ಚರ್ಚ್ ಸ್ಟ್ರೀಟ್ ರಸ್ತೆಯ ಅಂದ ಹೆಚ್ಚಿಸಲಿವೆ ಗ್ರಾನೈಟ್!
Recommended Video

ಬೆಂಗಳೂರು, ಅಕ್ಟೋಬರ್ 03 : ಬೆಂಗಳೂರು ನಗರದ ಚರ್ಚ್ ಸ್ಟ್ರೀಟ್ ರಸ್ತೆ ಕೆಲವು ದಿನಗಳಲ್ಲಿ ಹೊಸ ವಿನ್ಯಾಸದಿಂದ ಕಂಗೊಳಿಸಲಿದೆ. ರಸ್ತೆ, ಫುಟ್ಪಾತ್ಗಳಿಗೆ ಗ್ರಾನೈಟ್ ಕರ್ಬ್ ಸ್ಟೋನ್ ಅಳವಡಿಕೆ ಮಾಡಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಕಾಮಗಾರಿ ಅಂತ್ಯಗೊಳ್ಳುವ ನಿರೀಕ್ಷೆ ಇದೆ.
ಇದೇ ಮೊದಲ ಬಾರಿಗೆ ಬೆಂಗಳೂರಿನ ರಸ್ತೆಗಳಿಗೆ ಗ್ರಾನೈಟ್ ಕರ್ಬ್ ಸ್ಟೋನ್ ಅಳವಡಿಸಲಾಗುತ್ತಿದೆ. ಕಳೆದ ವಾರ ಪ್ರಾಯೋಗಿಕವಾಗಿ ಎರಡು ಮೀಟರ್ ದೂರಕ್ಕೆ ಗ್ರಾನೈಟ್ ಕರ್ಬ್ ಸ್ಟೋನ್ ಅಳವಡಿಕೆ ಮಾಡಿ ರಸ್ತೆ ಹೇಗೆ ಕಾಣುತ್ತದೆ? ಎಂದು ಬಿಬಿಎಂಪಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಬಿಳಿ, ಕಪ್ಪು ಮತ್ತು ಚೆರ್ರಿ ಕೆಂಪು ಬಣ್ಣದ ಕಲ್ಲುಗಳನ್ನು ಪ್ರಾಯೋಗಿಕವಾಗಿ ಜೋಡಿಸಲಾಗಿತ್ತು. ಯಾವ ವಿನ್ಯಾಸದಲ್ಲಿ ಕಲ್ಲುಗಳನ್ನು ಜೋಡಿಸಬೇಕು ಎಂಬುದನ್ನು ತೀರ್ಮಾನಿಸಿ, ಈ ವಾರ ಕಾಮಗಾರಿ ಆರಂಭಿಸಲಾಗುತ್ತದೆ. ನಂತರ ರಸ್ತೆಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ.
ಗ್ರಾನೈಟ್ ಅಳವಡಿಕೆ ಮಾಡಲು ನುರಿತ ಕಾರ್ಮಿಕರನ್ನು ಕರೆತರಲಾಗಿದೆ. ಒಟ್ಟು 750 ಮೀಟರ್ ಉದ್ದದ ಚರ್ಚ್ ಸ್ಟ್ರೀಟ್ ನಲ್ಲಿ ಬ್ರಿಗೇಡ್ ರಸ್ತೆಯಿಂದ ವಾಸುದೇವ ಅಡಿಗಾಸ್ ಹೋಟೆಲ್ ವರೆಗಿನ ಮೊದಲ ಹಂತದ 440 ಮೀಟರ್ ಉದ್ದದ ಕಾಮಗಾರಿ ನವೆಂಬರ್ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಬಿಬಿಎಂಪಿ ಒಟ್ಟು 8 ಕೋಟಿ ರೂ. ವೆಚ್ಚದಲ್ಲಿ ಚರ್ಚ್ ಸ್ಟ್ರೀಟ್ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಟೆಂಡರ್ ಶ್ಯೂರ್ ಯೋಜನೆಯಡಿ ಈ ರಸ್ತೆ, ಫುಟ್ ಪಾತ್ ಅಭಿವೃದ್ಧಿ ಮಾಡಲಾಗುತ್ತಿದೆ. ಡಿಸೆಂಬರ್ ವೇಳೆಗೆ ಎಲ್ಲಾ ಕಾಮಗಾರಿ ಮುಗಿದು, ರಸ್ತೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications