ಮೀಟರ್ ಬಡ್ಡಿ ವ್ಯವಹಾರ : ಬೆಂಗಳೂರಲ್ಲಿ ಇಬ್ಬರ ಹತ್ಯೆ
ಬೆಂಗಳೂರು, ಆಗಸ್ಟ್ 01 : ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಸರಬಂಡೆಪಾಳ್ಯ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರನ್ನು ಹತ್ಯೆ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಗಲಾಟೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ ರಾತ್ರಿ ಅಸ್ಗರ್ (32) ಮತ್ತು ಆತನ ಸ್ನೇಹಿತ ಅಸ್ಲಂ (33) ಎಂಬುವವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅಫ್ಜಲ್ ಖಾನ್ ಮತ್ತು ಆತನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ. ಅವರ ವಿರುದ್ಧ ಪ್ರಕರಣದ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.[ಬೆಂಗಳೂರು ಪೊಲೀಸರ ಗಸ್ತಿಗೆ ಹೈಟೆಕ್ ವಾಹನಗಳು]

ಮೀಟರ್ ಬಡ್ಡಿ ವ್ಯವಹಾರ : ಅಸ್ಗರ್ ಮತ್ತು ಅಸ್ಲಂ ಬಡ್ಡಿ ವ್ಯವಹಾರ ಮಾಡುತ್ತಿದ್ದರು. ಸಾಲ ಕೊಟ್ಟವರ ಬಳಿ ಮೀಟರ್ ಬಡ್ಡಿ ವಸೂಲಿ ಮಾಡುತ್ತಿದ್ದರು. ಸಾಲ ವಾಪಸ್ ಕೊಡದ ಜನರ ಮನೆಗೆ ಹೋಗಿ ಗಲಾಟೆ ಮಾಡುತ್ತಿದ್ದರು. ಮನೆಯಲ್ಲಿರುವ ಮಹಿಳೆಯರ ಬಳಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು.[ಬೆಂಗಳೂರಲ್ಲಿ ರೌಡಿಗಳ ಕಾಳಗ, ಪರ್ವೇಜ್ ಹತ್ಯೆ]
ಸರಬಂಡೆಪಾಳ್ಯದಲ್ಲಿ ಅಸ್ಗರ್ ಕಿರುಕುಳದ ಕುರಿತು ಜನರು ಅಫ್ಜಲ್ಗೆ ಮಾಹಿತಿ ನೀಡಿದ್ದರು. ಮೂಲತಃ ಸಿದ್ದಾಪುರದ ಅಸ್ಗರ್ ಹಾಗೋ ಅಫ್ಜಲ್ ನಡುವೆ ಹಳೆಯ ದ್ವೇಷವೂ ಇತ್ತು. ಭಾನುವಾರ ಸರಬಂಡೆಪಾಳ್ಯದಲ ಹರಿಕಾಲೋನಿಯಲ್ಲಿರುವ ಮನೆಗೆ ಜಗಳವಾಡಲು ಅಸ್ಗರ್ ಮತ್ತು ಆತನ ಸ್ನೇಹಿತ ಅಸ್ಲಂ ಹೋಗಿದ್ದರು.
ಇಬ್ಬರ ನಡುವೆ ಅಲ್ಲಿ ಜಗಳ ನಡೆದಿದ್ದು, ಆಗ ಅಫ್ಜಲ್ ಸ್ನೇಹಿತರು ರಾಡು ಮತ್ತು ಮಾರಕಾಸ್ತ್ರಗಳಿಂದ ಅಸ್ಗರ್ ಮತ್ತು ಅಸ್ಲಂ ಮೇಲೆ ಹಲ್ಲೆ ಮಾಡಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications