ಸಾಂಕ್ರಾಮಿಕ ರೋಗ: ಜಲಮಂಡಳಿಗೆ ಪತ್ರ ಬರೆದು ಬಿಬಿಎಂಪಿ ಮನವಿ
ಬೆಂಗಳೂರು, ಏಪ್ರಿಲ್ 07: ಬೆಂಗಳೂರಿನಲ್ಲಿ ನೀರಿನ ಕೊರತೆ ಉಂಟಾಗಿರುವ ಬೆನ್ನಲ್ಲೆ ಕಲುಷಿತ ನೀರು ಸೇವೆ ಹಾಗೂ ಸೋಂಕಿತ ಆಹಾರ ಸೇವೆನೆಯಿಂದ ನಗರದಲ್ಲಿ ಕಾಲರಾ ರೋಗ ಉಲ್ಬಣಗೊಂಡಿದೆ. ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಲ್ಲಿ ಇಬ್ಬರಿಗೆ ಕಾಲರಾ ಇರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟಲು ಎಚ್ಚರಿಕೆ ವಹಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಕುರಿತು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ರವರು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ ಪ್ರಸಾತ್ ಮನೋಹರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿರುವ ಪ್ರಮುಖ ಅಂಶಗಳು
* ಜಲಮಂಡಳಿ ವ್ಯಾಪ್ತಿಗೆ ಬರುವ ನೀರಿನ ಶುದ್ದೀಕರಣ ಘಟಕಗಳು ಮತ್ತು ಕೊನೆಯ ಹಂತದ ವಿತರಣೆ ನೀರಿನ ಮಾದರಿಗಳಲ್ಲಿ ಕ್ಲೋರಿನೇಷನ್ ಮಟ್ಟ ನಿಯಮಾನುಸಾರ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.
* ಸಾಂಕ್ರಾಮಿಕ ರೋಗಗಳು ವರದಿಯಾದ ಪ್ರದೇಶಗಳಲ್ಲಿ ಮ್ಯಾನ್ಹೋಲ್ ಮತ್ತು ಕೊಳಚೆ ನೀರಿನಿಂದ ಮಾದರಿಗಳನ್ನು ಸಂಗ್ರಹಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.
* ಯಾವುದಾದರೂ ನೀರಿನ ಕೊಳವೆಗಳು ಸೋರಿಕೆ ಇದ್ದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.
* ಮೇಲ್ಕಂಡ ಎಲ್ಲಾ ವಿಷಯಗಳಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಕಾರ್ಯಕ್ರಮ ಅಧಿಕಾರಿಗಳು(ಐ.ಹೆಚ್.ಐ.ಪಿ) ಬಿಬಿಎಂಪಿ ಇ-ಮೇಲ್ [email protected] ಗೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಈ ಪತ್ರದ ಮೂಲಕ ತಿಳಿಸಿದ್ದಾರೆ.

ಬಿಬಿಎಂಪಿ ಹೈ ಅಲರ್ಟ್
ಬೆಂಗಳೂರಿನಲ್ಲಿ ಕಳೆದ ಆರು ದಿನದಲ್ಲಿ ನಾಲ್ಕವರಿಗೆ ಕಾಲರ ದೃಢಪಟ್ಟಿದೆ. ಬಿಬಿಎಂಪಿ ಈಗಾಗಲೇ ಕಾಲರಾ ರೋಗ ಕಂಡು ಬಂದವರ ಜೊತೆಗಿದ್ದ ಶಂಕಿತರ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ. ಕಾಯಿಲೆ ಪತ್ತೆಯಾದವರ ಸುತ್ತಮುತ್ತಲಿನ ಮನೆಗಳಿಗೆ ಬಿಬಿಎಂಪಿ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿವಾಸಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ವದ್ಯರ ಸಲಹೆಗಳು ಏನು?
* ಜನರು ಸಿಕ್ಕ ಸಿಕ್ಕ ಕಡೆಗಳಲ್ಲಿ ನೀರು ಕುಡಿಯುದೇ ಮನೆ ನೀರು ಬಳಸಬೇಕು
* ನೀರು ಕಾಯಿಸಿ ಆರಿಸಿದ ಬಳಿಕ ಕುಡಿಯಬೇಕು
* ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
* ಅತಿಸಾರ ಬೇಧಿ, ವಾಂತಿ, ಇನ್ನಿತರ ಹೊಟ್ಟೆ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಕಂಡು ಬಂದ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.
* ತರಕಾರಿ, ಹಣ್ಣು ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ತೊಳೆದು ತಿನ್ನಬೇಕು. ಸಾಧ್ಯವಾದರೆ ಬಿಸಿ ನೀರಿನಲ್ಲಿ ತರಕಾರಿ ತೊಳೆದರೆ ಇನ್ನೂ ಉತ್ತಮ.
* ರಸ್ತೆ ಆಹಾರ ನೀರು ಸೇವೆ ಆದಷ್ಟು ನಿಲ್ಲಿಸಿಬಿಡಿ. ಮನೆ ಊಟವನ್ನು ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.
-
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications