Get Updates
Get notified of breaking news, exclusive insights, and must-see stories!

ಸಾಂಕ್ರಾಮಿಕ ರೋಗ: ಜಲಮಂಡಳಿಗೆ ಪತ್ರ ಬರೆದು ಬಿಬಿಎಂಪಿ ಮನವಿ

ಬೆಂಗಳೂರು, ಏಪ್ರಿಲ್ 07: ಬೆಂಗಳೂರಿನಲ್ಲಿ ನೀರಿನ ಕೊರತೆ ಉಂಟಾಗಿರುವ ಬೆನ್ನಲ್ಲೆ ಕಲುಷಿತ ನೀರು ಸೇವೆ ಹಾಗೂ ಸೋಂಕಿತ ಆಹಾರ ಸೇವೆನೆಯಿಂದ ನಗರದಲ್ಲಿ ಕಾಲರಾ ರೋಗ ಉಲ್ಬಣಗೊಂಡಿದೆ. ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಲ್ಲಿ ಇಬ್ಬರಿಗೆ ಕಾಲರಾ ಇರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟಲು ಎಚ್ಚರಿಕೆ ವಹಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಕುರಿತು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ರವರು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ ಪ್ರಸಾತ್ ಮನೋಹರ್ ಅವರಿಗೆ ಪತ್ರ ಬರೆದಿದ್ದಾರೆ.

Cholera BBMP Health Division Officers Letter to BWSSB For Control Infectious Diseases

ಪತ್ರದಲ್ಲಿರುವ ಪ್ರಮುಖ ಅಂಶಗಳು

* ಜಲಮಂಡಳಿ ವ್ಯಾಪ್ತಿಗೆ ಬರುವ ನೀರಿನ ಶುದ್ದೀಕರಣ ಘಟಕಗಳು ಮತ್ತು ಕೊನೆಯ ಹಂತದ ವಿತರಣೆ ನೀರಿನ ಮಾದರಿಗಳಲ್ಲಿ ಕ್ಲೋರಿನೇಷನ್ ಮಟ್ಟ ನಿಯಮಾನುಸಾರ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.

* ಸಾಂಕ್ರಾಮಿಕ ರೋಗಗಳು ವರದಿಯಾದ ಪ್ರದೇಶಗಳಲ್ಲಿ ಮ್ಯಾನ್‌ಹೋಲ್ ಮತ್ತು ಕೊಳಚೆ ನೀರಿನಿಂದ ಮಾದರಿಗಳನ್ನು ಸಂಗ್ರಹಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.

* ಯಾವುದಾದರೂ ನೀರಿನ ಕೊಳವೆಗಳು ಸೋರಿಕೆ ಇದ್ದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

* ಮೇಲ್ಕಂಡ ಎಲ್ಲಾ ವಿಷಯಗಳಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಕಾರ್ಯಕ್ರಮ ಅಧಿಕಾರಿಗಳು(ಐ.ಹೆಚ್.ಐ.ಪಿ) ಬಿಬಿಎಂಪಿ ಇ-ಮೇಲ್ [email protected] ಗೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಈ ಪತ್ರದ ಮೂಲಕ ತಿಳಿಸಿದ್ದಾರೆ.

Cholera BBMP Health Division Officers Letter to BWSSB For Control Infectious Diseases

ಬಿಬಿಎಂಪಿ ಹೈ ಅಲರ್ಟ್

ಬೆಂಗಳೂರಿನಲ್ಲಿ ಕಳೆದ ಆರು ದಿನದಲ್ಲಿ ನಾಲ್ಕವರಿಗೆ ಕಾಲರ ದೃಢಪಟ್ಟಿದೆ. ಬಿಬಿಎಂಪಿ ಈಗಾಗಲೇ ಕಾಲರಾ ರೋಗ ಕಂಡು ಬಂದವರ ಜೊತೆಗಿದ್ದ ಶಂಕಿತರ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ. ಕಾಯಿಲೆ ಪತ್ತೆಯಾದವರ ಸುತ್ತಮುತ್ತಲಿನ ಮನೆಗಳಿಗೆ ಬಿಬಿಎಂಪಿ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿವಾಸಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.

ವದ್ಯರ ಸಲಹೆಗಳು ಏನು?

* ಜನರು ಸಿಕ್ಕ ಸಿಕ್ಕ ಕಡೆಗಳಲ್ಲಿ ನೀರು ಕುಡಿಯುದೇ ಮನೆ ನೀರು ಬಳಸಬೇಕು

* ನೀರು ಕಾಯಿಸಿ ಆರಿಸಿದ ಬಳಿಕ ಕುಡಿಯಬೇಕು

* ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

* ಅತಿಸಾರ ಬೇಧಿ, ವಾಂತಿ, ಇನ್ನಿತರ ಹೊಟ್ಟೆ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಕಂಡು ಬಂದ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.

* ತರಕಾರಿ, ಹಣ್ಣು ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ತೊಳೆದು ತಿನ್ನಬೇಕು. ಸಾಧ್ಯವಾದರೆ ಬಿಸಿ ನೀರಿನಲ್ಲಿ ತರಕಾರಿ ತೊಳೆದರೆ ಇನ್ನೂ ಉತ್ತಮ.

* ರಸ್ತೆ ಆಹಾರ ನೀರು ಸೇವೆ ಆದಷ್ಟು ನಿಲ್ಲಿಸಿಬಿಡಿ. ಮನೆ ಊಟವನ್ನು ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+