬಿರಾದಾರ್ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಅರ್ಜಿದಾರರು ಎರಡು ನಿವೇಶನ ಖರೀದಿಸಿ, ಅದರ ಖಾತೆಗಾಗಿ ಅರ್ಜಿ ಹಾಕಿದ್ದರು.
ಅದಕ್ಕಾಗಿ ನಿಂಗಮ್ಮ ಅವರು ಐದು ಸಾವಿರ ರುಪಾಯಿ ನೀಡುವಂತೆ ಅರ್ಜಿದಾರರಿಗೆ ಒತ್ತಾಯಿಸಿದ್ದರು. ಈ ಬಗ್ಗೆ ಎಸಿಬಿಯಲ್ಲಿ ದೂರು ದಾಖಲಿಸಲಾಗಿತ್ತು. ಶುಕ್ರವಾರ ಹಣ ಪಡೆಯುತ್ತಿದ್ದಾಗ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಇನ್ನು ನಂದಗುಡಿ ನಾಡಕಚೇರಿಯ ಉಪತಹಶೀಲ್ದಾರ್ ಕೆ.ಗೌತಮ್ ಲಂಚ ಪಡೆಯುವಾಗ ಎಸಿಬಿಗೆ ಸಿಕ್ಕಿಬಿದ್ದಿದ್ದಾರೆ.[2 ಲಕ್ಷ ಲಂಚ ಕೇಳಿ ಸಿಕ್ಕಿಬಿದ್ರು ತುಮಕೂರು ಕಾರ್ಪೊರೇಟರ್ ಕರುಣಾರಾಧ್ಯ]

ಹೊಸಕೋಟೆ ತಾಲೂಕು ನಂದಗುಡಿ ಹೋಬಳಿಯ ಶಿವನಪುರದವರೊಬ್ಬರು ಕೃಷಿ ಭೂಮಿ ಖರೀದಿಸಿ, ನೋಂದಣಿ ಮಾಡಿಸಿದ್ದರು. ಇದೇ ಗ್ರಾಮದವರೊಬ್ಬರು ಖರೀದಿದಾರರ ಹೆಸರಿಗೆ ಖಾತೆ ಮಾಡಕೂಡದು ಎಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ನಡೆಸಿ, ವರದಿ ಸಲ್ಲಿಸುವಂತೆ ಹೊಸಕೋಟೆ ತಹಶೀಲ್ದಾರ್ ಅವರು ನಂದಗುಡಿ ನಾಡಕಚೇರಿ ಉಪ ತಹಶೀಲ್ದಾರ್ ಗೆ ಸೂಚಿಸಿದ್ದರು.[ಉಬರ್ ಚಾಲಕನಿಂದ ಲಂಚ, ನಾಲ್ವರು ಪೊಲೀಸರ ಅಮಾನತು!]
ದೂರು ಸಲ್ಲಿಸಿದವರ ಜೊತೆಗೆ ಮಾತನಾಡಿ, ರಾಜಿ ಮಾಡಿಸುತ್ತೇನೆ. ಈ ಪ್ರಕರಣವನ್ನು ಕೊನೆಗೊಳಿಸುತ್ತೇನೆ. ಅದಕ್ಕೆ ಮೂವತ್ತೈದು ಸಾವಿರ ಲಂಚ ಕೊಡಿ ಎಂದು ಉಪ ತಹಶೀಲ್ದಾರ್ ಲಂಚ ಕೇಳಿ, ಚೌಕಾಶಿ ನಂತರ ಇಪ್ಪತ್ತೈದು ಸಾವಿರಕ್ಕೆ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಎಸಿಬಿ ಬಳಿ ದೂರು ದಾಖಲಾಗಿತ್ತು. ಅಕ್ಟೋಬರ್ 14ರಂದು ಲಂಚ ಪಡೆಯುವ ವೇಳೆಯಲ್ಲೇ ದಾಳಿ ನಡೆಸಿದಾಗ ಗೌತಮ್ ಸಿಕ್ಕಿಬಿದ್ದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications