ಬೆಂಗಳೂರು ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟಕ್ಕೆ ಒಂದು ವರ್ಷ
ಬೆಂಗಳೂರು, ಡಿಸೆಂಬರ್ 26 : ಬೆಂಗಳೂರಿನ ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟಗೊಂಡು ಒಂದು ವರ್ಷ ಕಳೆದಿದೆ. ಒಬ್ಬರು ಅಮಾಯಕ ಮಹಿಳೆ ಬಾಂಬ್ ಸ್ಫೋಟದಿಂದ ಮೃತಪಟ್ಟಿದ್ದರು. ಬೆಂಗಳೂರು ಪೊಲೀಸರು ನಂತರ, ಎನ್ಐಎ ಪ್ರಕರಣದ ತನಿಖೆ ನಡೆಸುತ್ತಿದೆ. ಆದರೆ, ಇದುವರೆಗೂ ಸ್ಫೋಟ ನಡೆಸಿದವರು ಯಾರು? ಎಂಬ ಮಾಹಿತಿ ಲಭ್ಯವಾಗಿಲ್ಲ.
2014ರ ಡಿಸೆಂಬರ್ 28ರಂದು ಚರ್ಚ್ಸ್ಟ್ರೀಟ್ನಲ್ಲಿನ ಕೋಕೋನಟ್ ಗ್ರೋವ್ ಹೋಟೆಲ್ ಬಳಿ ರಾತ್ರಿ 8.30ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿತ್ತು. ಹೊಸ ವರ್ಷದ ಸಂಭ್ರಮಾಚರಣೆ ಗುಂಗಿನಲ್ಲಿದ್ದ ಉದ್ಯಾನಗರಿಯ ಜನರು ಬಾಂಬ್ ಸ್ಫೋಟದ ಸುದ್ದಿ ಕೇಳಿ ಆತಂಕಗೊಂಡಿದ್ದರು. ಬೆಂಗಳೂರು ಪೊಲೀಸರು ಮೊದಲು ಬಾಂಬ್ ಸ್ಫೋಟದ ತನಿಖೆ ಆರಂಭಿಸಿದರು. ಕೆಲವು ದಿನಗಳ ನಂತರ ರಾಷ್ಟ್ರೀಯ ತನಿಖಾದಳ (ಎನ್ಐಎ) ಸ್ಫೋಟದ ತನಿಖೆಯನ್ನು ಆರಂಭಿಸಿತು.[ಬೆಂಗಳೂರು ಚರ್ಚ್ ಸ್ಟ್ರೀಟ್ ಸ್ಫೋಟ ತನಿಖೆಗೆ ಎಳ್ಳು-ನೀರು!]

25 ತಂಡಗಳಿಂದ ತನಿಖೆ : ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟ ನಡೆಸಿದವರು ಯಾರು? ಎಂಬ ಬಗ್ಗೆ ಒಂದು ಚಿಕ್ಕ ಸುಳಿವು ಕೂಡಾ ಇದುವರೆಗೂ ಪತ್ತೆಯಾಗಿಲ್ಲ. ಎನ್ಐಎ ಇದುವರೆಗೂ ಸುಮಾರು 3000 ಗಂಟೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. 2 ಕೋಟಿಗೂ ಅಧಿಕ ಪೋನ್ ಕರೆಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಿದೆ. [ಬೆಂಗಳೂರು ಸ್ಫೋಟ : ತನಿಖೆ ಆರಂಭಿಸಿದ NIA]
ಮೊದಲು ಸ್ಫೋಟದ ತನಿಖೆ ಆರಂಭಿಸಿದ ಬೆಂಗಳೂರು ಪೊಲೀಸರು 25 ತಂಡಗಳನ್ನು ರಚನೆ ಮಾಡಿದ್ದರು. ಈ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೂ ಭೇಟಿ ನೀಡಿ ಸ್ಫೋಟದ ಕುರಿತು ಮಾಹಿತಿ ಸಂಗ್ರಹಿಸಲು ಪ್ರಯತ್ನ ನಡೆಸಿದರು. ಆದರೆ, ಖಾಲಿ ಕೈಯಲ್ಲಿ ಮರಳಿದರು. [ಭಟ್ಕಳದ ಶಂಕಿತರಿಂದ ಬಯಲಾಗುತ್ತಾ ಉಗ್ರರ ಜಾಲ?]
ಸ್ಫೋಟದ ತನಿಖೆ ನಡೆಸುತ್ತಿರುವ ಎನ್ಐಎ ಈ ಬಾಂಬ್ ಸ್ಫೋಟದ ಹಿಂದೆ ಸಿಮಿ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಶಂಕಿಸಿದೆ. ಪಾಟ್ನಾದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಿದ ಇಬ್ಬರ ಉಗ್ರರ ವಿಚಾರಣೆಯನ್ನು ಎನ್ಐಎ ನಡೆಸಿದೆ. ಪಾಟ್ನಾ ಮತ್ತು ಬೆಂಗಳೂರು ಸ್ಫೋಟದ ನಡುವೆ ಸಾಮ್ಯತೆ ಇದೆ ಎಂದು ಎನ್ಐಎ ಹೇಳುತ್ತಿದೆ.
ಬೆಂಗಳೂರು ಪೊಲೀಸರು ಭಟ್ಕಳದಲ್ಲಿ ಕೆಲವು ಯುವಕರನ್ನು ಬಂಧಿಸಿ ಸ್ಫೋಟದ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಿದರು. ಆದರೆ, ಯುವಕರಿಗೂ ಸ್ಫೋಟಕ್ಕೂ ಸಂಬಂಧವಿಲ್ಲ ಎಂಬುದು ಕೊನೆಗೆ ತಿಳಿದುಬಂದಿತು. ಎನ್ಐಎ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಸಮೀಪದಲ್ಲಿಯೇ ಅದನ್ನು ಜೋಡಿಸಲಾಗಿತ್ತು ಎಂಬ ಮಾಹಿತಿ ಸಂಗ್ರಹಣೆ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications