ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಡೆತ್‌ನೋಟ್‌ನಲ್ಲಿತ್ತು ಅಸಲಿ ಕಾರಣ

|
Google Oneindia Kannada News

ಬೆಂಗಳೂರು, ಜನವರಿ 28: ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ಆದರೆ ಘಟನೆ ಕಾರಣವೇನು ಎಂಬುದು ಡೆತ್‌ನೋಟ್ ಮೂಲಕ ಬಹಿರಂಗಗೊಂಡಿದೆ.

ಶಾಲೆಯಲ್ಲಿ ಎಲ್ಲರ ಮುಂದೆ ನನ್ನನ್ನು ನಿಂದಿಸುತ್ತಾರೆ, ತನಗೆ ಹೊಡೆದಿದ್ದಾರೆ ಶಿಕ್ಷಕನ ಕಿರುಕುಳದಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಉತ್ತರಹಳ್ಳಿಯ ನಿವಾಸಿ ಧನುಷ್ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಧನುಷ್ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು.

ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಧನುಷ್ ಓದುತ್ತಿದ್ದ ಶಾಲೆಯ ಶಿಕ್ಷಕ ಬಾಲಕೃಷ್ಣ ಎಂಬವರು ಎಲ್ಲರ ಮುಂದೆ ನಿಂದಿಸಿ, ತನ್ನನ್ನು ಹೊಡೆದರು ಎಂಬ ಕಾರಣಕ್ಕೆ ವಿದ್ಯಾರ್ಥಿ ಮನನೊಂದಿದ್ದನು. ಅಲ್ಲದೇ ಶಿಕ್ಷಕನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

class x student hangs self, blames teacher in suicide note

ಸಾಲದ ಹೊರೆ: ಮಂಡ್ಯದಲ್ಲಿ ಜೆಡಿಎಸ್ ಮುಖಂಡ ಆತ್ಮಹತ್ಯೆ ಸಾಲದ ಹೊರೆ: ಮಂಡ್ಯದಲ್ಲಿ ಜೆಡಿಎಸ್ ಮುಖಂಡ ಆತ್ಮಹತ್ಯೆ

ಸದ್ಯ ಈ ಘಟನೆ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದು, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ. ಮಗನಿಗೆ ಶಿಕ್ಷಕ ನೀಡುತ್ತಿದ್ದ ಹಿಂಸೆಯ ಬಗ್ಗೆ ತಿಳಿದ ಪೋಷಕರು ಇದೀಗ ಕಣ್ಣೀರಿಡುತ್ತಿದ್ದಾರೆ, ಆದರೆ ಮಗ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾನೆ. ಮಗನ ಸಾವಿಗೆ ಕಾರಣವಾದ ಶಿಕ್ಷಕನನ್ನು ಬಂಧಿಸಬೇಕೆಂದು ಪೋಷಕರು ಆಗ್ರಹಿಸುತ್ತಿದ್ದಾರೆ.

English summary
A 10 th class student committed suicide, the student death note had blammed one of his schoolteachers for torture and harrassement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X