ಬೆಂಗಳೂರಿನ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ಪೊಲೀಸರು ಹೇಳಿದ್ದೇನು?
ಬೆಂಗಳೂರು, ಮೇ. 13 : ಬೆಂಗಳೂರಿನ ಜನಪ್ರಿಯ ಆಸ್ಪತ್ರೆ ಸೇಂಟ್ ಫಿಲೋಮಿನಾಗೆ ಭಾನುವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಬಾಂಬ್ ಸ್ಕ್ವಾಡ್ನೊಂದಿಗೆ ಆಸ್ಪತ್ರೆಯ ಎಲ್ಲಾ ಶಾಖೆಗಳಿಗೆ ದೌಡಾಯಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ನಂತರ ಬೆಂಗಳೂರು ಪೊಲೀಸರು ಈ ಬೆದರಿಕೆ ಸುಳ್ಳು (ಹುಸಿ ಬಾಂಬ್ ಬೆದರಿಕೆ) ಎಂದು ಪತ್ತೆ ಹಚ್ಚಿ ತನಿಖೆ ಆರಂಭಿಸಿದ್ದಾರೆ. ವರದಿಯ ಪ್ರಕಾರ, ಸ್ಫೋಟಕ ವಸ್ತುಗಳನ್ನು ಆಸ್ಪತ್ರೆಯೊಳಗೆ ಇರಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ವಿಶೇಷ ಘಟಕಕ್ಕ ಇ-ಮೇಲ್ ಬಂದಿತ್ತು. ಇ ಮೇಲ್ನಲ್ಲಿ ಯಾವ ಅಸ್ಪತ್ರೆಗೆ ಬಾಂಬ್ ಬೆದರಿಕೆ ಎಂದು ನಿರ್ದಿಷ್ವಾಗಿ ಹೇಳಿರಲಿಲ್ಲ. ಹೀಗಾಗಿ ಪೊಲೀಸರು ಆಸ್ಪತ್ರೆಯ ಎಲ್ಲಾ ಶಾಖೆಗಳಿಗೆ ತೆರಳಿದ್ದರು.

ಆಸ್ಪತ್ರೆಗಳಿಗೆ ತೆರಳಿ ಪರೀಕ್ಷಿಸಿದ ಬಳಿಕ, ಈ ಇದು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಲಾಗಿದೆ. ಇಂತಹ ಕಿಡಿಗೇಡಿ ಕೆಲಸ ಮಾಡಿದ ಹಿಂದಿರುವ ಆರೋಪಿಗಳನ್ನು ಹಿಡಿಯಲು ಬೆಂಗಳೂರು ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಪದೇ ಪದೇ ಬೆದರಿಕೆಗಳು ಬರುತ್ತಿವೆ.
15 ಶಾಲೆಗಳಿಗೆ ಬಾಂಬ್ ಬೆದರಿಕೆ
ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದು, ಅಧಿಕಾರಿಗಳು, ವಿದ್ಯಾರ್ಥಿಗಳು, ಪೋಷಕರು ಮತ್ತು ಸಿಬ್ಬಂದಿ ಭಯ ಭೀತಿಯಲ್ಲಿ ಇರುವಂತಾಗಿತ್ತು. ಅಂದಿನ ಈ ಇಮೇಲ್ಗಳು ಕೂಡ ಹುಸಿ ಕರೆ ಎಂದು ನಗರ ಪೊಲೀಸರು ಶಂಕಿಸಿದ್ದಾರೆ.
" ಹಲವು ಶಾಲೆಗಳ ಶಾಲಾ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ ಎಂದು ಇಮೇಲ್ನಲ್ಲಿ ಹೇಳಲಾಗಿದೆ. ನಾವು ಕಮಾಂಡ್ ಸೆಂಟರ್ನಿಂದ ಕರೆ ಸ್ವೀಕರಿಸಿದ್ದೆವು. ತಕ್ಷಣ ನಮ್ಮ ಪೊಲೀಸ್ ತಂಡಗಳನ್ನು ನಗರದ ವಿವಿಧ ಭಾಗಗಳಲ್ಲಿನ ಶಾಲೆಗಳಿಗೆ ಕಳುಹಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶಾಲೆಯ ಆವರಣದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಮತ್ತು ಸಂಪೂರ್ಣ ಶೋಧವನ್ನು ನಡೆಸಲಾಗಿದೆ. ಇಲ್ಲಿಯವರೆಗೆ, ಇನ್ನೂ ಅನುಮಾನಾಸ್ಪದವಾದ ಏನೂ ಕಂಡುಬಂದಿಲ್ಲ ಪ್ರಾಥಮಿಕವಾಗಿ, ಇದು ಹುಸಿ ಸಂದೇಶದಂತೆ ತೋರುತ್ತಿದೆ. ಪೋಷಕರು ಗಾಬರಿಪಡುವ ಅಗತ್ಯವಿಲ್ಲ" ಎಂದು ಪೊಲೀಸರು ಹೇಳಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications