ಟ್ರಾಫಿಕ್ ಸಿಗ್ನಲ್ ಹೀರೋಗಳ ಹೆಸರನ್ನು ನೀವೇ ಸೂಚಿಸಿ
ಬೆಂಗಳೂರು, ಜೂನ್.3: ನಿಮ್ಮ ಏರಿಯಾದ ಟ್ರಾಫಿಕ್ ಪೊಲೀಸರ ಕೆಲಸ ನೋಡಿ ಅವರನ್ನು ಗೌರವಿಸಬೇಕೆಂದು ಅನಿಸುತ್ತಾ? ಹಾಗಾದ್ರೆ ನಿಮಗೆ ಇಲ್ಲೊಂದು ಅವಕಾಶವಿದೆ. ನೀವೆ ನಿಮ್ಮ ನೆಚ್ಚಿನ ಟ್ರಾಫಿಕ್ ಪೊಲೀಸರ ಉತ್ತಮ ಕೆಲಸವನ್ನು ಕಂಡು ಅವರ ಹೆಸರನ್ನು ಪ್ರಶಸ್ತಿಗೆ ಸೂಚಿಸಿ ಅವರಿಗೆ ಸನ್ಮಾನ ಸಿಗುವಂತೆ ಮಾಡಬಹುದು.
ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ ಹಾಗೂ ಬಿ- ಪ್ಯಾಕ್, ಬೆಂಗಳೂರು ಸಂಚಾರ ಪೊಲೀಸರ ಸಹಯೋಗದೊಂದಿಗೆ 'ಹಾಡಿ ಹೊಗಳದ ಟ್ರಾಫಿಕ್ ಸಿಗ್ನಲ್ ಹೀರೋಗಳು' - ಟ್ರಾಫಿಕ್ ಪೊಲೀಸರ ಕೆಲಸವನ್ನು ಗುರುತಿಸಿ ಪ್ರೋತ್ಸಾಹಿಸಲು ವಿನೂತನ ಕಾರ್ಯಕ್ರಮ ಆಯೋಜಿಸಿದೆ.[ಬೆಂಗಳೂರಿನಲ್ಲಿ ಕನ್ನಡ ಗೊತ್ತಿಲ್ಲ ಅನ್ನೋ ಹಾಗಿಲ್ಲ]
ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ನ ಸಿಇಒ ಹಾಗೂ ಪೀಸ್ ಆಟೋ ಯೋಜನೆಯ ರೂವಾರಿ ಅನಿಲ್ ಶೆಟ್ಟಿ ಮಾತನಾಡಿ ಟ್ರಾಫಿಕ್ ಪೊಲೀಸ್ ಪೇದೆಗಳು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ, ಅವರ ಸ್ಪೂರ್ತಿದಾಯಕ ಘಟನೆಗಳನ್ನು ಹಾಡಿ ಹೊಗಳಿ ಪ್ರೋತ್ಸಾಹಿಸುವುದು ಈ ಕಾರ್ಯಕ್ರಮವನ್ನು ಉದ್ದೇಶ ಎಂದರು.[ಟ್ರಾಫಿಕ್ ಪೊಲೀಸು ಕೆಲಸ ಯಾರಿಗೆ ಬೇಕು ಹೇಳಿ?]

ಹಾಡಿಹೊಗಳದ ಟ್ರಾಫಿಕ್ ಸಿಗ್ನಲ್ ಹೀರೋಗಳು 25 ಟ್ರಾಫಿಕ್ ಪೊಲೀಸರಿಗೆ ಸಲ್ಲಲಿರುವ ಸಾರ್ವಜನಿಕ ಗೌರವ ಆಗಿದ್ದು ,ವಿಜೇತರಿಗೆ ಜುಲೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸನ್ಮಾನ ಮಾಡಿ ಗೌರವಿಸಲಾಗುತ್ತದೆ.[ಸಂಚಾರ ನಿಯಮ ಪಾಲಿಸಿ, ಬಹುಮಾನ ಪಡೆಯಿರಿ]
ಟ್ರಾಫಿಕ್ ಪೊಲೀಸರ ಹೆಸರನ್ನು ಸಾರ್ವಜನಿಕರು ಎಸ್ಎಂಎಸ್,ಇಮೇಲ್ ಹಾಗೂ ಫೇಸ್ಬುಕ್ ಮೂಲಕ ಸೂಚಿಸಬಹುದು.
ಹೆಸರನ್ನು ಈ ರೀತಿ ನಾಮನಿರ್ದೇಶನ ಮಾಡಬಹುದು:
ಮೊಬೈಲ್: 9008598334 ಕಥೆ/ವಿವರನ್ನು ಕಳುಹಿಸಿ ಅಥವಾ ಕರೆ ಮಾಡಿ ತಿಳಿಸಬಹುದು.
ಇಮೇಲ್ : [email protected]
ಫೇಸ್ಬುಕ್ : www.facebook.com/trafficpoliceconstable
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications