ಬೆಂಗಳೂರಿನ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ಪೊಲೀಸರು ಹೇಳಿದ್ದೇನು?
ಬೆಂಗಳೂರು, ಮೇ. 13 : ಬೆಂಗಳೂರಿನ ಜನಪ್ರಿಯ ಆಸ್ಪತ್ರೆ ಸೇಂಟ್ ಫಿಲೋಮಿನಾಗೆ ಭಾನುವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಬಾಂಬ್ ಸ್ಕ್ವಾಡ್ನೊಂದಿಗೆ ಆಸ್ಪತ್ರೆಯ ಎಲ್ಲಾ ಶಾಖೆಗಳಿಗೆ ದೌಡಾಯಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ನಂತರ ಬೆಂಗಳೂರು ಪೊಲೀಸರು ಈ ಬೆದರಿಕೆ ಸುಳ್ಳು (ಹುಸಿ ಬಾಂಬ್ ಬೆದರಿಕೆ) ಎಂದು ಪತ್ತೆ ಹಚ್ಚಿ ತನಿಖೆ ಆರಂಭಿಸಿದ್ದಾರೆ. ವರದಿಯ ಪ್ರಕಾರ, ಸ್ಫೋಟಕ ವಸ್ತುಗಳನ್ನು ಆಸ್ಪತ್ರೆಯೊಳಗೆ ಇರಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ವಿಶೇಷ ಘಟಕಕ್ಕ ಇ-ಮೇಲ್ ಬಂದಿತ್ತು. ಇ ಮೇಲ್ನಲ್ಲಿ ಯಾವ ಅಸ್ಪತ್ರೆಗೆ ಬಾಂಬ್ ಬೆದರಿಕೆ ಎಂದು ನಿರ್ದಿಷ್ವಾಗಿ ಹೇಳಿರಲಿಲ್ಲ. ಹೀಗಾಗಿ ಪೊಲೀಸರು ಆಸ್ಪತ್ರೆಯ ಎಲ್ಲಾ ಶಾಖೆಗಳಿಗೆ ತೆರಳಿದ್ದರು.

ಆಸ್ಪತ್ರೆಗಳಿಗೆ ತೆರಳಿ ಪರೀಕ್ಷಿಸಿದ ಬಳಿಕ, ಈ ಇದು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಲಾಗಿದೆ. ಇಂತಹ ಕಿಡಿಗೇಡಿ ಕೆಲಸ ಮಾಡಿದ ಹಿಂದಿರುವ ಆರೋಪಿಗಳನ್ನು ಹಿಡಿಯಲು ಬೆಂಗಳೂರು ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಪದೇ ಪದೇ ಬೆದರಿಕೆಗಳು ಬರುತ್ತಿವೆ.
15 ಶಾಲೆಗಳಿಗೆ ಬಾಂಬ್ ಬೆದರಿಕೆ
ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದು, ಅಧಿಕಾರಿಗಳು, ವಿದ್ಯಾರ್ಥಿಗಳು, ಪೋಷಕರು ಮತ್ತು ಸಿಬ್ಬಂದಿ ಭಯ ಭೀತಿಯಲ್ಲಿ ಇರುವಂತಾಗಿತ್ತು. ಅಂದಿನ ಈ ಇಮೇಲ್ಗಳು ಕೂಡ ಹುಸಿ ಕರೆ ಎಂದು ನಗರ ಪೊಲೀಸರು ಶಂಕಿಸಿದ್ದಾರೆ.
" ಹಲವು ಶಾಲೆಗಳ ಶಾಲಾ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ ಎಂದು ಇಮೇಲ್ನಲ್ಲಿ ಹೇಳಲಾಗಿದೆ. ನಾವು ಕಮಾಂಡ್ ಸೆಂಟರ್ನಿಂದ ಕರೆ ಸ್ವೀಕರಿಸಿದ್ದೆವು. ತಕ್ಷಣ ನಮ್ಮ ಪೊಲೀಸ್ ತಂಡಗಳನ್ನು ನಗರದ ವಿವಿಧ ಭಾಗಗಳಲ್ಲಿನ ಶಾಲೆಗಳಿಗೆ ಕಳುಹಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶಾಲೆಯ ಆವರಣದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಮತ್ತು ಸಂಪೂರ್ಣ ಶೋಧವನ್ನು ನಡೆಸಲಾಗಿದೆ. ಇಲ್ಲಿಯವರೆಗೆ, ಇನ್ನೂ ಅನುಮಾನಾಸ್ಪದವಾದ ಏನೂ ಕಂಡುಬಂದಿಲ್ಲ ಪ್ರಾಥಮಿಕವಾಗಿ, ಇದು ಹುಸಿ ಸಂದೇಶದಂತೆ ತೋರುತ್ತಿದೆ. ಪೋಷಕರು ಗಾಬರಿಪಡುವ ಅಗತ್ಯವಿಲ್ಲ" ಎಂದು ಪೊಲೀಸರು ಹೇಳಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications