ಕಸ ಕಿತ್ತಾಟ: ಬಿಬಿಎಂಪಿ ವಿರುದ್ಧ ಸ್ವಯಂಪ್ರೇರಿತ ದೂರು
ಬೆಂಗಳೂರು, ಜೂ.16: ಮಂಡೂರು ತಾಜ್ಯ ವಿಲೇವಾರಿ ಘಟಕದ ಸಮಸ್ಯೆಯನ್ನು ನಿಭಾಯಿಸುವಲ್ಲಿ ವಿಫಲವಾದ ಬಿಬಿಎಂಪಿ ಮತ್ತು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಕಳೆದ ವಾರ ಭೇಟಿ ನೀಡಿ ಪರಿಶೀಲಿಸಿದ್ದ ಉಪಲೋಕಾಯುಕ್ತ ನ್ಯಾ. ಮಜಗೆ ಜೂ.16 ಸೋಮವಾರ ಮತ್ತೊಮ್ಮೆ ಮಂಡೂರಿಗೆ ತೆರಳಿ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದರು.[ಮಂಡೂರು: ಪ್ರಾಣ ಕೊಟ್ಟೇವು, ಕಸ ಹಾಕಲು ಬಿಡೆವು]
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪಲೋಕಾಯುಕ್ತರು' ಮಂಡೂರು ಜನರ ಕಷ್ಟ ನನಗೆ ಅರ್ಥವಾಗಿದೆ. ಸಮಸ್ಯೆ ನಿವಾರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಹೀಗಾಗಿ ನಾವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದೇವೆ. ಬಿಬಿಎಂಪಿ ಮತ್ತು ಅಧಿಕಾರಿಗಳ ವಿರುದ್ಧ ಹತ್ತು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿಕೊಡಬೇಕು ಎಂದು ಹೇಳಿದರು.

ಮಂಡೂರಿನಲ್ಲಿ ಅಮರಣಾಂತ ಉಪವಾಸ ಕೈಗೊಂಡು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಮಂಡೂರು ಜನರ ಪರವಾಗಿ ಪ್ರತಿಭಟನೆ ನಡೆಯಿತು. ಟೌನ್ ಹಾಲ್ ಸಮೀಪ ಭ್ರಷ್ಟಾಚಾರ ನಿರ್ಮೂಲನ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ, ಆಮ್ ಆದ್ಮಿ ಪಕ್ಷದ ನಾಯಕಿ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಎಎಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಸಿಎಂ ಗರಂ: ಸರ್ಕಾರದಿಂದ ಎಲ್ಲಾ ಸೌಲಭ್ಯ ಪಡೆದುಕೊಳ್ಳುವ ನೀವು ನಗರದ ಕಸ ಸಮಸ್ಯೆಯನ್ನು ಬಗೆಹರಿಸಲು ನಿಮಗೇನು ಕಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳನ್ನು ಇಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಯವರು ಬಿಬಿಎಂಪಿ ಅಧಿಕಾರಿಗಳ ಕೆಲಸದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕಿದರು. ನಿಮಗೆ ಕಾರು, ಮೊಬೈಲ್, ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಿದ್ದೇವೆ. ಆದರೂ ಕಸದ ಸಮಸ್ಯೆ ಏಕೆ ಬಗೆಹರಿದಿಲ್ಲ ಎಂದು ಅಧಿಕಾರಿಗಳನ್ನು ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.
ಬಿಬಿಎಂಪಿಯಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ಪಟ್ಟಿಯನ್ನು ಕಳುಹಿಸಿ ಕೊಡಿ. ಅವರ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಕ್ತ ಲಕ್ಷ್ಮೀನಾರಾಯಣ್ ಅವರಿಗೆ ಹೇಳಿದ್ದಾರೆ.[ಜಾತಿ ವಿಷಯ ಪ್ರಸ್ತಾಪಿಸಿ ಹೆದರಿಸುತ್ತಾರೆ: ಮೇಯರ್]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications