ಪ್ರೇಯಸಿಗಾಗಿ ಕಳ್ಳತನ ಮಾಡುತ್ತಿದ್ದ ಕ್ಲೀನರ್ ಸಿಕ್ಕಿಬಿದ್ದಿದ್ಹೇಗೆ?
ಬೆಂಗಳೂರು, ಜುಲೈ 26: ಪ್ರೇಯಸಿಗಾಗಿ ಕದಿಯುವುದನ್ನೇ ಹವ್ಯಾಸ ಮಾಡಿಕೊಂಡಿದ್ದ ಕ್ಲೀನರ್ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.
ತಾನು ಇಷ್ಟ ಪಟ್ಟಿದ್ದ ಪ್ರೇಯಸಿಗೆ ಹೊಸದೊಂದು ಮನೆ ಮಾಡಿ ಇರುವ ಉದ್ದೇಶದಿಂದ ಸರಗಳ್ಳತನಕ್ಕೆ ಇಳಿದಿದ್ದ ಹೋಟೆಲ್ ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದಾರೆ.
ಹೋಟೆಲ್ ಒಂದರಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದ ರಾಜು ಬಂಧಿತ ಆರೋಪಿ. ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದ ಮಹಿಳೆಯನ್ನು ರಾಜು ಇಷ್ಟಪಟ್ಟಿದ್ದ. ಪತಿ ಇಲ್ಲದ ಕಾರಣದಿಂದ ಆಕೆ ಆತನನ್ನು ಒಪ್ಪಿಕೊಂಡಿದ್ದಳು.

ತನ್ನನ್ನು ಕರೆದುಕೊಂಡು ಹೋಗಿ ಪ್ರತ್ಯೇಕ ಮನೆ ಮಾಡುವಂತೆ ಆ ಮಹಿಳೆ ಹೇಳಿದ್ದಳು. ಅದಕ್ಕಾಗಿ ಹಣ ಹೊಂದಿಸಲಾಗದೆ ಆತ ಸರಗಳ್ಳತನಕ್ಕಿಳಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ಸರಗಳ್ಳತನ ಮಾಡುತ್ತಿದ್ದುದಲ್ಲದೆ, ಒಂಟಿಯಾಗಿ ನಡೆದು ಹೋಗುವವರ ಕೈಯಿಂದ ಮೊಬೈಲ್ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ ಎನ್ನುವ ಸಂಗತಿಯೂ ವಿಚಾರಣೆ ವೇಳೆ ತಿಳಿದುಬಂದಿದೆ.
ರಾಜು ಬಳಿ ಬೈಕ್ ಕೂಡ ಇರಲಿಲಲ್. ಹೀಗಾಗಿ ಸರಗಳ್ಳತನಕ್ಕೆ ಇಳಿಯಲು ಮೊದಲಿಗೆ ಹೆದರಿದ್ದ, ಸರ ಕದ್ದು ಓಡುವಾಗ ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಆತಂಕವೂ ಇತ್ತು.
ಕೆಲ ಕಾಲ ಈತನಿಗೆ ಸಿಟಿ ಮಾರ್ಕೆಟ್ ಪ್ರದೇಶವೇ ಅನುಕೂಲವಂತೆ ಕಾಣಿಸಿತ್ತು. ಸಣ್ಣ ಪುಟ್ಟ ಗಲ್ಲಿಗಳಲ್ಲಿ ಸುಲಭವಾಗಿ ತಪ್ಪಿಸಿಕೊಳ್ಳಬಹುದು ಎಂದು ತಿಳಿದಿದ್ದ, ಕತ್ತಲಾಗುತ್ತಿದ್ದಂತೆ ತನ್ನ ಕಸುಬಿಗೆ ಇಳಿಯುತ್ತಿದ್ದ. ಆದರೆ ಪೊಲೀಸರ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಆಗಲಿಲ್ಲ. ಹೀಗೆ ಕದ್ದೋಡುವಾಗ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications