ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಸ್ಫೋಟಕ ಮಾಹಿತಿ ಹಂಚಿಕೊಂಡ ಬೆಂಗಳೂರು ಪೊಲೀಸ್ ಕಮೀಷನರ್
ಬೆಂಗಳೂರಿನಲ್ಲಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಎಸ್.ಸೀಮಂತ್ ಕುಮಾರ್ ಸಿಂಗ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಾಥಮಿಕ ತನಿಖೆಯ ಪ್ರಕಾರ ಇದು ಸ್ವಯಂ ಗುಂಡು ಹಾರಿಸಿಕೊಂಡ ಪ್ರಕರಣ ಎಂಬುದು ತಿಳಿದುಬಂದಿದೆ. ಆದರೂ, ಘಟನೆಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲು ವಿಸ್ತೃತ ತನಿಖೆ ಆರಂಭಿಸಲಾಗಿದೆ ಎಂದರು.
ಪೊಲೀಸ್ ಆಯುಕ್ತರ ಮಾಹಿತಿ ಪ್ರಕಾರ, ಈ ದುರ್ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರು 3.15ರ ವೇಳೆಗೆ ನಡೆದಿದೆ. ಕಳೆದ ಮೂರು ದಿನಗಳಿಂದ ಆದಾಯ ತೆರಿಗೆ (ಐಟಿ) ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಈ ಕಾರ್ಯಾಚರಣೆಗೆ ಕೇರಳದಿಂದ ಅಧಿಕಾರಿಗಳು ಆಗಮಿಸಿದ್ದರು ಎಂದು ಅವರು ದೃಢಪಡಿಸಿದರು. ಪ್ರಸ್ತುತ ಘಟನಾ ಸ್ಥಳದಲ್ಲಿ ಯಾವುದೇ ಐಟಿ ಅಧಿಕಾರಿಗಳು ಇಲ್ಲ ಎಂದು ತಿಳಿಸಿದರು. ತನಿಖೆಯ ಭಾಗವಾಗಿ ಐಟಿ ಇಲಾಖೆಯಿಂದ ಅಗತ್ಯ ಮಾಹಿತಿ ಬೆಂಗಳೂರು ಪೊಲೀಸರು ಪಡೆದುಕೊಳ್ಳಲಿದ್ದಾರೆ ಎಂದರು.

ಕುಟುಂಬ ಸದಸ್ಯರು ವಿದೇಶದಲ್ಲಿದ್ದಾರೆ
ಸಿ.ಜೆ.ರಾಯ್ ಅವರ ಕುಟುಂಬ ಸದಸ್ಯರು ಪ್ರಸ್ತುತ ವಿದೇಶದಲ್ಲಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದರು. ಅವರು ಬಂದ ಬಳಿಕ ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತದೆ. ಪ್ರಾಥಮಿಕವಾಗಿ ಇದು ಸ್ವಯಂ ಗುಂಡೇಟು ಪ್ರಕರಣವೆಂದು ಕಂಡುಬಂದಿದ್ದರೂ, ಯಾವುದೇ ಸಾಧ್ಯತೆಯನ್ನು ಕೈಬಿಡದೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಪ್ರಕರಣವನ್ನು ಅಸಹಜ ಮರಣ ಎಂದು ದಾಖಲಿಸಬೇಕೇ ಅಥವಾ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಕಲಂಗಳನ್ನು ಸೇರಿಸಬೇಕೇ ಎಂಬುದರ ಬಗ್ಗೆ ಕಾನೂನು ಆಯಾಮಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ನಡುವೆ, ಕಾನ್ಫಿಡೆಂಟ್ ಗ್ರೂಪ್ನ ಒಬ್ಬ ನಿರ್ದೇಶಕರಿಂದ ಈಗಾಗಲೇ ದೂರು ದಾಖಲಾಗಿದೆ. ಎಂದು ಆಯುಕ್ತರು ತಿಳಿಸಿದರು. ಪ್ರಸ್ತುತ ತನಿಖಾ ತಂಡಗಳು ಕಚೇರಿ ಆವರಣದಿಂದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದು, ದಾಖಲೆಗಳು ಮತ್ತು ಸಾಕ್ಷಿ ಹೇಳಿಕೆಗಳ ಪರಿಶೀಲನೆಯ ನಂತರ ಪ್ರಕರಣದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯ್ ಸಹೋದರ ಗಂಭೀರ ಆರೋಪ
ಸಿ.ಜೆ. ರಾಯ್ ಅವರ ಸಾವಿನ ಪ್ರಕರಣ ಇದೀಗ ಗಂಭೀರ ತಿರುವು ಪಡೆದಿದ್ದು, ಅವರ ಸಹೋದರ ಬಾಬು ರಾಯ್ ಅವರು ಐಟಿ ಅಧಿಕಾರಿಗಳ ವಿರುದ್ಧ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪ ಮಾಡಿದ್ದಾರೆ. "ಕಳೆದ ಕೆಲ ದಿನಗಳಿಂದ ಐಟಿ ಅಧಿಕಾರಿಗಳು ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಪದೇ ಪದೇ ವಿಚಾರಣೆ, ಶೋಧನೆಗಳ ಕಾರಣದಿಂದ ನನ್ನ ಸಹೋದರ ತೀವ್ರ ಮಾನಸಿಕ ಒತ್ತಡದಲ್ಲಿದ್ದರು. ಇದೇ ಆತ್ಮಹತ್ಯೆಗೆ ಕಾರಣ" ಎಂದು ಅವರು ಆರೋಪಿಸಿದ್ದಾರೆ. ಐಟಿ ಅಧಿಕಾರಿಗಳ ವರ್ತನೆಯೇ ಸಿ.ಜೆ. ರಾಯ್ ಅವರನ್ನು ಆತ್ಮಹತ್ಯೆಯಂತಹ ತೀವ್ರ ನಿರ್ಧಾರಕ್ಕೆ ದೂಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಗಳೂರಿನ ಲ್ಯಾಂಗ್ಫೋರ್ಡ್ ಟೌನ್ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿ.ಜೆ.ರಾಯ್ ಅವರು ತಮ್ಮ ಲೈಸೆನ್ಸ್ ಹೊಂದಿದ ಪಿಸ್ತೂಲ್ನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಈ ವೇಳೆ ಕೇರಳದಿಂದ ಬಂದಿದ್ದ ಆದಾಯ ತೆರಿಗೆ ಇಲಾಖೆಯ ಶೋಧನಾ ತಂಡವು ಮೂರನೇ ದಿನವೂ ನಿರಂತರವಾಗಿ ದಾಳಿ ನಡೆಸುತ್ತಿತ್ತು ಎಂದು ತಿಳಿದುಬಂದಿದೆ. ಗುಂಡಿನ ಶಬ್ದ ಕೇಳುತ್ತಿದ್ದಂತೆಯೇ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications