Get Updates
Get notified of breaking news, exclusive insights, and must-see stories!

ಡಿಕೆ V/s ಗೌಡ: ಎರಡು ಕುಟುಂಬಗಳಿಗೆ ಪ್ರತಿಷ್ಠೆಯ ಕಣವಾದ ಬೆಂಗಳೂರು ಗ್ರಾಮಾಂತರ

ಬೆಂಗಳೂರು, ಏಪ್ರಿಲ್. 12: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಕೇವಲ ಒಂದು ಕ್ಷೇತ್ರ. ಅದೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ. ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಹಠದಲ್ಲಿ ಕಾಂಗ್ರೆಸ್ ಇದೆ. ಕಾಂಗ್ರೆಸ್ ಮಾತ್ರವಲ್ಲ ಡಿಕೆ ಬ್ರದರ್ಸ್‌ಗೆ ಇದು ಪ್ರತಿಷ್ಠೆಯೆ ಕಣವಾಗಿದೆ. ಹೀಗಾಗಿಯೇ ಇಲ್ಲಿ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ.

ಬಿಜೆಪಿಗೆ ಗಗನ ಕುಸುಮವಾಗಿರುವ ಬೆಂಗಳೂರು ಗ್ರಾಮಾಂತರವನ್ನು ಈ ಬಾರಿ ಗೆಲ್ಲಬೇಕು ಎಂದು ಬಿಜೆಪಿ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡು ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ಒಕ್ಕಲಿಗ ಮತ ಬ್ಯಾಂಕ್‌ಗೆ ಕನ್ನ ಹಾಕುವ ಪ್ರಯತ್ನ ಮಾಡುತ್ತಿದೆ.

Clash Between DKS Deve Gowda families in Bangalore Rural Lok Sabha constituency

ಈ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕುಟುಂಬಗಳ ನಡುವಿನ ದೊಡ್ಡ ಪೈಪೋಟಿಗೆ ಈ ಕ್ಷೇತ್ರ ಸಾಕ್ಷಿಯಾಗಲಿದೆ. ಎರಡು ಪ್ರಭಾವಿ ಕುಟುಂಬಗಳ ನಡುವೆ ಅಡ್ಡಕತ್ತರಿಯಲ್ಲಿ ಸಿಲುಕಿರುವುದು ಮಾತ್ರ ಇಲ್ಲಿನ ಪ್ರಭಾವಿ ಒಕ್ಕಲಿಗ ಸಮುದಾಯ. ಯಾರ ಕಡೆಗೆ ಹೋಗುವುದು ಎಂಬುದೇ ದೊಡ್ಡ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಕುಳಿತಿದೆ.

ಗ್ರಾಮಾಂತರದ ಮೇಲೆ ಮೈತ್ರಿ ಕಣ್ಣು!

2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಸ್ಥಾನವನ್ನು ಬಿಜೆಪಿ - ಜೆಡಿಎಸ್ ಮೈತ್ರಿ ಗೆಲ್ಲಲು ಪ್ರಯತ್ನಿಸುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ತಮ್ಮ ತವರು ನೆಲದ ಮೇಲೆ ಹಿಡಿತವನ್ನು ಉಳಿಸಿಕೊಳ್ಳಲು ಏನೇನು ಪ್ರಯತ್ನ ಮಾಡಬೇಕೋ ಅದೆಲ್ಲಾ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಡಿಕೆ ಶಿವಕುಮಾರ್‌ ಅವರ ಸಹೋದರ ಡಿಕೆ ಸುರೇಶ್‌ ಅವರನ್ನು ಕಣಕ್ಕಿಳಿಸಿದರೇ, ಬಿಜೆಪಿ ಜೆಡಿಎಸ್‌ ವರಿಷ್ಠ ದೇವೇಗೌಡರ ಅಳಿಯ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಿದೆ.

ಗ್ರಾಮಾಂತರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಓಲೈಸಲು ಎರಡೂ ಫ್ಯಾಮಿಲಿಗಳು ಪ್ರಯತ್ನಿಸುತ್ತಿದ್ದಾರೆ. ದೇಶದಲ್ಲಿರುವ ಮೋದಿ ಅಲೆ ಮತ್ತು ಡಾ. ಎನ್ ಸಿ ಮಂಜುನಾಥ್ ಅವರಿಗಿರುವ 'ಕ್ಲೀನ್ ಇಮೇಜ್' ಅನ್ನು ಇಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಪ್ರಚಾರ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಪ್ರಚಾರ ನಡೆಸುತ್ತಿದೆ. ಡಿಕೆ ಸುರೇಶ್ ತನ್ನ ಕೆಲಸಗಳನ್ನು ಹೇಳಿಕೊಂಡು ಮತಯಾಚನೆ ಮಾಡುತ್ತಿದ್ದಾರೆ.

Clash Between DKS Deve Gowda families in Bangalore Rural Lok Sabha constituency

ನಗರ ಮತ್ತು ಗ್ರಾಮೀಣ ಮತಗಳ ಮಿಶ್ರಣ ಈ ಗ್ರಾಮಾಂತರ ಕ್ಷೇತ್ರ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಗರ ಮತ್ತು ಗ್ರಾಮೀಣ ಮತದಾರರ ಮಿಶ್ರಣವಾಗಿದೆ. ಒಟ್ಟು 27.53 ಲಕ್ಷ ಮತದಾರರು ಈ ಕ್ಷೇತ್ರದಲ್ಲಿದ್ದಾರೆ. ಬೆಂಗಳೂರು ಉತ್ತರದ ನಂತರ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಮತದಾರರಿರುವ ಕ್ಷೇತ್ರವಾಗಿ ಬೆಂಗಳೂರು ಗ್ರಾಮಾಂತರ ಹೆಸರುವಾಸಿಯಾಗಿದೆ.

2009 ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾದ ನಂತರ ಮೊದಲ ಚುನಾವಣೆಯಲ್ಲಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ 1.4 ಲಕ್ಷ ಮತಗಳ ಮುನ್ನಡೆಯೊಂದಿಗೆ ಗೆದ್ದಿದ್ದರು. ಎಚ್ ಡಿ ಕುಮಾರಸ್ವಾಮಿ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, 2013ರಲ್ಲಿ ನಡೆದ ಉಪಚುನಾವಣೆಯಲ್ಲಿ ಡಿ.ಕೆ.ಸುರೇಶ್ ಗೆಲುವು ಸಾಧಿಸಿದರು. ಆದರೆ, ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿಲ್ಲ. ಹೀಗಾಗಿ ಅದರ ಮೇಲೆ ಒಂದು ಕಣ್ಣು ಯಾವಾಗಲು ಇಟ್ಟಿದೆ.

ಬಿಜೆಪಿಯು ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಕೇಂದ್ರ ಕ್ಷೇತ್ರ ಸೇರಿದಂತೆ ಎಲ್ಲಾ ಮೂರು ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತಿದೆ. ಆದರೆ 2008 ರಲ್ಲಿ ಗ್ರಾಮಾಂತರ ಕ್ಷೇತ್ರ ರಚನೆಯಾದ ನಂತರ ಬಿಜೆಪಿಗೆ ಈ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ, ಬಿಜೆಪಿ ಅಭ್ಯರ್ಥಿಗಳು ಉತ್ತಮ ಮತಗಳನ್ನು ಗಳಿಸಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿ ಜೊತೆಗೆ ಜೆಡಿಎಸ್ ಮತಗಳು ಸೇರುವ ಕಾರಣ ಅಭ್ಯರ್ಥಿ ಗೆಲ್ಲಬಹುದು ಎಂಬ ಹುಮ್ಮಸ್ಸಿನಲ್ಲಿದೆ ಬಿಜೆಪಿ- ಜೆಡಿಎಸ್ ಮೈತ್ರಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+