ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆ ಸಂಚಾರಕ್ಕೆ ಮುಕ್ತ
ಬೆಂಗಳೂರು, ಮಾರ್ಚ್ 1: ಚರ್ಚ್ ಸ್ಟ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿದಿದ್ದು ಗುರುವಾರ ಸಂಚಾರಕ್ಕೆ ಮುಕ್ತವಾಗಲಿದೆ. ಹಲವು ತಿಂಗಳಿನಿಂದ ಕುಟುಂತ್ತ ಸಾಗಿದ್ದ ಚರ್ಚ್ ಸ್ಟ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಚಾರಕ್ಕೆ ಮುಕ್ತಗೊಳಿಸಲಿದ್ದಾರೆ.
9.2 ಕೋಟಿ ರೂ ವೆಚ್ಚದ ಟಂಡರ್ ಶ್ಯೂರ್ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವ ಚರ್ಚ್ ಸ್ಟ್ರೀಟ್ ರಸ್ತೆ 750 ಮೀಟರ್ ಉದ್ದವಿದೆ. ಈ ಯೋಜನೆಯಲ್ಲಿ ಪಾದಚಾರಿ ಮಾರ್ಗ ಅಭಿವೃದ್ಧಿ ಪಡಿಸಲಾಗಿದ್ದು, ಪಾದಚಾರಿಗಳಿಗೂ ಅನುಕೂಲವಾಗಲಿದೆ. ಅಲ್ಲದೆ, ರಸ್ತೆಯ ಬದಿಯಲ್ಲಿ ಕಾರು ಮತ್ತು ಬೈಕ್ ನಿಲುಗಡೆಗೆ ಅವಕಾಶವಿದೆ.
2017ರ ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ ಆಗಸ್ಟ್ ನಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷಯದಿಂದಾಗಿ ಕುಟುಂತ್ತ ಸಾಗಿತ್ತು. 2017ರ ಡಿಸೆಂಬರ್ 31 ರ ಮಧ್ಯರಾತ್ರಿ ಹೊಸ ವರ್ಷ ಆಚರಣೆ ವೇಳೆಗೆ ಚರ್ಚ್ ಸ್ಟ್ರೀಟ್ ನ ಒಂದು ಭಾಗವನ್ನು ಮಾತ್ರ ಸಾರ್ವಜನಿಕರಿಗೆ ಬಿಟ್ಟುಕೊಡಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಆಗಸ್ಟ್ ನಲ್ಲಿ ನಡೆದಿದ್ದ ನಗರ ಪರಿವೀಕ್ಷಣೆ ವೇಳೆ ಚರ್ಚ್ ಸ್ಟ್ರೀಟ್ ಗೆ ಭೇಟಿ ನೀಡಿದ್ದರು. ನ.1 ಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ ಕಾಮಗಾರಿ ಪೂರ್ಣಗೊಳ್ಳಲು 6 ತಿಂಗಳು ಬೇಕಾಯಿತು.
-
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ












Click it and Unblock the Notifications