ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಎಚ್ಡಿಕೆ ಮನವಿ
Recommended Video
ಬೆಂಗಳೂರು, ಸೆಪ್ಟೆಂಬರ್ 12: ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ತಯಾರಿಸಿದ ಗಣೇಶ ಮೂರ್ತಿ ಮಾರಕವಾಗಿದ್ದು ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಕೆ ಮಾಡಿ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅದ್ದೂರಿ ಸ್ವರ್ಣಗೌರಿ ವ್ರತಕ್ಕೆ 16 ಸಲಹೆ: ಚಿತ್ರಮಾಹಿತಿ
ಪಿಓಪಿ ಗಣಪ ಮೂರ್ತಿ ಮಾರಕವಾಗಿದ್ದು ಹಾಗಾಗಿ ಮನೆಯಲ್ಲಿಯೇ ಮಣ್ಣಿನ ಗಣೇಶನ ಮೂರ್ತಿ ತಯಾರಿಸಿ ಪೂಜಿಸಿ, ಕೆರೆಗಳು ಅಥವಾ ನದಿಗಳಲ್ಲಿ ಗಣಪತಿ ವಿಸರ್ಜನೆ ಮಾಡಬೇಡಿ, ಬದಲಾಗಿ ನಿಮ್ಮ ಮನೆಗಳಲ್ಲೇ ಗಣಪತಿ ವಿಸರ್ಜನೆ ಮಾಡಿ ಎಂದು ಕುಮಾರಸ್ವಾಮಿ ಕರೆ ನೀಡಿದ್ದಾರೆ.
ವಿಸರ್ಜನೆಯ ಬಳಿಕವೂ ಗಿಡವಾಗಿ ನೆಲೆ ನಿಲ್ಲುವ ಪರಿಸರ ಸ್ನೇಹಿ ಗಣಪ
ಗೌರಿ - ಗಣೇಶನನ್ನು ಬರಮಾಡಿಕೊಳ್ಳಲು ಸಜ್ಜಾದ ಸಾಂಸ್ಕೃತಿಕ ನಗರಿ
ಗಣಪತಿ ಮೂರ್ತಿಯನ್ನು ವಿಸರ್ಜನೆ ಬಳಿಕ ಆ ನೀರನ್ನು ಗಿಡಗಳಿಗೆ ಹಾಕಿ ಪರಿಸರ ಉಳಿಸುವ ನಿಟ್ಟಿನಲ್ಲಿ ಸಹಕರಿಸಿ ಎಂದು ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಪಿಓಪಿ ಗಣಪತಿಯನ್ನು ನದಿಯಲ್ಲಿ ವಿಸರ್ಜನೆ ಮಾಡಿದರೆ ಅಲ್ಲಿರುವ ನೀರು ಸಂಪೂರ್ಣವಾಗಿ ಕಲುಷಿತಗೊಳ್ಳುತ್ತದೆ, ಅಷ್ಟೇ ಅಲ್ಲದೆ ಜಲಚರಗಳು ಸಾವನ್ನಪ್ಪುತ್ತದೆ. ಹಾಗಾಗಿ ಈ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಎಂದಿದ್ದಾರೆ.