ಆಮ್ನೆಸ್ಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಆಸ್ಕರ್ ಪುತ್ರಿ!
ಬೆಂಗಳೂರು, ಆಗಸ್ಟ್ 22 : ರಾಜದ್ರೋಹದ ಆರೋಪ ಎದುರಿಸುತ್ತಿರುವ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಕ್ಲಿನ್ ಚಿಟ್ ನೀಡಿವುದು ವಿವಾದಕ್ಕೆ ಕಾರಣವಾಗಿವೆ. ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಪುತ್ರಿ ಸಂಸ್ಥೆ ಜೊತೆ ಕೆಲಸ ಮಾಡುತ್ತಿರುವುದು ಈಗ ಬಹಿರಂಗವಾಗಿದೆ.
'ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಗೆ ದೇಶದ್ರೋಹದ ಇತಿಹಾಸವಿಲ್ಲ, ಆ ಸಂಸ್ಥೆ ಆಯೋಜಿಸಿದ್ದ ಸಭೆಯಲ್ಲಿ ತಪ್ಪೇನಿಲ್ಲ, ಸೈನಿಕರದ್ದೂ ತಪ್ಪಿರಬಹುದು' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನೀಡಿರುವ ಹೇಳೀಕೆ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.[ರಾಜದ್ರೋಹ ಪ್ರಕರಣದ ಬಗ್ಗೆ ಸಂತೋಷ್ ಹೆಗ್ಡೆ ಹೇಳುವುದೇನು?]

ಸಂಸ್ಥೆಗೆ ಪರಮೇಶ್ವರ ಅವರಿ ಕ್ಲಿನ್ ಚಿಟ್ ನೀಡಲು ಆಸ್ಕರ್ ಫರ್ನಾಂಡೀಸ್ ಅವರ ಪುತ್ರಿ ಅಲ್ಲಿ ಕೆಲಸ ಮಾಡುತ್ತಿರುವುದೇ ಕಾರಣ ಎಂದು ಸಾಮಾಜಿಕ ಜಾಲ ತಾಣದಲ್ಲಿ ಟ್ವಿಟ್ಗಳು ಹರಿದಾಡುತ್ತಿವೆ.[ಸೈನಿಕರೂ ತಪ್ಪು ಮಾಡಿರಬಹುದು: ಅಮ್ನೆಸ್ಟಿಗೆ ರಾಜ್ಯದಲ್ಲಿ ರೆಡ್ ಕಾರ್ಪೆಟ್]
ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯೆ ಪ್ರೀತಿ ಗಾಂಧಿ ಮಾಡಿರುವ ಟ್ವಿಟ್ ಆಸ್ಕರ್ ಫರ್ನಾಂಡೀಸ್ ಪುತ್ರಿ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯಲ್ಲಿ Advocacy Officer ಆಗಿ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿದೆ.[ಆಮ್ನೆಸ್ಟಿ ಸಂಸ್ಥೆ ಪರಿಚಯ]
ಆಸ್ಕರ್ ಫರ್ನಾಂಡೀಸ್ ಪುತ್ರಿ 2013ರಿಂದ ಅಂದರೆ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ, ಕಾಂಗ್ರೆಸ್ ಸರ್ಕಾರ ಸಂಸ್ಥೆಗೆ ಕ್ಲಿನ್ ಚಿಟ್ ನೀಡಲು ಹೊರಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗುತ್ತಿದೆ.
ಬಿಜೆಪಿ ನಾಯಕರಾದ ಅನಂತ್ ಕುಮಾರ್ ಮತ್ತು ಅರುಣ್ ಜೇಟ್ಲಿ ಅವರು ಸಹ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾಗೆ ಕ್ಲಿನ್ ಚಿಟ್ ನೀಡುವುದನ್ನು ಪ್ರಶ್ನಿಸಿದ್ದಾರೆ. ದೇಶವಿರೋಧಿ ಘೋಷಣೆ ಕೂಗಲು ಅವಕಾಶವಿಲ್ಲ ಎಂದು ನಾಯಕರು ಸ್ಪಷ್ಟಪಡಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ












Click it and Unblock the Notifications