ಡಿಸೆಂಬರ್ 31 ರಂದು ಚರ್ಚ್ ಸ್ಟ್ರೀಟ್ ಅರ್ಧ ಓಪನ್!
ಬೆಂಗಳೂರು, ಡಿಸೆಂಬರ್ 29 : ಹೊಸ ವರ್ಷದಂದು ಚರ್ಚ್ ಸ್ಟ್ರೀಟ್ ನಲ್ಲಿ ಕೇವಲ ಸಾರ್ವಜನಿಕರ ಓಡಾಟಕ್ಕೆ ಮಾತ್ರ ಅನುವು ಮಾಡಿಕೊಡಲಾಗುತ್ತದೆ. ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ನಡೆಯುತ್ತಿರುವ ಟೆಂಡರ್ ಶ್ಯೂರ್ ಮೊದಲ ಹಂತದ ಕಾಮಗಾರಿಯನ್ನು ಡಿ.31ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಬಿಬಿಎಂಪಿ ಮುಂದಾಗಿದೆ.
ಕಳೆದೊಂದು ವರ್ಷದಿಂದ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ನಡೆಯುತ್ತಿರುವ ಟೆಂಡರ್ ಶ್ಯೂರ್ ಕಾಮಗಾರಿ ಅಂತಿಮ ಹಂತದಲ್ಲಿದೆ. 9.02 ಕೋಟಿ ರೂ. ಹಣ ವೆಚ್ಚದಲ್ಲಿ ಕಾಮಗಾರಿ ಅನುಷ್ಠಾನ ಮಾಡಲಾಗುತ್ತಿದ್ದು, ಈಗಾಗೇ ಮೊದಲ ಹಂತದ ೪೮೦ ಮೀಟರ್ ಉದ್ದದ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

ಬೀದಿ ದೀಪ ಅಳವಡಿಕೆ ಹಾಗೂ ಪಾದಚಾರಿ ಮಾರ್ಗದ ಸ್ಲ್ಯಾಬ್ ಅಳವಡಿಕೆ ಕಾರ್ಯ ಮಾತ್ರ ಬಾಕಿ ಇದ್ದು , ಡಿ.31 ರೊಳಗೆ ಪೂರ್ಣಗೊಳ್ಳಲಿದೆ. ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಕಸೂತಿ ಮಾದರಿಯ ವಿನ್ಯಾಸದಲ್ಲಿ ಕಾಬಲ್ ಸ್ಟೋನ್ ಅಳವಡಿಸಲಾಗುತ್ತಿದ್ದು ಸದ್ಯ480 ಮೀಟರ್ ರಸ್ತೆಯಲ್ಲಿ ಪೂರ್ಣಗೊಂಡಿದೆ.
ಉಳಿದಂತೆ ಎರಡನೇ ಹಂತದ ರಸ್ತೆಯಲ್ಲಿಯೂ ವಿವಿಧ ಸೇವಾ ಜಾಲಗಳ ಸ್ಥಳಾಂತರ ಕಾಮಗಾರಿ ಮುಗಿದಿದೆ. ಹೊಸ ವರ್ಷಕ್ಕೆ ರಸ್ತೆಯನ್ನು ಸಾರ್ವಜನಿಕರ ಓಡಾಟಕ್ಕೆ ಮಾತ್ರ ಮುಕ್ತಗೊಳಿಸಿ, ಜನವರಿ ಎರಡನೇ ವಾರದಲ್ಲಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications