ಒಂದೇ ವೇದಿಕೆಯಲ್ಲಿ ಕರ್ನಾಟಕ ಮತ್ತು ಹಿಂದೂಸ್ಥಾನಿ ಸಂಗೀತ ಆಲಿಸಿ!
ಬೆಂಗಳೂರಿನ ಸಂಗೀತ ಪ್ರೇಮಿಗಳಿಗೆ ಪ್ರಪ್ರಥಮ ಬಾರಿಗೆ ಕರ್ನಾಟಕ ಮತ್ತು ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವನ್ನು ಗುರು-ಶಿಷ್ಯರೊಡಗೂಡಿ ಅದೂ ಒಂದೇ ವೇದಿಕೆಯಲ್ಲಿ ನಡೆಸಿಕೊಡಲಿದ್ದಾರೆ.
ಬೆಂಗಳೂರು, ಜೂನ್ 01: ಬೆಂಗಳೂರಿನ ಸಂಗೀತ ಪ್ರೇಮಿಗಳಿಗೆ ಪ್ರಪ್ರಥಮ ಬಾರಿಗೆ ಕರ್ನಾಟಕ ಮತ್ತು ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವನ್ನು ಒಂದೇ ವೇದಿಕೆಯಲ್ಲಿ ಆಲಿಸುವ ಅವಕಾಶ ಒದಗಿ ಬಂದಿದೆ. ಗುರು-ಶಿಷ್ಯರೊಡಗೂಡಿ ಸಂಗೀತ ಕಚೇರಿ ನಡೆಸಿಕೊಡಲಿದ್ದಾರೆ.
ಸುನಾದ ಆರ್ಟ್ಸ್ ಫೌಂಡೇಶನ್ ಹಾಗೂ ಸಮನ್ವಯ ಕಲಾಕೇಂದ್ರ, ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 3ರಂದು ಶನಿವಾರ ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ಬನಶಂಕರಿ 2ನೇ ಹಂತದಲ್ಲಿರುವ ಅವರ್ ಸ್ಕೂಲ್ ಆವರಣದಲ್ಲಿ ನಡೆಯಲಿದೆ.

ನಿರಂತರವಾಗಿ ಹನ್ನೆರಡು ಗಂಟೆಗಳ ಕಾಲ ಎರಡೂ ಪ್ರಕಾರಗಳಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲಾಗಿದೆ.
ಈ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಕಲಾವಿದರುಗಳಾದ ಕರ್ನಾಟಕ ಕಲಾಶ್ರೀ ತಿರುಮಲೆ ಶ್ರೀನಿವಾಸ್, ಪಂಡಿತ್ ಡಾ. ನಾಗರಾಜರಾವ್ ಹವಾಲ್ದಾರ್, ಗಾನಕಲಾಶ್ರೀ ಆನೂರು ಅನಂತಕೃಷ್ಣ ಶರ್ಮ, ವಿದುಷಿ ಗೀತಾ ರಮಾನಂದ್, ವಿದ್ವಾನ್ ವಿ.ಗೋಪಾಲ್, ವಿದ್ವಾನ್ ಆನೂರು ದತ್ತಾತ್ರೇಯ ಶರ್ಮ, ಪಂಡಿತ್ ಪರಮೇಶ್ವರ ಹೆಗಡೆ, ಪಂಡಿತ್ ರವೀಂದ್ರ ಯಾವಗಲ್, ಸಂಗೀತ ಕಲಾರತ್ನ ಎ.ವಿ.ಆನಂದ್, ಕೌಶಿಕ್ ಐತಾಳ್, ವಿದ್ವಾನ್ ಎಸ್.ಶಂಕರ್, ವಿದುಷಿ ಚಾರುಲತಾ ರಾಮಾನುಜಂ, ಮುಂತಾದ ನಲವತ್ತಕ್ಕೂ ಹೆಚ್ಚು ಮಂದಿ ಭಾಗವಹಿಸಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications