ಬೆಂಗಳೂರಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿಲ್ಲದ ನಾಮಫಲಕಗಳ ತೆರವು
ಬೆಂಗಳೂರು, ಡಿಸೆಂಬರ್ 18: ಬೆಂಗಳೂರು ನಗರದಲ್ಲಿರುವ ಉದ್ದೆಮೆಗಳು, ಅಂಗಡಿ ಮುಂಗಟ್ಟುಗಳಲ್ಲಿ ಶೇ. 60 ರ ಪ್ರಮಾಣದಲ್ಲಿ ಕನ್ನಡ ಬಳಕೆವಿಲ್ಲದ ನಾಮಫಲಕ ತೆರವುಗೊಳಿಸುವ ಕಾರ್ಯವನ್ನು ಬಿಬಿಎಂಪಿ ಕೈಗೆತ್ತಿಕೊಂಡಿದೆ.
ಕನ್ನಡ ಅಭಿವೃದ್ದಿ ಪ್ರಾಧಿಕಾರ ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಉದ್ಯಮ ಮಳಿಗೆಗಳು ಹಾಗೂ ಅಂಗಡಿಗಳ ಮುಂದೆ ಶೇ. 60 ರಷ್ಟು ಕನ್ನಡ ಅಕ್ಷರಗಳು ಬಿಂಬಿತವಾಗಿರುವ ನಾಮಫಲಕಗಳನ್ನು ಅಳವಡಿಸಲು ಅಕ್ಟೋಬರ್ 20 ರಂದು ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿತ್ತು.
ಆದೇಶದ ಹಿನ್ನೆಲೆಯಿಂದಾಗಿ ಉದ್ದಿಮೆಗಳ ನವೀಕರಣ ಹಾಗೂ ಹೊಸ ಉದ್ದಿಮೆಗಳ ಪರವಾನಗಿ ಕೊಡುವುದನ್ನು ನಿಲ್ಲಿಸಲಾಗಿತ್ತು. ಬೆಂಗಳೂರು ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಉದ್ದಿಮೆಗಳಿಗೆ ಕನ್ನಡ ನಾಮಫಲಕ ಅಳವಡಿಸಲು ನೋಟಿಸ್ ನೀಡಲಾಗಿತ್ತು.

ಕನ್ನಡ ನಾಮಫಲಕ ಅಳವಡಿಸಲು ನೋಟಿಸ್ ನೀಡಿ 2 ತಿಂಗಳು ಕಳೆದರೂ ನಿರ್ಲಕ್ಷ್ಯ ಮಾಡಿದ ಅಂಗಡಿ, ಉದ್ದೆಮೆಗಳ ಮಾಲೀಕರಿಗೆ ಬಿಬಿಎಂಪಿ ನಾಮಫಲಕಗಳನ್ನು ತೆರವು ಮಾಡುವುದರ ಮೂಲಕ ಬಿಸಿ ಮುಟ್ಟಿಸಿದೆ. ಮಂನಗಳವಾರ ಮಹದೇವಪುರ ವ್ಯಾಪ್ತಿಯ 86 ನೇ ವಾರ್ಡ್ ನ ವಾಣಿಜ್ಯ ಮಳಿಗೆಗಳ ನಾಮಫಲಕ ತೆರವುಗೊಳಿಸಿದರು.
ಬುಧವಾರದಿಂದ ಜಯನಗರ ವ್ಯಾಪ್ತಿಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕ ತೆರವು ಕಾರ್ಯಾಚರಣೆ ಮಾಡುವುದಾಗಿ ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications