ಬೆಂಗಳೂರು : ಇಸ್ರೇಲ್ ವೀಸಾ ಕಚೇರಿ ಬೆಂಕಿಗೆ ಉಗ್ರರು ಕಾರಣ?
ಬೆಂಗಳೂರು ಮಾರ್ಚ್ 03 : ಬೆಂಗಳೂರಿನ ಇಸ್ರೇಲ್ ವೀಸಾ ಕಚೇರಿ ಮೇಲೆ ನಡೆದದ್ದು ಭಯೋತ್ಪಾದಕ ದಾಳಿಯೇ? ಎಂಬ ಅನುಮಾನ ವ್ಯಕ್ತವಾಗಿದೆ. ಚರ್ಚ್ಸ್ಟ್ರೀಟ್ ಬಾಂಚ್ ಸ್ಫೋಟ ಪ್ರಕರಣಕ್ಕೂ ವೀಸಾ ಕಚೇರಿ ಮೇಲಿನ ದಾಳಿಗೂ ಸಂಬಂಧವಿರುವ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ.
2015ರ ನವೆಂಬರ್ 29ರಂದು ಬೆಂಗಳೂರಿನಲ್ಲಿರುವ ಇಸ್ರೇಲ್ ವೀಸಾ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರು ಕಟ್ಟಡಗಳ ಮಾಲೀಕರ ನಡುವಿನ ದ್ವೇಷದಿಂದಾಗಿ ಈ ಘಟನೆ ನಡೆದಿದೆ. ಇದೊಂದು ಚಿಕ್ಕ ಪ್ರಕರಣ ಎಂದು ಹೇಳಿದ್ದರು. [Church Street ಬಾಂಬ್ ಸ್ಫೋಟದ ಆರೋಪಿ ಬಂಧನ]

ರಾಷ್ಟ್ರೀಯ ತನಿಖಾದಳ ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಮತ್ತು ವೀಸಾ ಕಚೇರಿ ಪ್ರಕರಣದ ನಡುವೆ ಸಂಬಂಧವಿರುವ ಬಗ್ಗೆ ತನಿಖೆ ನಡೆಸುತ್ತಿದೆ. ಈ ಎರಡೂ ಪ್ರಕರಣದಲ್ಲಿ ಆಲಂ ಜೇಬ್ ಅಫ್ರಿದಿ ಭಾಗಿಯಾಗಿದ್ದಾನೆ ಎಂದು ಶಂಕಿಸಿದೆ. ಐಎಸ್ಐಎಸ್ ಉಗ್ರ ಸಂಘಟನೆಗೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಫ್ರಿದಿ ಬಂಧಿಸಲಾಗಿದೆ. [ಕೋಕೋನಟ್ ಗ್ರೋವ್ ಹೋಟೆಲ್ ನಲ್ಲಿ ಬಾಂಬ್ ಇಡಬೇಕಿತ್ತು]
ಹೈದರಾಬಾದ್ನಲ್ಲಿಯೂ ಆಲಂ ಜೇಬ್ ಅಫ್ರಿದಿ ವಿರುದ್ಧ ಪ್ರಕರಣಗಳಿದ್ದು, ಸದ್ಯ, ಆತನ ವಿಚಾರಣೆ ಅಲ್ಲಿ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಪೊಲೀಸರ ಮುಂದೆ ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನ ವಿಚಾರಣೆ ನಡೆಸಿರುವ ಎನ್ಐಎ ಬಾಂಬ್ ಸ್ಫೋಟದಲ್ಲಿ ಆತನ ಕೈವಾಡವಿದೆ ಎಂದು ಖಚಿತಪಡಿಸಿದೆ.
ಸಂಬಂಧ ಹೇಗೆ? : ಚರ್ಚ್ಸ್ಟ್ರೀಟ್ ಮತ್ತು ಇಸ್ರೇಲ್ ಕಚೇರಿಯಲ್ಲಿ ಲಭ್ಯವಾದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಒಬ್ಬನೇ ವ್ಯಕ್ತಿಯ ದೃಶ್ಯಗಳು ಸೆರೆಯಾಗಿವೆ. ಐಎಸ್ಐಎಸ್ ಪರವಾಗಿ ಕೆಲಸ ಮಾಡುತ್ತಿದ್ದ ಅಫ್ರಿದಿ ಇಸ್ರೇಲ್ಗಳ ಮೇಲೆ ದ್ವೇಷ ಹೊಂದಿದ್ದರು. ಚರ್ಚ್ಸ್ಟ್ರೀಟ್ನಲ್ಲಿಯೂ ಇಸ್ರೇಲಿಗಳನ್ನು ಕೊಲ್ಲುವ ಉದ್ದೇಶದಿಂದ ಬಾಂಬ್ ಇಡಲಾಗಿತ್ತು ಎಂಬುದು ಹಿಂದಿನ ವಿಚಾರಣೆ ವೇಳೆ ತಿಳಿದುಬಂದಿತ್ತು.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications