ಜನತಾ ಬಜಾರ್ ಉಳಿಸುವಂತೆ ನಾಗರಿಕರಿಂದ ರಾಜ್ಯ ಸರ್ಕಾರಕ್ಕೆ ಒತ್ತಡ
ಬೆಂಗಳೂರು, ಏಪ್ರಿಲ್ 05: ಪಾರಂಪರಿಕ ಕಟ್ಟಡವನ್ನು ಉಳಿಸಲು ಪಣ ತೊಟ್ಟಿರುವ ಹೆರಿಟೇಜ್ ಬೇಕು ಗ್ರೂಪ್ ಇದೀಗ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಜನತಾ ಬಜಾರ್ನ್ನು ಉಳಿಸಲು ಮುಂದಾಗಿದೆ.
ಕೆಂಪೇಗೌಡ ರಸ್ತೆಯಲ್ಲಿರುವ 52 ವರ್ಷದ ಪಾರಂಪರಿಕ ಕಟ್ಟಡವಾದ ಜನತಾ ಬಜಾರ್ ನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿ, ಸುಮಾರು 8 ಮಹಡಿಗಳ ವಾಣಿಜ್ಯ ಸಮುಚ್ಚಯ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಮುಂದಾಗಿದೆ. ಈ ಕ್ರಮವನ್ನು ಖಂಡಿಸಿ ಹೆರಿಟೇಜ್ ಬೇಕು ಗ್ರೂಪ್ ಲೋಕೋಪಯೋಗಿ ಇಲಾಖೆಗೆ ಬಜಾರ್ ಉಳಿಸಲು ಮನವಿ ಮಾಡಿದೆ.
2031ರ ಪರಿಷ್ಕೃತ ನಗರ ಯೋಜನೆಯಲ್ಲಿ ಪಾರಂಪರ ಕಟ್ಟಡಗಳ ಪಟ್ಟಿಯಲ್ಲಿ ಜನತಾ ಬಜಾರ್ ಕೂಡ ಒಂದಾಗಿದೆ. ಸಾಕಷ್ಟು ನಗರಗಳಲ್ಲಿ ಪಾರಂಪರಿಕ ಕಟ್ಟಡಗಳನ್ನು ಉಳಿಸಲು ಪ್ರಯತ್ನಪಟ್ಟರೆ ಬೆಂಗಳೂರಿನಲ್ಲಿ ಪಾರಂಪರಿಕ ಕಟ್ಟಡಗಳನ್ನು ಕೆಡವಲು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್ ಹೇಳುವ ಪ್ರಕಾರ ಜನತಾ ಬಜಾರ್ ಕಟ್ಟಡ ಇನ್ನು ಪ್ರಬಲವಾಗಿದೆ. ಇಷ್ಟು ದಿನ ಆ ಕಟ್ಟಡವನ್ನು ಉಳಿಸಲು ಅಥವಾ ಸಮರ್ಪಕ ವ್ಯವಸ್ಥೆ ಕಲ್ಪಿಸುವ ಯಾವುದೇ ಪ್ರಯತ್ನ ಕೈಗೊಳ್ಳದೇ ಇದೀಗ ಕಟ್ಟಡವನ್ನು ನೆಲಸಮ ಮಾಡಲು ಮೂಮದಾಗಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ.
2008ರಲ್ಲಿ ಜನತಾ ಬಜಾರ್ ಒಪ್ಪಂದ ಕೊನೆಗೊಂಡಿದೆ. ಹೊಸ ಒಪ್ಪಂದವನ್ನು ಮಾಡಿಕೊಳ್ಳಳು 2009ರಲ್ಲಿ ಸಮಿತಿಯೊಂದನ್ನು ರಚನೆಮಾಡಲಾಗಿತ್ತು. 25 ವರ್ಷದ ಅವಧಿಗೆ ಒಪ್ಪಂದ ಮುಗಿದಿದ್ದು ಪ್ರತಿ ಐದು ವರ್ಷಕ್ಕೊಮ್ಮೆ ಒಪ್ಪಂದ ನವೀಕರಣ ಮಾಡಿಕೊಳ್ಳಬೇಕಿದೆ. ಆ ಒಪ್ಪಂದ 2014ರಲ್ಲಿ ಕೊನೆಗೊಂಡಿದ್ದು, ಲೋಕೋಪಯೋಗಿ ಇಲಾಖೆಯು ಒಪ್ಪಂದವನ್ನು ಮುಂದುವರೆಸಲು ಒಪ್ಪಿಗೆ ಸೂಚಿಸಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
2017ರಲ್ಲಿ ಈ ಜಾಗವನ್ನು ಬಿಟ್ಟುಕೊಡುವಂತೆ ನೊಟೀಸ್ ನೀಡಿದೆ. ಕಾಲಾವಕಾಶ ಕೋರಿ ಸಾಕಷ್ಟು ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಫೆಡರೇಷನ್ ನ ಸದಸ್ಯರು ತಿಳಿಸಿದ್ದಾರೆ.
ಪ್ರತಿನಿತ್ಯ 300 ರಿಂದ 500ಗ್ರಾಹಕರು ಮಳಿಗೆಗೆ ಭೇಟಿ ನೀಡುತ್ತಿದ್ದರು. ಇದೀಗ ಜನತಾಬಜಾರ್ ಗೇಟ್ನಲ್ಲಿ ಮೆಟಲ್ ಶೀಟ್ ಅಳವಡಿಸಿರುವ ಕಾರಣ, ಗ್ರಾಹಕರು ಭೇಟಿ ನೀಡಲು ಹಿಂಜರಿಯುತ್ತಿದ್ದಾರೆ. ಜತೆಗೆ ಜನತಾ ಬಜಾರ್ ನೆಲಸಮ ಮಾಡಲು ಇರುವ ಕಾರಣ ಏನು ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಜನತಾ ಬಜಾರ್ ನ ವ್ಯವಸ್ಥಾಪಕ ಬಿರಾದಾರ್ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications